Wednesday, July 8, 2026
Wednesday, July 8, 2026

Santosh S Lad ಬಾಲ ಕಾರ್ಮಿಕ ಪದ್ಧತಿ ಹೋಗಲಾಡಿಸುವಲ್ಲಿ ಅರಿವು ಹೆಚ್ಚಿಸಬೇಕು- ಸಚಿವ ಸಂತೋಷ್ ಲಾಡ್

Date:

Santosh S Lad ಬಾಲ ಕಾರ್ಮಿಕತೆಯನ್ನು ಹೋಗಲಾಡಿಸಲು ಜಾಗೃತಿಯನ್ನು ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ತಂಡ ಕಾರ್ಯಪ್ರವೃತ್ತರಾಗಬೇಕೆಂದು ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್ ತಿಳಿಸಿದರು.
ಸೋಮವಾರ ¸ರ್ಕ್ಯುಟ್ ಹೌಸ್‌ನಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ನಡೆಸಿದ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಬಾಲ ಕಾರ್ಮಿಕ ಪದ್ದತಿಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಅರಿವು ಹೆಚ್ಚಿಸಬೇಕು. ಭಯ ಅಲ್ಲ, ಬದಲಾಗಿ ಜಾಗೃತಿ ಮೂಡಿಸಬೇಕು. ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಓ ಮತ್ತು ಪೊಲೀಸ್ ವರಿಷ್ಟಾಧಿಕಾರಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ಅಭಿಯಾನದ ರೀತಿಯಲ್ಲಿ ಜಾಗೃತಿ ಮೂಡಿಸಬೇಕು. ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕೆಂದರು.
ಜಿಲ್ಲೆಯಲ್ಲಿ ಈ ವರ್ಷ 8 ಬಾಲ ಕಾರ್ಮಿಕ ಪ್ರಕರಣ ವರದಿಯಾಗಿದೆ. 5 ಪ್ರಕರಣಗಳು ಬೇರೆ ರಾಜ್ಯದಿಂದ ವಲಸೆ ಬಂದಂತಹ ಪ್ರಕರಣ ಆಗಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಒಂದು ಪ್ರಕರಣ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಇದೆ. ಮತ್ತಿಬ್ಬರನ್ನು ಮುಖ್ಯವಾಹಿನಿಗೆ ತಂದು ಶಿಕ್ಷಣ ಕೊಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಪ್ರಕರಣಗಳು ಹೆಚ್ಚು ಇಲ್ಲ. ಜಾಗೃತಿ ಮತ್ತು ಅರಿವು ಕಾರ್ಯಕ್ರಮಗಳ ಮೂಲಕ ಈ ಸಂಖ್ಯೆಯನ್ನೂ ತಗ್ಗಿಸಬಹುದು ಎಂದರು.
Santosh S Lad ಮಾಜಿ ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ್ ಮಾತನಾಡಿ, ಜಿಲ್ಲೆಯಲ್ಲಿ ಹಲವು ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆ ಇದೆ. ಅಧಿಕೃತ ಲೈಸೆನ್ಸ್ ಪಡೆಯದೇ ಹೊರಗುತ್ತಿಗೆ ಏಜೆನ್ಸಿ ನಡೆಸುತ್ತಿರುವ ಬಗ್ಗೆ, ಹಲವು ಕಾರ್ಮಿಕ ಸಮಸ್ಯೆಗಳು ಹಾಗೂ ಕಾರ್ಮಿಕರಲ್ಲದೇ ಇರುವವರೂ ಕಾರ್ಮಿಕರಾಗಿ ನೋಂದಣಿಯಾಗುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೋರಿದರು.
ಸಚಿವರು ಪ್ರತಿಕ್ರಿಯಿಸಿ, ಕಾರ್ಮಿಕರಲ್ಲದೇ ಇರುವವರೂ ಕಾರ್ಮಿಕರೆಂದು ನೋಂದಣಿಯಾಗುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಸೆಕ್ಟರ್‌ವಾರು 43 ಸೆಕ್ಟರ್‌ಗಳಲ್ಲಿ ಹೊಸದಾಗಿ ವಾಹನಗಳನ್ನು ಖರೀದಿಸಿ, ಕಟ್ಟಡ ನಿರ್ಮಾಣ ಸ್ಥಳಗಳಿಗೆ ತೆರಳಿ ಕಾರ್ಮಿಕರ ನೈಜತೆಯನ್ನು ಪರಿಶೀಲಿಸಲಾಗುವುದು ಎಂದರು.
ಹಾಗೂ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಸೊಸೈಟಿಗಳನ್ನು ರಚಿಸಿ, ಜಿಲ್ಲಾಧಿಕಾರಿಗಳ ಮುಖಾಂತರವೇ ಹೊರಗುತ್ತಿಗೆ ನೌಕರರಿಗೆ ವೇತನ ಮತ್ತು ಇತರೆ ಸೌಲಭ್ಯಗಳನ್ನು ನೀಡಲಾಗುವುದು. ಕಾರ್ಮಿಕರ ಸಮಸ್ಯೆಗಳನ್ನು ಹೋಗಲಾಡಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇನ್ನು ಆರು ತಿಂಗಳಲ್ಲಿ ಹಲವಾರು ಬದಲಾವಣೆ ಆಗಲಿದೆ ಎಂದು ತಿಳಿಸಿದರು.
ವಿಧಾನಸಭಾ ಶಾಸಕರಾದ ಗೋಪಾಲಕೃಷ್ಣ ಬೇಳೂರು, ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು, ಡಾ.ಧನಂಜಯ ಸರ್ಜಿ, ಮಾಜಿ ವಿಧಾನಸಭಾ ಶಾಸಕ ಪ್ರಸನ್ನಕುಮಾರ್, ಕಾರ್ಮಿಕ ಇಲಾಖೆ ಆಯುಕ್ತರಾದ ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಿಇಓ ಮತ್ತು ಕಾರ್ಯದರ್ಶಿ ಭಾರತಿ.ಡಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ.ಸಿಇಓ ಹೇಮಂತ್ ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಕಾರ್ಮಿಕ ಅಧಿಕಾರಿ, ಇತರೆ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...