Thursday, June 18, 2026
Thursday, June 18, 2026

Chamber of Commerce Shivamogga ಜಂಕ್ ಫುಡ್, ಫಾಸ್ಟ್ ಫುಡ್ ಗಳಿಂದ ಅನಾರೋಗ್ಯ.ಆಯುರ್ವೇದ ಮದ್ದು ಇವಕ್ಕೆ ಪರಿಹಾರ- ಜಿ.ವಿಜಯ್ ಕುಮಾರ್

Date:

Chamber of Commerce Shivamogga ಸಾವಿರಾರು ವರ್ಷ ಇತಿಹಾಸವಿರುವ ಆಯುರ್ವೇದ ಪದ್ಧತಿ ಇಂದಿಗೂ ಪ್ರಸ್ತುತ. ಸೊಪ್ಪು, ತರಕಾರಿ ಹಾಗೂ ಔಷಧ ಗುಣವಿರುವ ಪದಾರ್ಥಗಳು ನಮ್ಮ ಜಮೀನು, ತೋಟ ಹಾಗೂ ನಮ್ಮ ಮನೆಗಳಲ್ಲೇ ಸಾಕಷ್ಟು ಇರುತ್ತವೆ. ಆದರೆ ಅವುಗಳ ಗುಣ ಪರಿಚಯ ನಮಗೆ ಸರಿಯಾಗಿ ಇರುವುದಿಲ್ಲ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ವಿಷಾಧ ವ್ಯಕ್ತಪಡಿಸಿದರು.

ಅವರು ಜೆಸಿಐ ಶಿವಮೊಗ್ಗ ವಿವೇಕ ವತಿಯಿಂದ ಆಯೋಜಿಸಲಾಗಿದ್ದ ಉಚಿತ ಯೋಗ ಪ್ರಾಣಯಾಮ, ಧ್ಯಾನ, ‘ಆಯುರ್ವೇದದಲ್ಲಿ ಮನೆ ಮದ್ದು’ ಏಳು ದಿನದ ವಿಶೇಷ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಹಾಗಾಗಿ ಹಿಂದೆ ಋಷಿಮುನಿಗಳು ಸಾಧುಸಂತರು ಕಾಡುಗಳಲ್ಲಿ ಸಿಗುವ ನಾರು ಬೇರು ಔಷಧಿಗುಣ ಇರುವ ಸಸ್ಯಗಳನ್ನು ಬಳೆಸಿ ನೂರಾರು ವರ್ಷ ಯಾವುದೇ ಕಾಯಿಲೆ ಇಲ್ಲದೆ ಸುಖಕರ ಜೀವನ ನಡೆಸುತ್ತಿದ್ದರು. ಇಂದು ನಮ್ಮ ಬದಲಾದ ಜೀವನ ಶೈಲಿ ಆರೋಗ್ಯ ಪದ್ಧತಿ, ಫಾಸ್ಟ್ ಫುಡ್, ಜಂಕ್ ಫುಡ್ ಮತ್ತು ರಾಸಾಯನಿಕ ಸಂಪಡಿಸಿದ ಅಡುಗೆ ಪದಾರ್ಥಗಳಿಂದ ನಮ್ಮ ಜೀವನ ದುರಸ್ತವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಡಾ. ವಿಜಯಲಕ್ಷ್ಮಿ ಪಾಟೀಲ್ ಮಾತನಾಡಿ, ವಾತಾ ಪಿತ್ತ, ಪ್ರಕೃತಿ, ಆಹಾರ ಪದ್ಧತಿ ಹಾಗೂ ಆಹಾರ ಸೇವನೆ ಮತ್ತು ಸಸ್ಯಗಳಲ್ಲಿ ಔಷಧಿಗುಣ ಹಾಗೂ ಶಿಬಿರಾರ್ಥಿಗಳ ಹಲವಾರು ಸಮಸ್ಯೆಗಳಿಗೆ, ಪ್ರಶ್ನೆಗಳಿಗೆ ಉತ್ತರಿಸಿ, ಒಂದು ವಾರಗಳ ಕಾಲ ಪ್ರತಿಯೊಂದು ಕಾಯಿಲೆ ಗುಣಲಕ್ಷಣ ಹಾಗೂ ಪರಿಹಾರ ಮತ್ತು ಮುನ್ನೆಚ್ಚರಿಕೆಗಳ ಬಗ್ಗೆ ಸವಿಸ್ತಾರವಾಗಿ ವಿವರಿಸುವುದರ ಜೊತೆಗೆ ಯಾವ ಯಾವ ಯೋಗ, ಪ್ರಾಣಯಾಮ ಧ್ಯಾನಗಳು ನಮ್ಮ ಶರೀರಕ್ಕೆ ಅಗತ್ಯ ಎನ್ನುವುದರ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

Chamber of Commerce Shivamogga ಯೋಗ ಶಿಕ್ಷಕರಾದ ಕಾಟನ್ ಜಗದೀಶ್ ಮಾತನಾಡಿ, ನಮ್ಮ ಅಶ್ವತನಗರ 8ನೇ ಕ್ರಾಸ್ ನ ಶಿವಶಕ್ತಿ ಯೋಗ ಮಂದಿರದಲ್ಲಿ ನಿರಂತರವಾಗಿ ಯೋಗದ ಜೊತೆಗೆ ಸಮಾಜಮುಖಿ ಕಾರ್ಯಗಳನ್ನು ಹಾಗೂ ರಾಷ್ಟ್ರೀಯ ಹಬ್ಬಗಳನ್ನು ಆಚರಿಸುವುದರ ಮುಖಾಂತರ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದೇವೆ ಎಂದು ನುಡಿದರು.

ರಾಮಚಂದ್ರಪ್ಪ, ಪ್ರತಿಭಾ ಅಶೋಕ್. ಪ್ರೇಮ್ ಕುಮಾರ. ಮಂಜುಳಾ ಎಸ್.ಟಿ.ಆನಂದ ಹಾಗೂ ಶಿಬಿರಾರ್ಥಿಗಳು ಶಿಬಿರದ ಲಾಭ ಪಡೆದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...