Wednesday, October 2, 2024
Wednesday, October 2, 2024

ವಿದ್ಯಾರ್ಥಿವೇತನ: ಆನ್ ಲೈನ್ ಐಡಿ ಅಲಭ್ಯತೆ ಸಮಸ್ಯೆ

Date:

ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕಾಲೇಜುಗಳೇ ತೊಡಕಾಗಿ ಪರಿಣಮಿಸಿವೆ.
ಎಲ್ಲ ಮಾದರಿಯ ವಿದ್ಯಾರ್ಥಿವೇತನಗಳನ್ನು ಒಂದೆಡೆ ತರುವ ಉದ್ದೇಶದಿಂದ ರಾಜ್ಯ ವಿದ್ಯಾರ್ಥಿವೇತನ ಯೋಜನೆ ( ಎಸ್ ಎಸ್ ಪಿ) ಸ್ಥಾಪಿಸಲಾಗಿದೆ.
ಆದರೆ, ಇಲ್ಲಿ ಅರ್ಜಿ ಸಲ್ಲಿಸಲು ಕಾಲೇಜು ಸೇರ್ಪಡೆಯ ಐ.ಡಿ. ನೀಡಬೇಕು. ಆದರೆ, ಬಹುತೇಕ ವಿದ್ಯಾರ್ಥಿಗಳಿಗೆ ಅಡ್ಮಿಷನ್ ಐ.ಡಿ.ನಂಬರ್ ಗಳೇ ಜನರೇಟ್ ಆಗಿಲ್ಲ. ಹೀಗಾಗಿ ಪ್ರಥಮ ವರ್ಷದ ಪಿಯು, ಡಿಗ್ರಿ ಹಾಗೂ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ತೊಂದರೆ ಯಾಗಿದೆ.
ಪ್ರಥಮ ವರ್ಷದ ಮಕ್ಕಳಿಗೆ ಸಮಸ್ಯೆಯಾಗಿರುವುದು ನಿಜ. ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕಾಗಿ ಕಮಿಟಿ ಸದಸ್ಯರು ಶ್ರಮಿಸುತ್ತಿದ್ದಾರೆ. ವಿದ್ಯಾರ್ಥಿ ವೇತನದ ಅರ್ಜಿ ದಿನಾಂಕ ವಿಸ್ತರಣೆಯಾದರೆ ಇನ್ನಷ್ಟು ಅನುಕೂಲವಾಗಲಿದೆ ಎಂದು ಬಿಡದಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಜಗದಾಂಭ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಬಹಳಷ್ಟು ವಿದ್ಯಾರ್ಥಿಗಳು ಸೈಬರ್ ಗಳಿಗೆ ತೆರಳಿ ಆನ್ಲೈನ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಯತ್ನಿಸುತ್ತಿದ್ದಾರಾದರೂ ಕಾಲೇಜು ಅಡ್ಮಿಷನ್ ಐ.ಡಿ. ಇಲ್ಲದೆ ಇವರ ಅರ್ಜಿಯನ್ನು ಪೋರ್ಟಲ್ ಸ್ವೀಕರಿಸುತ್ತಿಲ್ಲ. ಇದರಿಂದ ಅನಗತ್ಯವಾಗಿ ಸೈಬರ್ ಗೆ ಶುಲ್ಕ ನೀಡುವ ಜೊತೆಗೆ ಅರ್ಜಿ ಸಲ್ಲಿಕೆಯಾಗಿ ಸ್ಕಾಲರ್ಶಿಪ್ ಕಳೆದುಕೊಳ್ಳುವ ಆತಂಕ ವಿದ್ಯಾರ್ಥಿಗಳದ್ದಾಗಿದೆ.
ರಾಜ್ಯದಲ್ಲಿ 8,71,443 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಇದರಲ್ಲಿ ಬಹುತೇಕರು ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದಾರೆ. ಎಸ್ಸೆಸ್ಸೆಲ್ಸಿಯಲ್ಲಿನ ವಿವರ ಆಧರಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲಿವೆ. ಕುಟುಂಬದ ವಾರ್ಷಿಕ ಆದಾಯದ ಮೇಲೆ ಸ್ಕಾಲರ್ ಶಿಪ್ ಬಿಡುಗಡೆಯಾಗಲಿದೆ. ಇದನ್ನು ಪಿಯುಸಿ, ಡಿಗ್ರಿ, ಉನ್ನತ ಶಿಕ್ಷಣ ಪಡೆಯುವ ವರೆಲ್ಲರೂ ಪಡೆಯಬಹುದು. ಮೊದಲ ವರ್ಷ ಕಾಲೇಜಿಗೆ ಸೇರುವಾಗ ನೀಡುವ ಅಡ್ಮಿಷನ್ ನಂಬರ್ ಅನ್ನು ಅರ್ಜಿಯೊಂದಿಗೆ ಆನ್ ಲೈನ್ ನಲ್ಲಿ ಸಲ್ಲಿಸಬೇಕು. ಆದರೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಅಡ್ಮಿಷನ್ ಐ.ಡಿ. ಇನ್ನು ಕ್ರಿಯೇಟ್ ಆಗಿಲ್ಲ.
ಈ ಹಿಂದೆ ಎಸ್ ಎಸ್ ಪಿ ಅಡಿ ಅರ್ಜಿ ಸಲ್ಲಿಸಲು ನವೆಂಬರ್ ವರೆಗೂ ಅವಕಾಶ ನೀಡಲಾಗಿತ್ತು. ಕಾಲೇಜುಗಳು ತಡವಾಗಿ ಪ್ರಾರಂಭವಾದ್ದರಿಂದ ಡಿ.31ರವರೆಗೆ ಗಡುವು ನೀಡಲಾಗಿದೆ. ಆದರೆ, ಈವರೆಗೂ ಪೂರ್ಣಪ್ರಮಾಣದಲ್ಲಿ ಅಡ್ಮಿಶನ್ ಐ.ಡಿ. ಕ್ರಿಯೇಟ್ ಆಗಿಲ್ಲ. ಇದರಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ಶಿಷ್ಯ ವೇತನದಿಂದ ವಂಚಿತರಾಗುವ ಸಾಧ್ಯತೆ ಇದೆ. ಹೀಗಾಗಿ, ಕಾಲೇಜುಗಳು ಕೂಡಲೇ ಐ.ಡಿ. ಕ್ರಿಯೇಟ್ ಮಾಡಬೇಕು. ಇಲ್ಲವೇ, ಇನ್ನು ಕೆಲವು ದಿನಗಳವರೆಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು ಎನ್ನುವುದು ವಿದ್ಯಾರ್ಥಿಗಳ ಮನವಿಯಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.


Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...