Thursday, September 17, 2026
Thursday, September 17, 2026

DC Shivamogga ಗೋರಕ್ಷಣೆಗೆ ಶ್ರೀಜ್ಞಾನೇಶ್ವರಿ ಗೋ ಶಾಲೆ& ದೈವಜ್ಞ ಬ್ರಾಹ್ಮಣ ಸಮಾಜದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Date:

DC Shivamogga ಗೋವುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಗೋಶಾಲೆಗಳಿಗೆ ಭದ್ರತೆ ಒದಗಿಸುವಂತೆ ಆಗ್ರಹಿಸಿ ನಗರದ ಶ್ರೀ ಜ್ಞಾನೇಶ್ವರಿ ಗೋಶಾಲೆ ಹಾಗೂ ದೈವಜ್ಞ ಬ್ರಾಹ್ಮಣ ಸಮಾಜದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು.
ಪವಿತ್ರ ಗೋಮಾತೆಗೆ ಕ್ರೂರ ಚಿತ್ರಹಿಂಸೆ ನೀಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಬೆಂಗಳೂರಿನ ಚಾಮರಾಜಪೇಟೆ ವ್ಯಾಪ್ತಿಯಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದು ಚಿತ್ರಹಿಂಸೆ ನೀಡಿರುವುದು ಆಘಾತ ಉಂಟು ಮಾಡಿದೆ. ಗೋಮಾತೆಗೆ ನೋವು ನೀಡಿರುವ ಘಟನೆ ಗೋಪಾಲಕರು ಹಾಗೂ ಗೋಪ್ರೇಮಿಗಳಿಗೆ ನೋವುಂಟು ಮಾಡಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
DC Shivamogga ರಾಜ್ಯದಲ್ಲಿ ಗೋವುಗಳಿಗೆ ರಕ್ಷಣೆ ಇಲ್ಲವಾಗಿದೆ. ಗೋವುಗಳಿಗೆ ಚಿತ್ರಹಿಂಸೆ ನೀಡುವವರ ಸಂಖ್ಯೆ ಹೆಚ್ಚಾಗಿದೆ. ಮತಾಂಧ ಶಕ್ತಿಗಳ ಕೈವಾಡ ಕಂಡು ಬರುತ್ತಿದೆ. ಪ್ರಕರಣವನ್ನು ಅಖಂಡ ಗೋಪ್ರೇಮಿಗಳು, ಜ್ಞಾನೇಶ್ವರಿ ಗೋಶಾಲೆ ಆಡಳಿತ ಮಂಡಳಿ ಹಾಗೂ ದೈವಜ್ಞ ಬ್ರಾಹ್ಮಣ ಸಮಾಜದ ಪದಾಧಿಕಾರಿಗಳು ಖಂಡಿಸುತ್ತೇವೆ. ಗೋವುಗಳಿಗೆ ಹಿಂಸೆ ನೀಡಿರುವ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ವಿವಿಧೆಡೆ ಇರುವ ಗೋಶಾಲೆಗಳಿಗೆ ಭದ್ರತೆ ಒದಗಿಸಬೇಕು ಎಂದು ಮನವಿ ಮಾಡಿದರು.
ಜ್ಞಾನೇಶ್ವರಿ ಗೋಶಾಲೆ ಅಧ್ಯಕ್ಷ ಚಂದ್ರಹಾಸ ಪಿ.ರಾಯ್ಕರ್, ಪ್ರಶಾಂತ್ ಸಿ.ರಾಯ್ಕರ್, ಗುರುರಾಜ್ ಶೇಟ್, ಗಣೇಶ್, ದೈವಜ್ಞ ಸಮಾಜದ ಪ್ರಕಾಶ್, ಎಸ್.ಪಾಂಡುರಂಗ ಶೇಟ್, ಸೋಮೇಶ್, ಕೃಷ್ಣಮೂರ್ತಿ, ರಾಘವೇಂದ್ರ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...