Sunday, March 22, 2026
Sunday, March 22, 2026

Narayana Hrudayalaya ಸಕಾಲದಲ್ಲಿ ಕೀಲು ಮೂಳೆಯ ಸಾಂದ್ರತೆ ಪರೀಕ್ಷಿಸಿಕೊಳ್ಳಿ- ಡಾ.ಚೇತನ್ ಮಠದ್

Date:

Narayana Hrudayalaya 40 ವರ್ಷಗಳ ನಂತರ ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಸದೃಢವಾಗಿ ಇಟ್ಟುಕೊಳ್ಳುವುದರ ಜೊತೆಗೆ ಸಕಾಲದಲ್ಲಿ ಕೀಲು ಮೂಳೆಯ ಸಾಂದ್ರತೆಯನ್ನು ಪರೀಕ್ಷಿಸಿಕೊಳ್ಳುವುದು ಒಳ್ಳೆಯದು ಇದರಿಂದ ಮುಂದೆ ಆಗಬಹುದಾದ ದೊಡ್ಡ ಅನಾಹುತವನ್ನು ತಪ್ಪಿಸಬಹುದು ಎಂದು ನಾರಾಯಣ ಹೃದಯಾಲಯದ ಪ್ರಖ್ಯಾತ ಕೀಲು ಮೂಳೆ. ಮರು ಜೋಡೋಣ ತಜ್ಞ ಡಾಕ್ಟರ್ ಚೇತನ್ ಮಠದ್ ಅಭಿಮತ ವ್ಯಕ್ತಪಡಿಸಿದರು.

ಶಿವಮೊಗ್ಗ ನಗರದ ಹೃದಯ ಭಾಗವಾದ ಕುವೆಂಪು ರಸ್ತೆಯಲ್ಲಿರುವ ನಾರಾಯಣ ಕ್ಲಿನಿಕ್ ನಲ್ಲಿ ಇಂದು ಮೊಣಕಾಲು ನೋವಿನಿಂದ ಸಂಪೂರ್ಣ ಸ್ವಾತಂತ್ರವೆಂಬ ಶೀರ್ಷಿಕೆ ಯಡಿ ಸಾರ್ವಜನಿಕರಿಗೆ ಹಮ್ಮಿಕೊಳ್ಳಲಾದ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು ಮನುಷ್ಯನ ದೇಹದಲ್ಲಿ ಮೂಳೆ ತುಂಬಾ ಪ್ರಮುಖ ಪಾತ್ರ ವಹಿಸುತ್ತದೆ ಇಂದು ಶೇಕಡ 30ರಷ್ಟು ಜನ ಮೂಳೆ ತೊಂದರೆಯಿಂದ ಬಳಲುತ್ತಿದ್ದಾರೆ ಪ್ರಾರಂಭಿಕ ಹಂತದಲ್ಲೇ ಕಾಯಿಲೆಯನ್ನು ಪತ್ತೆಹಚ್ಚಿ ಸಕಾಲದಲ್ಲಿ ಚಿಕಿತ್ಸೆ ಪಡೆದುಕೊಂಡರೆ ಕಾಯಿಲೆಯನ್ನು ಗುಣಪಡಿಸಿಕೊಳ್ಳಬಹುದು.

Narayana Hrudayalaya ಪ್ರತಿಯೊಬ್ಬರೂ ಪ್ರತಿನಿತ್ಯ ವ್ಯಾಯಾಮ ಯೋಗ ಪ್ರಾಣಾಯಾಮ ಹಾಗೂ ಪೌಷ್ಟಿಕಾಂಶ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ನಮ್ಮ ಕೀಲು ಮೂಳೆಗಳು ಸದೃಢವಾಗಿರುತ್ತವೆ ಆದರಿಂದ ಇಂತಹ ವಿಶೇಷ ಕ್ಯಾಂಪ್ಗಳಲ್ಲಿ ಸಾರ್ವಜನಿಕರು ಭಾಗವಹಿಸಿ ಉಚಿತವಾಗಿ ಪರೀಕ್ಷೆ ಮಾಡಿಸಿಕೊಳ್ಳುವುದರ ಜೊತೆಗೆ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳುವುದು ಒಳ್ಳೆಯದು ಎಂದು ನೋಡಿದರು ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ
ಜಿ ವಿಜಯಕುಮಾರ್ ಮಾತನಾಡುತ್ತಾ ಇಂತಹ ಮೋಳೆ ಪರೀಕ್ಷೆಗಳನ್ನು ಹೊರಗಡೆ ಮಾಡಿಸಿಕೊಂಡರೆ 2000 ದಿಂದ 3000 ಖರ್ಚಾಗುತ್ತೆ ಆದರೆ ಇಲ್ಲಿ ಸಂಪೂರ್ಣವಾಗಿ ಉಚಿತವಾಗಿ ಮಾಡುತ್ತಿರುವುದರಿಂದ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಇತ್ತೀಚಿನ ಆಹಾರ ಪದ್ಧತಿಯಿಂದ ಮತ್ತು ನಮ್ಮ ಜೀವನಶೈಲಿಯಿಂದ ಕಡಿಮೆ ವಯಸ್ಸಿನಲ್ಲಿ ಹಲವಾರು ಸಮಸ್ಯೆಗಳನ್ನ ಎದುರಿಸುತ್ತಾ ಇದ್ದೇವೆ ಆದ್ದರಿಂದ ನಾವುಗಳು ಸಕಾಲದಲ್ಲಿ ನಮ್ಮ ಆರೋಗ್ಯವನ್ನು ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಡಾಕ್ಟರ್ ಅಭಿಲಾಶ್. ಸಹನಾ. ಶ್ವೇತಾ ಶ್ರೀ. ಪ್ರದೀಪ್. ಪ್ರೀತಿ. ಬಿಂದು ವಿಜಯ ಕುಮಾರ್ ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...