S.N. Channabasappa ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಶಿವಮೊಗ್ಗ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನ ಸಭೆ ನಡೆಸಿ,
- ಇ-ಆಸ್ತಿ ಪ್ರಗತಿಯ ಕುರಿತು ಚರ್ಚಿಸಿದರು.
- ಶಿವಮೊಗ್ಗ ನಗರದ ವಿದ್ಯುತ್ ವಿಭಾಗಗಳ ಸೌಕರ್ಯಗಳ ಬಗ್ಗೆ ಚರ್ಚಿಸಿದರು.
- ಆರೋಗ್ಯ ವಿಭಾಗಕ್ಕೆ ಸಂಬಂಧಿಸಿದಂತೆ ಆರೋಗ್ಯ ವಿಭಾಗದ ಸೌಕರ್ಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
- ಸ್ಮಾರ್ಟ್ ಸಿಟಿ ಯೋಜನೆ ಮತ್ತು ಮಹಾನಗರ ಪಾಲಿಕೆಗೆ ಹಸ್ತಾಂತರದ ಪ್ರಕ್ರಿಯೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
- ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆಯ ಬಗ್ಗೆ ಅನೇಕ ವಿಷಯಗಳನ್ನು ಚರ್ಚಿಸಿದರು.
- ಮಹಾನಗರ ಪಾಲಿಕೆ ವ್ಯಾಪ್ತಿಯ ಸಿವಿಲ್ ಕಾಮಗಾರಿಗಳ ಪ್ರಗತಿ ಪರಿಶೀಲನ ಬಗ್ಗೆ ಚರ್ಚಿಸಿದರು.
- ಸರ್ಕಾರದ ಯೋಜನೆಗಳು ಮತ್ತು ಮುಜುರಾಯಿ ಕಾಮಗಾರಿಗಳಿಗೆ ನಿರಾಕ್ಷೇಪಣಾ ಪತ್ರ ನೀಡುವ ಕುರಿತು ಚರ್ಚಿಸಿದರು.
- ಗಾಂಧಿ ಪಾರ್ಕ್ ಮತ್ತು ಶಿವಮೊಗ್ಗ ನಗರದ ಇತ್ಯಾದಿ ಉದ್ಯಾನವನಗಳಿಗೆ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು.
- ಶಾಲಾ-ಕಾಲೇಜುಗಳ ಆಸ್ತಿಗಳನ್ನು ಖಾತೆ ದಾಖಲಿಸುವ ಬಗ್ಗೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲೋನಿಗಳ ಅಭಿವೃದ್ಧಿ ಯೋಜನೆ ಬಗ್ಗೆ ಚರ್ಚಿಸಲಾಯಿತು.
- ಕೊಳಗೇರಿಗಳ ಮೂಲ ಸೌಕರ್ಯಗಳ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು.
- ಮಹಾನಗರ ಪಾಲಿಕೆಯ ಮಳಿಗೆಗಳು, ಬಟ್ಟೆ ಮಾರ್ಕೆಟ್, ಮೈದಾನದ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದರು.
S.N. Channabasappa ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ ಎಸ್ ಅರುಣ್ ಮತ್ತು ಡಾ. ಧನಂಜಯ್ ಸರ್ಜಿ, ಮಹಾನಗರ ಪಾಲಿಕೆ ಆಯುಕ್ತರಾದ ಕವಿತಾ, ಉಪ ಆಯುಕ್ತರು( ಆಡಳಿತ) ತುಷಾರ್ B ಹೊಸೂರ್ ಸೇರಿದಂತೆ ಇಲಾಖಾವಾರು ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
