Thursday, June 18, 2026
Thursday, June 18, 2026

Kho Kho World Cup ಶಿವಮೊಗ್ಗದ ಹೆಮ್ಮೆ ದೈಹಿಕ ಶಿಕ್ಷಕ ಎಸ್. ಗಿರೀಶ್ ಈಗ ವಿಶ್ವಕಪ್ ಖೋ ಖೋ ಪಂದ್ಯಾವಳಿಗೆ ತೀರ್ಪುಗಾರರಾಗಿ ನೇಮಕ

Date:

Kho Kho World Cup ವಿಶ್ವ ಕಪ್ ಖೋ ಖೋ ರಾಷ್ಟ್ರ ರಾಜಧಾನಿ ದೆಹಲಿಯ ಇಂದಿರಾಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಜನವರಿ 13 ರಿಂದ 19 ರವರೆಗೆ ವಿಶ್ವಕಪ್ ನಡೆಯುತ್ತಿರುವುದು ಐತಿಹಾಸಿಕ ಹೆಮ್ಮೆಯ ವಿಚಾರ. ಪ್ರಥಮ ವಿಶ್ವಕಪ್ ಖೋ ಖೋ ದಲ್ಲಿ ಪುರುಷ ಮತ್ತು ಮಹಿಳೆಯರ 20 ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿವೆ.
ಈ ಕ್ರೀಡಾಕೂಟದಲ್ಲಿ ಅಂತರಾಷ್ಟ್ರೀಯ ತಾಂತ್ರಿಕ ತೀರ್ಪುಗಾರರಾಗಿ ಶಿವಮೊಗ್ಗ ತಾಲೂಕಿನ ಹಕ್ಕಿ ಪಿಕಿ ಕ್ಯಾಂಪಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಈ ಹಿಂದೆ ರಾಜ್ಯ, ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದ ಏಷ್ಯನ್ ಚಾಂಪಿಯನ್ಶಿಪ್ ನಲ್ಲಿ ತೀರ್ಪುಗಾರರಾಗಿ ಭಾಗವಹಿಸಿ ಉತ್ತಮ ಕಾರ್ಯನಿರ್ವಹಿಸಿ ಪ್ರಸಂಶೆಗೆ ಪಾತ್ರರಾಗಿದ್ದಾರೆ. ಕರ್ನಾಟಕದಿಂದ ಮತ್ತು ಶಿವಮೊಗ್ಗ ಜಿಲ್ಲೆಯಿಂದ ವಿಶ್ವಕಪ್ ಪಂದ್ಯಾವಳಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ.ಗಿರೀಶ್ ಎಸ್. 12ನೇ ವಯಸ್ಸಿನಿಂದ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಖೋ ಖೋ ತರಬೇತಿಯನ್ನು ಪಡೆಯುತ್ತಿದ್ದರು.
Kho Kho World Cup ಫ್ರೆಂಡ್ಸ್ ರಿಕ್ರಿಯೇಶನ್ ಅಸೋಸಿಯೇಷನ್ ವತಿಯಿಂದ ಅನೇಕ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದರು. ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ನಲ್ಲಿ ಒಂದು ಬಾರಿ,ಸೀನಿಯರ್ ವಿಭಾಗದಲ್ಲಿ ಏಳು ಬಾರಿ, ಆಲ್ ಇಂಡಿಯಾ ಪಂದ್ಯಾವಳಿಯಲ್ಲಿ ಮೂರು ಬಾರಿ ಆಡಿ,ಪ್ರಥಮ, ದ್ವಿತೀಯ ಸ್ಥಾನವನ್ನು ಪಡೆದು, ರಾಜ್ಯ, ರಾಷ್ಟ್ರ ಹಾಗೂ ಜಿಲ್ಲೆಗೆ ಕೀರ್ತಿ ತಂದಿರುವುದು ಅವಿಸ್ಮರಣೀಯವೇ ಹೌದು.
ಗಿರೀಶ್ ಎಸ್. ದೆಹಲಿಯಲ್ಲಿ ನಡೆಯುವ ವಿಶ್ವಕಪ್ ಖೋ ಖೋ ದಲ್ಲಿ ತಾಂತ್ರಿಕ ತೀರ್ಪುಗಾರರಾಗಿ ಸೇವೆ ಸಲ್ಲಿಸಿರುವುದು ಸಂತೋಷದ ವಿಚಾರ. ಉತ್ತಮ ನಿರ್ಣಾಯಕ ನೀಡುವುದರೊಂದಿಗೆ ರಾಜ್ಯಕ್ಕೂ ಹಾಗೂ ಜಿಲ್ಲೆಗೆ ಕೀರ್ತಿ ತರಲೆಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಂಜುನಾಥ ಎಸ್. ಆರ್. ಹಾಗೂ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳಾದ ಪ್ರಕಾಶ್ ಎಂ., ಜಿಲ್ಲೆಯ ಸಂಘ-ಸಂಸ್ಥೆಗಳು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...