Thursday, June 25, 2026
Thursday, June 25, 2026

B.Y.Raghavendra ಲೋಕಸಭೆಯಲ್ಲಿ ಶರಾವತಿ ಸಂತ್ರಸ್ತರ ಬಗ್ಗೆ ದನಿಯೆತ್ತಿದ ಸಂಸದ ಬಿ.ವೈ. ರಾಘವೇಂದ್ರ

Date:

B.Y.Raghavendra ನಾಡಿನಲ್ಲಿ ಎದುರಾಗಿದ್ದ ವಿದ್ಯುತ್ ಬವಣೆಯನ್ನು ನೀಗಿಸಲು ಅಪಾರ ಪ್ರಮಾಣದ ನೈಸರ್ಗಿಕ ಸಂಪತ್ತನ್ನು ಉಪಯೋಗಿಸಿಕೊಂಡು ಶರಾವತಿ ಜಲವಿದ್ಯುತ್ ಯೋಜನೆಯನ್ನು 1960 ರ ಅವಧಿಯಲ್ಲಿ ಕೈಗೆತ್ತಿಕೊಳ್ಳಲಾಯಿತು.

ಈ ಒಂದು ಐತಿಹಾಸಿಕ ಯೋಜನೆಯಿಂದ ಜಲಾಶಯದ ಹಿನ್ನೀರಿನಲ್ಲಿ ವಾಸವಿದ್ದ ಸಾವಿರಾರು ಕುಟುಂಬಗಳು ತಮಗೆ ಆಧಾರವಾಗಿದ್ದ ಸಾವಿರಾರು ಎಕರೆ ಭೂಮಿ ಮುಳುಗಡೆ ಆಗುತ್ತದೆ ಎಂಬ ಕಲ್ಪನೆ ಇದ್ದರೂ ಜಲಾಶಯ ನಿರ್ಮಾಣಕ್ಕೆ ತಮ್ಮ ಸೂಕ್ತ ಸಹಕಾರ ನೀಡಿದ ಪರಿಣಾಮ ಇಂದು ರಾಜ್ಯದ ಬಹುಪಾಲು ವಿದ್ಯುತ್ ಈ ಕೇಂದ್ರದಿಂದ ಉತ್ಪಾದನೆ ಆಗುತ್ತಿದೆ. ಎಂದು ಪ್ರಸ್ತುತ ಲೋಕಸಭಾ ಅಧಿವೇಶನದಲ್ಲಿ
ಶಿವಮೊಗ್ಗ ಕ್ಷೇತ್ರದ ಲೋಕ ಸಭಾಸದಸ್ಯ
ಬಿ ವೈ.ರಾಘವೇಂದ್ರ ಕೇಂದ್ರ ಸರ್ಕಾರದ ಪರಿಸರ ಇಲಾಖೆಗೆ ಶರಾವತಿ ಸಂತ್ರಸ್ತರ ಸಮಸ್ಯೆ ಬಗ್ಗೆ ಸಂಪೂರ್ಣ ಚಿತ್ರಣ ನೀಡಿದರು

ಸಂಸದರು ಮುಂದುವರೆದು ಮಾತನಾಡುತ್ತಾ
*ನಂತರ ಆಳಿದ ಸರ್ಕಾರಗಳು ಸೂಕ್ತ ಸಮಯದಲ್ಲಿ ಐತಿಹಾಸಿಕ ನಿರ್ಧಾರಕ್ಕೆ ತನ್ನ ನಿರ್ದಿಷ್ಟ ಇಚ್ಛಾಶಕ್ತಿ ತೋರದೆ ಕಳೆದ 60 ವರ್ಷಕ್ಕೂ ಅಧಿಕ ಸಮಯದಿಂದ ಈ ಗಂಭೀರ ಸಮಸ್ಯೆ ಸಮಸ್ಯೆಯಾಗಿ ಉಳಿದುಕೊಂಡಿದೆ. ಎಂದು ಆಕ್ಷೇಪ ವ್ಯಕ್ತಪಡಿಸಿದರು

ಇಲ್ಲಿಯವರೆಗೂ ಎದುರಾದ ತಾಂತ್ರಿಕ ಮತ್ತು ತಾಂತ್ರಿಕೇತರ ಹಾಗೂ ಇನ್ನಿತರ ಆಡಳಿತಾತ್ಮಕ ಸಮಸ್ಯೆಗಳನ್ನು ನಿವಾರಿಸಿಕೊಂಡು ಕೆಳ ಹಂತದ ನ್ಯಾಯಾಲಯದಿಂದ ಹಿಡಿದು ಉಚ್ಚ ನ್ಯಾಯಾಲಯ ದಾಟಿಕೊಂಡು ಈಗ ಸರ್ವೋಚ್ಚ ನ್ಯಾಯಾಲಯಕ್ಕೆ ಕೊನೆಯ ಹಂತದ ನ್ಯಾಯಕ್ಕಾಗಿ ಹೋರಾಟ ಪ್ರಾರಂಭಿಸಿದೆ.

B.Y.Raghavendra ಕೇಂದ್ರದ ಶ್ರೀ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿದ ಸಮಯದಿಂದ ತನ್ನ ನಿರ್ಣಯಗಳಲ್ಲಿ ಸದಾ ಜನ ಹಿತ ಹಾಗೂ ಜನ ಪರ ಎಂಬುದು ದೃಡಿ ಕರಿಸಿದೆ. ಈಗ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಎಲ್ಲ ಅಡೆತಡೆಗಳನ್ನು ದಾಟಿಕೊಂಡು ದೇಶದ ಅತ್ಯುನ್ನತ ನ್ಯಾಯಾಲಯದಲ್ಲಿ ನ್ಯಾಯ ಪಡೆಯಲು ಹೋರಾಟ ಆರಂಭಿಸಿದೆ.

ಈ ಮಹತ್ತರವಾದ ಸಮಯದಲ್ಲಿ ಕೇಂದ್ರ ಸರ್ಕಾರ ಹಾಗೂ ಸಂಬಂಧಿಸಿದ ಇಲಾಖೆಯ ಕೇಂದ್ರ ಸಚಿವರು ಮಲೆನಾಡಿನ ಜನರ ಹಿತ ಕಾಪಾಡುವ ನಿಟ್ಟಿನಲ್ಲಿ ನ್ಯಾಯಾಲಯದಲ್ಲಿ ಸೂಕ್ತ ರೀತಿಯಲ್ಲಿ ಹೋರಾಟ ನಡೆಸಿ ಹೊಸ ಮೈಲಿಗಲ್ಲು ಸ್ಥಾಪಿಸುವ ಮಹಾದಾಸೆ ಹಾಗೂ ಭರವಸೆ ನಮಗೆಲ್ಲ ಮೂಡಿದೆ.

ಈ ಕುರಿತು ಇಂದು ಸದನದ ಗಮನ ಸೆಳೆದು ಶರಾವತಿ ಹಿನ್ನೀರಿನ ಸಂತ್ರಸ್ತರು ಎದುರಿಸುತ್ತಿರುವ ಸಮಸ್ಯೆಗಳನ್ನು ಎಳೆ ಎಳೆಯಾಗಿ ತೆರೆದಿಟ್ಟು ಪುನರ್ವಸತಿ ಸೇರಿದಂತೆ ಇನ್ನೂ ಅನೇಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ದಿಟ್ಟ ಕ್ರಮ ತೆಗೆದುಕೊಳ್ಳುವಂತೆ ಮತ್ತೊಮ್ಮೆ ಆಗ್ರಹ ಪೂರ್ವಕವಾಗಿ ಸಂಸದ ರಾಘವೇಂದ್ರ ಅವರು ಲೋಕಸಭೆಯಲ್ಲಿ ಎಲ್ಲರ ಗಮನ ಸೆಳೆದು ಮನವಿ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...