Wednesday, August 12, 2026
Wednesday, August 12, 2026

CM Siddharamaih ಮಾಜಿ ಸಿಎಂ ಎಸ್.ಎಂಕೃಷ್ಣ ಅವರು ನನಗೆ ಮಾರ್ಗದರ್ಶಕರು- ಸಿದ್ಧರಾಮಯ್ಯ ಸಂತಾಪ

Date:

CM Siddharamaih ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು.

ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ.

ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು.
ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು.

CM Siddharamaih ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ.

ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...