Sunday, December 7, 2025
Sunday, December 7, 2025

District Organization of Bharat Scouts and Guides ಭಾರತ್ ಗೌರವ್ ಯಾತ್ರೆ. ಆಸಕ್ತರಿಗೆ ಪೂರ್ಣ ಮಾಹಿತಿ

Date:

District Organization of Bharat Scouts and Guides ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೆಪಿಸಲು ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿ ಎಂದು ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಉಪನಿರ್ದೇಶಕ ಚಂದ್ರಪ್ಪ ಎಸ್.ಗುಂಡುಪಲ್ಲ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ರೋರ‍್ಸ್, ರೇಂರ‍್ಸ್ಗಳಿಗೆ ಆಯೋಜಿಸಿದ್ದ ಜಿಲ್ಲಾಮಟ್ಟದ ದಳ ನಿರ್ವಹಣೆ ಹಾಗೂ ಚಾರಣ ಶಿಬಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಿಕ್ಷಣದ ಜತೆಯಲ್ಲಿ ಮಕ್ಕಳಲ್ಲಿ ಕ್ರೀಯಾಶೀಲ ಚಿಂತನೆ ಬೆಳೆಸುವ ಇಂತಹ ಕಾರ್ಯಕ್ರಮಗಳ ಅವಶ್ಯಕತೆ ಹೆಚ್ಚಿದೆ. ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳು ಮಹತ್ತರ ಪಾತ್ರ ವಹಿಸಬೇಕು. ಪರಿಸರ ಸಂರಕ್ಷಣೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
District Organization of Bharat Scouts and Guides ಪ್ರಾಂಶುಪಾಲರ ಸಂಘದ ಅಧ್ಯಕ್ಷ, ಕಾಚಿನಕಟ್ಟೆ ಕಾಲೇಜಿನ ಪ್ರಾಂಶುಪಾಲ ಪಂಡರೀನಾಥ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಸೇವೆಯು ಎಲ್ಲೆಡೆ ವಿಸ್ತರಿಸಿ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿಸುವ ಹಾಗೂ ಜೀವನದಲ್ಲಿ ಸಾಧನೆ ಮಾಡುವ ಮನೋಭಾವ ಬೆಳೆಸುತ್ತಿದೆ ಎಂದರು.
ಮೂರು ದಿನಗಳ ಶಿಬಿರದ ಅಧ್ಯಕ್ಷತೆಯನ್ನು ಗೈಡ್ಸ್ ಆಯುಕ್ತೆ ಶಕುಂತಲಾ ಚಂದ್ರಶೇಖರ್ ವಹಿಸಿದ್ದು, ಶಿಬಿರದಲ್ಲಿ ತರಬೇತಿ ಪಡೆದು ಬರುವ ದಿನಗಳಲ್ಲಿ ಉನ್ನತ ಹಂತಕ್ಕೆ ತಲುಪಬೇಕು. ವಿದ್ಯಾರ್ಥಿಗಳು ಕಾಲೇಜಿಗೆ ಉತ್ತಮ ಹೆಸರು ತರಬೇಕು ಎಂದು ಹೇಳಿದರು.
ರೋವರ್ ವಿಭಾಗ ಜಿಲ್ಲಾ ಆಯುಕ್ತ ಕೆ.ರವಿ ಮಾತನಾಡಿ, ಶಿಬಿರದ ಉದ್ದೇಶ ಹಾಗೂ ಸ್ಕೌಟ್ಸ್ ಗೈಡ್ಸ್ ನಡೆದು ಬಂದ ಹಾದಿ ಬಗ್ಗೆ ವಿವರಿಸಿದರು. ಕೇಂದ್ರ ಸ್ಥಾನಿಕ ಆಯುಕ್ತ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಜಿ.ವಿಜಯಕುಮಾರ್, ಜಿಲ್ಲಾ ಕಾರ್ಯದರ್ಶಿ ಕೆ.ವಿ.ಚಂದ್ರಶೇಖರಯ್ಯ, ತರಬೇತಿ ಆಯುಕ್ತ ಶಿವಶಂಕರ್, ಜಂಟಿ ಕಾರ್ಯದರ್ಶಿ ವೈ.ಆರ್.ವೀರೇಶಪ್ಪ, ಲಕ್ಷಿö್ಮÃ ರವಿ, ಮಲ್ಲಿಕಾರ್ಜುನ ಕಾನೂರು, ಎಂ.ಕೆ.ಕೃಷ್ಣಸ್ವಾಮಿ, ಘನಶಾಮ್ ಗಿರಿಮಾಜಿ, ಪರಮೇಶ್ವರಯ್ಯ, ಪರಿಮಳಾ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...