Monday, March 23, 2026
Monday, March 23, 2026

ಶಿವಮೊಗ್ಗ ಯಕ್ಷಗಾನ ರಸಿಕರ ಪ್ರೋತ್ಸಾಹಕ್ಕೆ ಸಾಟಿಯಿಲ್ಲ- ಕೆಳಮನೆ ರಾಮರಾಯರು

Date:

ಸಾಗರದ ಹೆಗ್ಗೋಡಿನ ಸಾಕೇತ ಕಲಾವಿದರಿಂದ
ಭೀಷ್ಮಪರ್ವ ಯಕ್ಷಗಾನ ಪ್ರಸಂಗ ಪ್ರದರ್ಶನ ನಡೆಯಿತು. ಸುಮಾರು ನಲವತ್ತಕ್ಕೂ ಹೆಚ್ಚು ವರ್ಷಗಳಿಂದ ಹವ್ಯಾಸಿಗಳೇ ತಂಡದ ಸದಸ್ಯರಾಗಿ, ಸಮರ್ಥವಾಗಿ ಯಕ್ಷರಂಗದ ಸೇವೆಯನ್ನ ಮಾಡಿಕೊಂಡು ಬರುತ್ತಿರುವ ಸಾಕೇತ ಕಲಾವಿದರು ವೈವಿಧ್ಯ ಪೂರ್ಣ ಪ್ರಸಂಗಗಳ ಪ್ರದರ್ಶನಕ್ಕೆ ಹೆಸರುವಾಸಿಯಾಗಿದ್ದಾರೆ.

ಶಿವಮೊಗ್ಗದಲ್ಲಿ ಡಿಸೆಂಬರ್ ಏಳರಂದು “ಭೀಷ್ಮ ಪರ್ವ” ಯಕ್ಷಗಾನ ಪ್ರದರ್ಶನ ನಡೆಯಿತು.
ಸ್ಥಳೀಯ ಸಾಕೇತದ ಮಿತ್ರರ ಬಳಗ ಈ ಪ್ರದರ್ಶನವನ್ನ ಶಿವಮೊಗ್ಗದ ಸುವರ್ಣ ಸಂಸ್ಕೃತಿ ಭವನದಲ್ಲಿ ಆಯೋಜಿಸಿತ್ತು.
ಮಿತ್ರರ ಪರವಾಗಿ
ಹಿರಿಯ ಲೇಖಕ ಲಕ್ಷ್ಮೀನಾರಾಯಣ ಕಾಶಿ “ಪ್ರಸ್ತುತ ಕಾಲಮಾನದಲ್ಲಿ ಯಕ್ಷಗಾನ ತಂಡಗಳ ನಿರ್ವಹಣೆಯೇ ಸವಾಲಾಗಿದೆ. ಅದರಲ್ಲೂ ಹವ್ಯಾಸಿಗಳೇ ಒಂದಾಗಿ ತಂಡ ರಚಿಸಿ ಹೆಗ್ಗೋಡು ಪ್ರಾಂತ್ಯದಲ್ಲಿ ಸಂಘಟಿಸಿರುವುದು ಅಪರೂಪದ ಸಾಹಸ ಎಂದರು.
ಸಾಕೇತ ಕಲಾವಿದರು ಅಭಿನಯಿಸಿದ
“ಭೀಷ್ಮಪರ್ವ” ಯಕ್ಷಗಾನ ರಸಿಕರ ಮನಗೆದ್ದಿತು.
ಪಾತ್ರಧಾರಿಗಳ ಕುಶಲ ನುಡಿಗಾರಿಕೆ,
ವೃತ್ತಿ ಕಲೆಯ ಸಮೃದ್ಧ
ಕಲಾವಂತಿಕೆ, ಆಭೂಷಣ, ಅಭಿನಯ ಪ್ರೇಕ್ಷಕರನ್ನ ಮಹಾಭಾರತ ಲೋಕಕ್ಕೆ ಕರೆದೊಯ್ದವು.
ಹಿರಿಯ ಯಕ್ಷಗಾನ ಭಾಗವತ ಕೆಳಮನೆ ರಾಮರಾಯರ ಭಾಗವಂತಿಕೆಗೆ ಎಲ್ಲರೂ ತಲೆದೂಗಿದರು.
ರಾಮರಾಯರ ಯಕ್ಷರಂಗದ ಸೇವೆಯನ್ನ ಸ್ಮರಿಸಿ
ಸಾಕೇತದ ಸ್ನೇಹಿತರು
ಅವರಿಗೆ ಆತ್ಮೀಯ ಸನ್ಮಾನ ಏರ್ಪಡಿಸಿದ್ದರು.
ಡಾ.ರತ್ನಾಕರ ಅವರು ರಾಮರಾಯರ ಪರಿಚಯ ಮಾಡಿದರು.
ಇದೇ ಸಂದರ್ಭದಲ್ಲಿ‌ ಶ್ರೀಮತಿ ರಾಮರಾಯರನ್ನೂ ವೇದಿಕೆಗೆ ಆಹ್ವಾನಿಸಲಾಗಿತ್ತು.
ಪುಷ್ಪಮಾಲಿಕೆಯನ್ನ
ರಾಮರಾಯರ ಶ್ರೀಮತಿಯವರೇ ಪತಿಯ ಕೊರಳಿಗೆ ಹಾಕಿ ಸನ್ಮಾನ ಪ್ರಕ್ರಿಯೆಯನ್ನ ಪ್ರೇಕ್ಷಕರ ಮನದಲ್ಲಿ
ಅಚ್ಚೊತ್ತುವಂತೆ ಮಾಡಿದರು.
ಸನ್ಮಾನಕ್ಕೆ ಉತ್ತರಿಸಿದ ರಾಮರಾಯರು
” ಶಿವಮೊಗ್ಗದ ಮಿತ್ರರು
ತಮ್ಮ ಯಕ್ಷರಂಗದ ಸೇವೆಗೆ ಯಾವಾಗಲೂ ಪ್ರೋತ್ಸಾಹ ನೀಡುತ್ತಿದ್ದಾರೆ. ಪ್ರತಿಕ್ಷಣದಲ್ಲೂ ತಮ್ಮ ಪ್ರಯೋಗಗಳ ಬಗ್ಗೆ ವಿಚಾರಿಸುತ್ತಿರುತ್ತಾರೆ.
ಕಲಿಯಲು‌ ಬಂದವರಿಗೆ ನಿರ್ವಂಚನೆಯಿಂದ ಕಲಿಸಿದ್ದೇನೆ.
ಸಾಂಪ್ರದಾಯಿಕವಾಗಿ ಹಿರಿಯರು ಕಲಿಸಿದ ಹಾದಿಯಲ್ಲೇ ಯಕ್ಷಗಾನ ಕಲೆಯ ಪರಂಪರೆ ಮುಂದುವರೆಸಿಕೊಂಡು ಬಂದಿದ್ದೇನೆ.” ಎಂದು ಹೇಳುವಾಗ ಕಣ್ಣಲ್ಲಿ ಆನಂದ ಭಾಷ್ಪವಿತ್ತು.
ಹೆಚ್ವು ಮಾತನಾಡಲಾಗದೇ
ಅರ್ಧಕ್ಕೇ ಮಾತು ಮುಗಿಸಿ ಕೈ ಮುಗಿದರು.

ಭೀಷ್ಮ ಪಾತ್ರಧಾರಿ ಮಂಜುನಾಥ್ ಅವರು ಸಾಕೇತ ಕಲಾವಿದರ ಪರಿಚಯ ಮಾಡಿಕೊಟ್ಟರು.
ವಂದನಾರ್ಪಣೆಯೊಂದಿಗೆ
ಕಾರ್ಯಕ್ರಮ ಮುಕ್ತಾಯವಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...