Sunday, August 2, 2026
Sunday, August 2, 2026

Tourism Department  Shivamogga ಪ್ರವಾಸೋದ್ಯಮ/ಆತಿಥ್ಯ ಕೌಶಲ್ಯಾಭಿವೃದ್ಧಿ ತರಬೇತಿಗೆ ಶಿವಮೊಗ್ಗ ಪ್ರವಾಸೋದ್ಯಮ ಇಲಾಖೆ ಪ್ರಕಟಣೆ

Date:

Tourism Department  Shivamogga ಶಿವಮೊಗ್ಗ ಪ್ರವಾಸೋದ್ಯಮ ಇಲಾಖೆಯು 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಪಡೆಯಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 20 ರಿಂದ 45 ವರ್ಷದೊಳಗಿನ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಪ.ಜಾ.ಯ 292 ಹಾಗೂ ಪ.ಪಂ.ದ 162 ಅಭ್ಯರ್ಥಿಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸಿಟ್ಯೂಟ್(ಎಫ್‌ಸಿಐ), ಮೈಸೂರು ಮತ್ತು ಇನ್ಸಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ (ಐಹೆಚ್‌ಎಂ), ಬೆಂಗಳೂರು ಇವರ ಮೂಲಕ ಆಹಾರ ಮತ್ತು ಪಾನೀಯ ಸೇವೆ ಉಸ್ತುವಾರಿ -10 ನೇ ತರಗತಿ ಉತ್ತೀರ್ಣ (Food & Beverage Service Steward), ಕೊಠಡಿ ಪರಿಚಾರಕ- 5ನೇ ತರಗತಿ ಉತ್ತೀರ್ಣ (Room Attendant), ಫ್ರಂಟ್ ಆಫೀಸ್ ಅಸೋಸಿಯೇಟ್ 2ನೇ ಪಿಯುಸಿ ಉತ್ತೀರ್ಣ (Front Office Associate), ಮಲ್ಟಿ ಕ್ಯೂಜಿನ್ ಕುಕ್ -8ನೇ ತರಗತಿ ಉತ್ತೀರ್ಣ (Multi Cuisine Cook) ವಸತಿ ಸಹಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Tourism Department  Shivamogga ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ, ಎ ಬ್ಲಾಕ್, 3ನೇ ತಿರುವು, ಗೋಪಾಲಗೌಡ ಬಡಾವಣೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಲಗತ್ತಿಸಿ ಡಿ.27 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-251444 ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...