Monday, May 4, 2026
Monday, May 4, 2026

Rotary Club Shimoga ಪ್ರವಾಸವು ಮಕ್ಕಳಲ್ಲಿ ಒಗ್ಗಟ್ಟು,ಸಹಬಾಳ್ವೆ & ಪರಸ್ಪರ ಸಂತೋಷ,ಸಹಕಾರ ಬೆಳೆಸುತ್ತದೆ- ಜಿ.ಕಿರಣ್ ಕುಮಾರ್

Date:

Rotary Club Shimoga ಶೈಕ್ಷಣಿಕ ಪ್ರವಾಸವು ಮಕ್ಕಳಿಗೆ ವಿಶೇಷ ಮೌಲ್ಯಗಳನ್ನು ಕಲಿಸುತ್ತದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಜಿ.ಕಿರಣ್ ಕುಮಾರ್ ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಶಾಲೆಯ ಮಕ್ಕಳಿಗೆ ಶಿಮುಲ್ ಡೈರಿಗೆ ಆಯೋಜಿಸಿದ್ದ ಶೈಕ್ಷಣಿಕ ಕ್ಷೇತ್ರ ಪ್ರವಾಸದಲ್ಲಿ ಮಾತನಾಡಿದರು.

ಮಕ್ಕಳಲ್ಲಿ ಒಗ್ಗಟ್ಟು ಸಹಬಾಳ್ವೆ ಮತ್ತು ಪರಸ್ಪರ ಸಂತೋಷ ಸಹಕಾರ ಹಂಚುವ ಭಾವನೆ ಹೆಚ್ಚುತ್ತದೆ. ಮಕ್ಕಳಿಗೆ ನಿತ್ಯದ ಶಾಲಾ ವಾತಾವರಣದಿಂದ ಹೊರಕರೆತಂದು ಆಕರ್ಷಣೀಯ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡುವುದರಲ್ಲಿ ಸಫಲವಾಗುತ್ತದೆ ಎಂದು ತಿಳಿಸಿದರು.

ರೋಟರಿ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ವಿಶೇಷವಾಗಿ ಸೇವಾ ಚಟುವಟಿಕೆಗಳನ್ನು ನಡೆಸುತ್ತಿದೆ. ಉಚಿತ ಆರೋಗ್ಯ ಶಿಬಿರ, ಅರಿವು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರಗಳನ್ನು ನಡೆಸಿಕೊಂಡು ಬರುತ್ತಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಪೂರಕವಾದ ತರಬೇತಿ ನೀಡುತ್ತಿದೆ ಎಂದು ತಿಳಿಸಿದರು.

Rotary Club Shimoga ಡಿವಿಎಸ್ ಶಾಲೆಯ 80 ವಿದ್ಯಾರ್ಥಿಗಳು ಭೇಟಿ ನೀಡಿ ಡೈರಿಯಲ್ಲಿ ಉತ್ಪಾದಿಸುವ ವಿವಿಧ ಉತ್ಪನ್ನಗಳ ಬಗ್ಗೆ ಸಮಗ್ರ ಮಾಹಿತಿ ನೀಡಲಾಯಿತು. ಇದರಿಂದ ವಿದ್ಯಾರ್ಥಿಗಳಿಗೆ ಹಾಲಿನ ಉತ್ಪಾದನೆಗಳ ಬಗ್ಗೆ ಅಮೂಲ್ಯ ಜ್ಞಾನ ಪಡೆದರು.

ಶಾಲೆಯ ಮಕ್ಕಳ ಜತೆ ಡಿವಿಎಸ್ ಶಾಲಾ ಶಿಕ್ಷಕರಾದ ಶ್ವೇತಾ, ಸಪ್ನಾ, ವೀಣಾ, ಪ್ರಭಾಕರ್, ಜಯಂತ್ ಅಶೋಕ್ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಬಿ.ವಿ.ಈಶ್ವರ್, ಸಹ ಕಾರ್ಯದರ್ಶಿ ಜಯಶೀಲ ಶೆಟ್ಟಿ ಹಾಗೂ ಖಜಾಂಚಿ ಬಸವರಾಜ್.ಬಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...