Wednesday, February 4, 2026
Wednesday, February 4, 2026

Machenahalli Industrial Association ಸಂಸ್ಥೆಗಳಲ್ಲಿ ಕ್ರಿಯಾಶೀಲತೆ, ಪ್ರಾಮಾಣಿಕತೆ & ಶ್ರದ್ಧೆ ಮುಖ್ಯ- ಎಸ್.ರುದ್ರೇಗೌಡರು

Date:

Machenahalli Industrial Association ಸಂಸ್ಥೆಗಳು ಸದೃಢವಾಗಬೇಕಾದರೆ ಸಂಘಟನೆ ಮುಖ್ಯ. ಸಂಸ್ಥೆಗಳಲ್ಲಿ ಕ್ರಿಯಾಶೀಲತೆ, ಪ್ರಾಮಾಣಿಕತೆ ಹಾಗೂ ಶ್ರದ್ಧೆ, ಮುಂದಿನ ದೃಷ್ಟಿಕೋನ ಬಹಳ ಮುಖ್ಯ ಎಂದು ಶಾಂತಲಾ ಗ್ರೂಪ್ ಇಂಡಸ್ಟ್ರಿ ಚೇರ್ಮನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ ಹೇಳಿದರು.
ಮಾಚೇನಹಳ್ಳಿ ಕೈಗಾರಿಕಾ ಅಸೋಸಿಯೇಷನ್ ನೂತನ ಅಧ್ಯಕ್ಷ ಡಿ.ಜಿ.ಬೆನಕಪ್ಪ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿ, ಮಾಚೇನಹಳ್ಳಿ ಕೈಗಾರಿಕಾ ಸಂಸ್ಥೆ ಈಗಾಗಲೇ ಕೈಗಾರಿಕೆಗಳಿಗೆ ಪೂರಕವಾದ ಹಾಗೂ ಕಾರ್ಮಿಕರಿಗೆ ಮತ್ತು ಸದಸ್ಯರಿಗೆ ಬೇಕಾದ ಅಗತ್ಯವಾದ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದೆ ಎಂದು ತಿಳಿಸಿದರು.
ಅಸೋಸಿಯೇಷನ್ ವತಿಯಿಂದ ಕೈಗಾರಿಕಾ ಸುರಕ್ಷತೆ ಬಗ್ಗೆ ಅಗತ್ಯವಾದ ಮಾಹಿತಿಗಳನ್ನು ನೀಡುವುದರ ಜೊತೆಗೆ ಅವರಿಗೆ ಕೌಶಲ್ಯ ಅಭಿವೃದ್ಧಿಯ ತರಬೇತಿಗಳನ್ನು ಸಹ ನೀಡುತ್ತಿದೆ. ಇದರಿಂದ ಸದಸ್ಯರ ಹಾಗೂ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿ ಆಗುತ್ತಿದೆ. ಸಂಸ್ಥೆ ಇನ್ನೂ ಎತ್ತರಕ್ಕೆ ಬೆಳೆದು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಬಳಸಿಕೊಂಡು ರಸ್ತೆ, ನೀರು ಹಾಗೂ ಲೈಟ್, ಮೂಲಸೌಕರ್ಯ ಉತ್ತಮಗೊಳಿಸುವುದರ ಮುಖಾಂತರ ಕೈಗಾರಿಕಾ ವಸಹಾತು ರಾಜ್ಯದಲ್ಲಿ ಮಾದರಿಯಾಗಿ ಅಭಿವೃದ್ಧಿಯಾಗಬೇಕು ಎಂದರು.
Machenahalli Industrial Association ಇದೇ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಎಂ.ರಾಜು ಅವರು ಮಾಚೇನಹಳ್ಳಿ ಕೈಗಾರಿಕಾ ಸಂಸ್ಥೆ ಬೆಳೆದು ಬಂದ ದಾರಿ ಹಾಗೂ ಆ ಸಂಸ್ಥೆಗೆ ದುಡಿದ ಹಲವಾರು ಮಾಜಿ ಅಧ್ಯಕ್ಷರ ಸಾಧನೆ ಮತ್ತು ಶ್ರಮದ ಬಗ್ಗೆ ವಿವರಿಸಿದರು. ಸಂಸ್ಥೆಯಿಂದ ಇನ್ನೂ ಹಲವಾರು ಅಭಿವೃದ್ಧಿ ಕಾರ್ಯಗಳು ಆಗುವುದು ಬಾಕಿ ಇದೆ. ಅವೆಲ್ಲವೂ ಸಕಾಲದಲ್ಲಿ ನೆರವೇರಬೇಕು ಎಂದರು.
ಮಾಜಿ ಅಧ್ಯಕ್ಷ ರಮೇಶ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು
ಡಿ.ಜಿ.ಬೆನಕಪ್ಪ ಅವರು ರಮೇಶ್ ಹೆಗಡೆ ಅವರಿಂದ ನೂತನ ತಂಡದೊಂದಿಗೆ ಅಧಿಕಾರ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಚಂದ್ರಶೇಖರ್ ಎ.ಎಲ್., ಕಾರ್ಯದರ್ಶಿಯಾಗಿ ರಾಜೇಶ್.ಎಸ್.ಟಿ., ಖಜಾಂಚಿಯಾಗಿ ದಿನೇಶ್.ಹೆಚ್.ಎಲ್., ನಿರ್ದೇಶಕರಾಗಿ ನಂದನ್ ಮೂರ್ತಿ, ಸಂಜಯ್ ಪಾಟೀಲ್ ಎಂಜಿ, ಸಂತೋಷ್ ಎಂ, ಸೌರಭ ಡಿಕೆ, ಸುರೇಂದ್ರ ಎನ್., ವಿಶೇಷ ಆಹ್ವಾನಿತರಾಗಿ ಮದಕರ ಜೋಯಿಸ್, ಡಿಎಸ್ ಚಂದ್ರಶೇಖರ್, ಎಸ್ ರುದ್ರೇಗೌಡ, ಎಂ ಹಾಲಪ್ಪ ಅವರು ಅಧಿಕಾರ ವಹಿಸಿಕೊಂಡರು.
ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷ ಡಿ.ಜಿ.ಬೆನಕಪ್ಪ ಅವರು ಮುಂದಿನ ಕಾರ್ಯಯೋಜನೆಗಳ ಬಗ್ಗೆ ವಿವರಿಸಿದರು. ಇದೇ ಸಂದರ್ಭದಲ್ಲಿ ಹೊಸ ಸಮಿತಿಯಿಂದ ಎಲ್ಲ ಮಾಜಿ ಅಧ್ಯಕ್ಷರಿಗೆ ಸನ್ಮಾನಿಸಿ ಗೌರವ ಸಮರ್ಪಿಸಲಾಯಿತು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ಎ.ಎಂ.ಸುರೇಶ್, ಉಪಾಧ್ಯಕ್ಷ ಜಿ.ವಿಜಯಕುಮಾರ್, ಖಜಾಂಚಿ ವಿ.ಮನೋಹರ್, ಮಾಜಿ ಅಧ್ಯಕ್ಷ ಎನ್.ಗೋಪಿನಾಥ್, ನಿರ್ದೇಶಕರಾದ ಲಕ್ಷ್ಮೀದೇವಿ ಗೋಪಿನಾಥ್, ಪ್ರದೀಪ್ ಎಲಿ ಶುಭಕೋರಿದರು. ಡಿ.ಎಂ.ಶಂಕರಪ್ಪ, ಕಿರಣ್ ಮತ್ತಿತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...