Monday, March 23, 2026
Monday, March 23, 2026

Mount Carmel School ನೆಮ್ಮದಿ & ಆರೋಗ್ಯಕ್ಕೆ ಕ್ರೀಡೆ ಸಹಕಾರಿ- ಸುನೀಲ್ ರೋಡ್ರಿಗಸ್

Date:

Mount Carmel School ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಸಾಮರ್ಥ್ಯ ವೃದ್ಧಿಸುವ ಜತೆಯಲ್ಲಿ ಸದೃಢ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ವಿದ್ಯಾನಗರದ ಮೌಂಟ್ ಕಾರ್ಮೆಲ್ ಸ್ಕೂಲ್ ಮುಖ್ಯ ವ್ಯವಸ್ಥಾಪಕ ಸುನಿಲ್ ರೋಡ್ರಿಗಸ್ ಅಭಿಪ್ರಾಯಪಟ್ಟರು.

ಮೌಂಟ್ ಕಾರ್ಮೆಲ್ ಸ್ಕೂಲ್ ಮತ್ತು ನೆಹರು ಒಳಾಂಗಣದ ಕ್ರೀಡಾಂಗಣ ಆವರಣದಲ್ಲಿ ವಲಯ 10ರ ರೋಟರಿ ವಲಯ ಮಟ್ಟದ ನಾಗಲೋಟ ಕ್ರೀಡೋತ್ಸವ 2024 ಉದ್ಘಾಟಿಸಿ ಮಾತನಾಡಿ, ಕ್ರೀಡೆ, ಸಾಂಸ್ಕೃತಿಕ , ಮನೋರಂಜನಾ ಜೀವನಶೈಲಿ ರೂಢಿಸಿಕೊಳ್ಳಬೇಕು. ನೆಮ್ಮದಿಯ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿರುತ್ತದೆ ಎಂದು ತಿಳಿಸಿದರು.

Mount Carmel School ರೋಟರಿ ವಲಯ 10ರ ಸಹಾಯಕ ಗವರ್ನರ್ ನಾಗರಾಜ್ ಎಸ್.ಆರ್ ಮಾತನಾಡಿ, ರೋಟರಿ ಕ್ಲಬ್‌ಗಳು ಸಮಾಜಮುಖಿ ಕಾರ್ಯಕ್ರಮಗಳ ಜತೆಯಲ್ಲಿ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಹೆಚ್ಚಿನ ಮಹತ್ವವನ್ನು ನೀಡಿ ಸದಸ್ಯರ ಪ್ರತಿಭೆಯನ್ನು ಮುನ್ನೆಲೆಗೆ ತರುವುದಕ್ಕೆ ಅವಕಾಶ ಕಲ್ಪಿಸುತ್ತದೆ ಎಂದರು. ಎಲ್ಲಾ ರೋಟರಿ ಪರಿವಾರದ ಸದಸ್ಯರಿಗೆ ಶುಭ ಕೋರಿದರು.
ಜೋನಲ್ ಲರ್ನಿಂಗ್ ಫೇಸಿಲಿಟೇಟರ್ ರವೀಂದ್ರನಾಥ್ ಐತಾಳ್ ಮಾತನಾಡಿ, ಕ್ರೀಡೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮೈಗೂಡಿಸಿಕೊಂಡಲ್ಲಿ ಖಿನ್ನತೆ ಕಡಿಮೆ ಮಾಡುವುದರ ಜತೆಯಲ್ಲಿ ದೈಹಿಕ , ಮಾನಸಿಕವಾಗಿ ಸದೃಢರಾಗುತ್ತೇವೆ. ಪರಸ್ಪರರಲ್ಲಿ ಒಡನಾಟ ಪ್ರೀತಿ ವಿಶ್ವಾಸ ವೃದ್ಧಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಕ್ರೀಡಾ ವಲಯ ಸಂಯೋಜಕ ರೊಟೇರಿಯನ್ ಜಗದೀಶ್ ಸರ್ಜಾ ಮಾತನಾಡಿ, ರೋಟರಿ ವಲಯ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳು ಜಿಲ್ಲಾಮಟ್ಟದ ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ಅವಕಾಶವಿರುತ್ತದೆ ಎಂದು ತಿಳಿಸಿದರು.
ವಲಯ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಿದ ರೋಟರಿ ಕ್ಲಬ್ ರಿವರ್ ಸೈಡ್ ಅಧ್ಯಕ್ಷ ಎಂ.ಆರ್.ಬಸವರಾಜ್ ಮಾತನಾಡಿ, ಇಂದಿನ ಕ್ರೀಡಾಕೂಟದಲ್ಲಿ ಭದ್ರಾವತಿ, ಶಿಕಾರಿಪುರ, ಶಿವಮೊಗ್ಗ, ಶಿವಮೊಗ್ಗ ಉತ್ತರ, ರಿವರ್ ಸೈಡ್, ಜುಬಿಲೀ, ಶಿಕಾರಿಪುರ ಸದಸ್ಯರುಗಳು ಮತ್ತು ಅವರ ಪರಿವಾರದವರು ಭಾಗವಹಿಸಿ ಕ್ರೀಡಾ ಪ್ರದರ್ಶನ ನೀಡಲಿದ್ದಾರೆ ಎಂದರು.

ಮಾಜಿ ಸಹಾಯಕ ಗವರ್ನರ್ ಎಂ.ಪಿ.ಆನಂದಮೂರ್ತಿ, ಜಗನ್ನಾಥ್.ಎಂ., ಮುಂದಿನ ಸಾಲಿನ ಸಹಾಯಕ ಗವರ್ನರ್ ಕೆಪಿ ಶೆಟ್ಟಿ, ಕ್ರೀಡಾ ವ್ಯವಸ್ಥಾಪಕರಾದ ಮಲ್ಲೇಶ್ ಸಿ.ಎನ್, ಕ್ರೀಡಾ ಚೇರ್ಮನ್ ಚೇತನ್ ಕುಮಾರ್ ಹಾಗೂ ಕಾರ್ಯದರ್ಶಿ ವಿನಯ್, ಧನರಾಜ್.ಬಿ.ಜಿ, ನಿತಿನ್ ಯಾದವ್, ರಾಜೇಶ್ ಪಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...