Friday, March 20, 2026
Friday, March 20, 2026

Bharat Gaurav Yatra ಭಾರತ್ ಗೌರವ್ ಯಾತ್ರೆ ಆಸಕ್ತರಿಗೆ ಪೂರ್ಣ ಮಾಹಿತಿ

Date:

Bharat Gaurav Yatra ಧಾರ್ಮಿಕ ದತ್ತಿ ಇಲಾಖೆಯು ಕರ್ನಾಟಕ ಭಾರತ್ ಗೌರವ್ ಯೋಜನೆಯಡಿ ದಕ್ಷಿಣ ಕ್ಷೇತ್ರಗಳ ಯಾತ್ರೆ, ದ್ವಾರಕಾ ಯಾತ್ರೆ ಮತ್ತು ಪುರಿಜಗನ್ನಾಥ ದರ್ಶನ ಯಾತ್ರೆಗಳಿಗೆ ಪ್ರವಾಸ ಕೈಗೊಳ್ಳಲು ಇಚ್ಛಿಸುವ ಸಾರ್ವಜನಿಕರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಮತ್ತು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪ್ರವರ್ಗ-ಸಿ ಅಧಿಸೂಚಿತ ದೇವಸ್ಥಾನಗಳಲ್ಲಿ/ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು/ನೌಕರರನ್ನು ಉಚಿತವಾಗಿ ಕಳುಹಿಸಲು ಹಾಗೂ ಇದಕ್ಕೆ ತಗುಲುವ ವೆಚ್ಚವನ್ನು ಸಾಮಾನ್ಯ ಸಂಗ್ರಹಣ ನಿಧಿಯಿಂದ ಭರಿಸಲು ತೀರ್ಮಾನಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ

ದಕ್ಷಿಣ ಕ್ಷೇತ್ರಗಳ ಯಾತ್ರಾ: ರಾಮೇಶ್ವರ-ಕನ್ಯಾಕುಮಾರಿ-ಮಧುರೈ-ತಿರುವನಂತಪುರಂ ಕ್ಷೇತ್ರಗಳನ್ನು ಒಳಗೊಂಡ 6 ದಿನಗಳ ಯಾತ್ರಾ ಪ್ಯಾಕೇಜ್‌ಗೆ ಒಟ್ಟು ರೂ. 25000/- ಗಳು ತಗುಲಲಿದ್ದು, ಕರ್ನಾಟಕ ಸರ್ಕಾರದ ವತಿಯಿಂದ ಅಂದಾಜು ರೂ. 10,000/- ಗಳನ್ನು ಭರಿಸಲಾಗುವುದು. ಇದರಲ್ಲಿ ಫಿಕ್ಸೆಡ್ ಹ್ಯೂಲೇಜ್, ಆರ್‌ಯು ಚಾರ್ಚ್, ಸ್ಟೇಬಲಿಂಗ್ ಚಾರ್ಚ್, ವೈದ್ಯಕೀಯ ವೆಚ್ಚ, ಇತರೆ ವೆಚ್ಚ ಹಾಗೂ ಸಹಾಯ ಧನ ರೂ. 5000/-ಗಳು ಒಳಗೊಂಡಿರುತ್ತದೆ.

ಯಾತ್ರಾರ್ಥಿಗಳು ಬುಕ್ಕಿಂಗ್ ಮೊತ್ತವಾಗಿ ರೂ. 10,000/-ಗಳನ್ನು ಮಾತ್ರ ಪಾವತಿಸಬೇಕಾಗಿರುತ್ತದೆ.

Bharat Gaurav Yatra ರೈಲು ಹತ್ತುವ ಮತ್ತು ಇಳಿಯುವ ಸ್ಥಳ: ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಬೀರೂರು, ತುಮಕೂರು, ಬೆಂಗಳೂರು.
ದ್ವಾರಕಾ ಯಾತ್ರೆ: ದ್ವಾರಕಾ-ನಾಗೇಶ್ವರ-ಸೋಮನಾಥ-ತ್ರಯಂಬಕೇಶ್ವರ ಕ್ಷೇತ್ರಗಳನ್ನು ಒಳಗೊಂಡ ೮ ದಿನಗಳ ಯಾತ್ರಾ ಪ್ಯಾಕೇಜ್
ಪುರಿ ಜಗನ್ನಾಥ ದರ್ಶನ: ಪುರಿ-ಕೊನಾರ್ಕ್-ಗಂಗಾಸಾಗರ್- ಕೊಲ್ಕತಾ ಒಳಗೊಂಡ ೮ ದಿನಗಳ ಯಾತ್ರಾ ಪ್ಯಾಕೇಜ್. ಈ ಪ್ಯಾಕೇಜ್‌ಗೆ ಒಟ್ಟು ರೂ.32500/-ಗಳು ತಗುಲಲಿದ್ದು, ಕರ್ನಾಟಕ ಸರ್ಕಾರದಿಂದ ರೂ. 17,500/-ಗಳನ್ನು ಭರಿಸಲಾಗುತ್ತದೆ. ಫಿಕ್ಸೆಡ್ ಹ್ಯೂಲೇಜ್, ಆರ್‌ಯು ಚಾರ್ಚ್, ಸ್ಟೇಬಲಿಂಗ್ ಚಾರ್ಚ್, ವೈದ್ಯಕೀಯ ವೆಚ್ಚ, ಇತರೆ ವೆಚ್ಚ ಹಾಗೂ ಸಹಾಯ ಧನ ರೂ. 7500/-ಗಳು ಒಳಗೊಂಡಿರುತ್ತದೆ.

ಯಾತ್ರಾರ್ಥಿಗಳು ಬುಕ್ಕಿಂಗ್ ಮೊತ್ತವಾಗಿ ರೂ. 15,000/-ಗಳನ್ನು ಮಾತ್ರ ಪಾವತಿಸಬೇಕಾಗುತ್ತದೆ.
ರೈಲು ಹತ್ತುವ ಮತ್ತು ಇಳಿಯುವ ಸ್ಥಳ: ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಬೀರೂರು, ತುಮಕೂರು, ಬೆಂಗಳೂರು.
ಪ್ರಯಾಣಿಸುವಾಗ ಆಧುನಿಕ ಪ್ಯಾಂಟ್ರಿ ಕಾರಿನಲ್ಲಿ ತಯಾರಿಸಿದ ತಾಜಾ ಸ್ಥಳೀಯ ಆಹಾರವನ್ನು ನೀಡಲಾಗುತ್ತದೆ. ಈ ಪ್ಯಾಕೇಜಿನಲ್ಲಿ 03 ಟೈರ್ ಎ.ಸಿ.ರೈಲಿನಲ್ಲಿ ಪ್ರಯಾಣ, ಊಟ ವಸತಿ, ಸ್ಥಳೀಯ ಸಾರಿಗೆ ಮತ್ತು ದರ್ಶನ ವ್ಯವಸ್ಥೆ ಇರುತ್ತದೆ. ಯಾತ್ರಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ವೈದ್ಯಕಿಐ ಸಹಾಯ ವ್ಯವಸ್ಥೆ ಇರುತ್ತದೆ.

ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಮುಜರಾಯಿ ತಹಶೀಲ್ದಾರ್‌ರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...