Thursday, March 19, 2026
Thursday, March 19, 2026

Poorna Prajna School ಓದು & ಕ್ರೀಡೆ ಎರಡನ್ನೂ ಸಮಾನ ಸ್ವೀಕರಿಸಿ- ಶ್ರೀಕೃಷ್ಣ ಉಪಾಧ್ಯಾಯ

Date:

Poorna Prajna School ಭದ್ರಾವತಿ,ನ.22, ದೈಹಿಕ ಶಿಕ್ಷಣ ಶಿಕ್ಷಕರು ಸಂಸ್ಥೆಯ ಆಧಾರಸ್ಥಂಭ ವಿದ್ದ ಆಗೆ, ಶಾಲೆಗಳಲ್ಲಿ ಮಕ್ಕಳಿಗೆ ದೈಹಿಕ ಶಿಕ್ಷಣ ಶಿಕ್ಷಕರು ಅಂದರೆ ಬಹಳ ಅಚ್ಚುಮೆಚ್ಚು ಎಂದು ಪೂರ್ಣಪ್ರಜ್ಞಾ ಶಾಲೆಯ ಸಹ ಕಾರದರ್ಶಿಯಾದ ಪ್ರೊಫೆಸರ್ ಶ್ರೀ ಕೃಷ್ಣ ಉಪಾಧ್ಯಾಯರು ಅಭಿಪ್ರಾಯ ಪಟ್ಟರು.
ಅವರು ಭದ್ರಾವತಿಯ ಪೂರ್ಣ ಪ್ರಜ್ಞಾ ಶಾಲೆಯಲ್ಲಿಇಂದಿನಿಂದ ಎರಡು ದಿನ ನಡೆಯಲಿರುವ ಅಂತರ್ ಪ್ರಾಥಮಿಕ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಭಾಗವಹಿಸಿ ಮಾತನಾಡುತ್ತಾ,ತಮ್ಮ ಜೀವನದಲ್ಲಿ ಓದಿನ ಜೊತೆಗೆ ಶಿಸ್ತು ಅನ್ನುವಂತದ್ದು ಬಹಳ ಮುಖ್ಯ, ಓದು ಮತ್ತು ಕ್ರೀಡೆ ಎರಡನ್ನು ಸಮಾನವಾಗಿ ಸ್ವೀಕರಿಸಿ, ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಬಹುದು ಎಂದು ತಿಳಿಸಿದರು.
ರಾಷ್ಟ್ರ ಪ್ರಶಸ್ತಿ ಶಿಕ್ಷಕ, ದೈಹಿಕ ಶಿಕ್ಷಣ ಶಿಕ್ಷಕ, ಶಿವಲಿಂಗೇಗೌಡ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ,
ಓದಿನ ಜೊತೆಗೆ ಕ್ರೀಡೆಗೂ ಹೆಚ್ಚು ಒತ್ತು ಕೊಟ್ಟಾಗ ಕ್ರೀಡೆ ಬೆಳೆಯಲು ಸಾಧ್ಯವಾಗುತ್ತದೆ.
Poorna Prajna School ಕ್ರೀಡೆಯಲ್ಲಿ ಕ್ರೀಡಾ ಮನೋಭಾವದಿಂದ ಭಾಗವಹಿಸಿ, ಸೋಲು – ಗೆಲುವನ್ನು ಸಮಾನವಾಗಿ ಸ್ವೀಕರಿಸಿ,ನಿರಂತರ ಅಭ್ಯಾಸದಿಂದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.
ಮನಸ್ಸು ಮತ್ತು ದೇಹದ ಬೆಳವಣಿಗೆಯು ಸಮಾನವಾಗಿ ಬೆಳೆಯಲು ಕ್ರೀಡೆ ಸಹಕಾರಿ ಎಂಬುದು ನಮಗೆಲ್ಲರಿಗೂ ತಿಳಿದಿದೆ.
ಆಟಗಳು ಮತ್ತು ಕ್ರೀಡೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿದೆ, ಅದಕ್ಕಾಗಿಯೇ ದೈಹಿಕ ತರಬೇತಿ, ವ್ಯಾಯಾಮ ಮತ್ತು ಆಟಗಳಿಲ್ಲದೆ – ಶಿಕ್ಷಣವು ಅಪೂರ್ಣವಾಗಿರುತ್ತದೆ. ಅಲ್ಲದೆ, ಶಿಕ್ಷಣದ ಜೊತೆಗೆ, ಆಟಗಳು ಸಹ ನಮ್ಮೆಲ್ಲರನ್ನೂ ಎದ್ದು ನಿಲ್ಲಲು ಮತ್ತು ಜೀವನದ ಎಲ್ಲಾ ಕಠಿಣ ಸವಾಲುಗಳನ್ನು ಎದುರಿಸಲು ಸಿದ್ಧಗೊಳಿಸುತ್ತವೆ. ಆಟಗಳನ್ನು ಆಡುವಾಗ, ವಿದ್ಯಾರ್ಥಿಗಳು ಆಮ್ಲಜನಕದ ಉತ್ತಮ ಸೇವನೆಯನ್ನು ತೆಗೆದುಕೊಳ್ಳುತ್ತಾರೆ, ಅವರ ರಕ್ತ ಪರಿಚಲನೆ ಹೆಚ್ಚಾಗುತ್ತದೆ ಎಂದರು.
ಪೂರ್ಣಪ್ರಜ್ಞ ಶಾಲೆಯ ಕಾರ್ಯದರ್ಶಿಯಾದ ಡಾ.ವಿನೀತ್ ಆನಂದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಅಮರೇಗೌಡ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ, ಜಯಶ್ರೀ , ವಿಜಯಲಕ್ಷ್ಮಿ, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...