Thursday, March 19, 2026
Thursday, March 19, 2026

Bharat Scouts and Guides ಸಂಚಾರ ಕಾನೂನು ಅರಿತ ನಂತರ ವಾಹನ ಖರೀದಿ‌ಸಿ, ಚಾಲನೆ ಮಾಡಿ- ಅನಿಲ್ ಕುಮಾರ್ ಭೂಮರೆಡ್ಡಿ

Date:

Bharat Scouts and Guides ಪ್ರತಿಯೊಬ್ಬರೂ ವಾಹನ ಕೊಂಡುಕೊಳ್ಳುವಾಗ ಅದರ ಕಾಯ್ದೆ ಕಾನೂನು ತಿಳಿದುಕೊಳ್ಳುವ ಅವಶ್ಯಕತೆಯಿದೆ. ಅದರ ಕಾಯ್ದೆ, ಕಾನೂನು ತಿಳಿದುಕೊಂಡ ಬಳಿಕವಷ್ಟೇ ವಾಹನ ಕೊಂಡು ಚಲಾಯಿಸಿ ಎಂದು ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಹೇಳಿದ್ದಾರೆ. ಇಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶಿವಮೊಗ್ಗ ನಗರ ಸಂಚಾರ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ರಸ್ತೆ ಸುರಕ್ಷತಾ ಸಪ್ತಾಹ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ್ದಾರೆ.

ಪ್ರತಿಯೊಬ್ಬರೂ ಅದರಲ್ಲೂ ಯುವಕ-ಯುವತಿಯರು ನಿಯಾಮವಳಿಗಳನ್ನು ಪಾಲನೆ ಮಾಡುವುದರ ಮೂಲಕ ವಾಹನ ಚಲಾವಣೆಗೆ ಮುಂದಾಗಬೇಕು. ಪರವಾನಿಗಿ ಇದ್ದರಷ್ಟೇ ವಾಹನ ಚಲಾಯಿಸಬೇಕು. ರಸ್ತೆ ನಿಯಾಮಾವಳಿ ಮತ್ತು ಪರವಾನಿಗೆ ಹೊಂದ ಬಳಿಕವಷ್ಟೇ ವಾಹನ ಚಲಾಯಿಸಬೇಕೆಂದು ಕಿವಿ ಮಾತು ಹೇಳಿದರು.

ಇನ್ನು 18 ವರ್ಷ ವಯಸ್ಸಿನೊಳಗೆ ಇರುವವರು ಯಾರೂ ಕೂಡ ವಾಹನ ಚಲಾಯಿಸಬಾರದು. ಪರವಾನಿಗೆ ಇದ್ದವರು ವಾಹನ ಚಲಾಯಿಸಬೇಕಾದಲ್ಲಿ ಎಲ್ಲಾ ದಾಖಲೆಗಳು ಹೊಂದಿರಬೇಕು. ನಮ್ಮ ದಾರಿಯಲ್ಲಿ ನಾವು ಸರಾಗವಾಗಿ ಸಾಗಿದರೆ, ರಸ್ತೆ ಸುರಕ್ಷತೆ ಕಾಪಾಡಿದಂತಾಗುತ್ತದೆ. ಎಲ್ಲರೂ ಹೆಲ್ಮೆಟ್ ಧರಿಸಿಯೇ ವಾಹನ ಚಲಾಯಿಸಬೇಕು. ಮಕ್ಕಳು ಕೂಡ ಹೆಲ್ಮೆಟ್ ಧರಿಸಿಯೇ ವಾಹನದಲ್ಲಿ ಸಾಗಬೇಕು. ಇತರರಿಗೂ ವಾಹನ ಚಲಾವಣೆ ಬಗ್ಗೆ ಜಾಗೃತಿ ಮೂಡಿಸಿ ಎಂದು ಕರೆ ನೀಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್, ಇದರಲ್ಲಿ ಹೊಸತನವಿದೆ. ಜೀವನದಲ್ಲಿ ಹೊಸತನ ಕಲಿಯಬೇಕು. ಹಾಗೆ ನಾನು ಸ್ಕೌಟ್ಸ್ ಸೆಲ್ಯೂಟ್ ಬಗ್ಗೆ ಇಂದು ತಿಳಿದುಕೊಂಡಿದ್ದೆನೆ. ಬಹಳಷ್ಟು ಧೈರ್ಯ ಶಾಲಿಗಳಾಗಲು ಈ ರೀತಿಯ ಕೈಕುಲುಕುವ ಮೂಲಕ ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಸೇವೆ ಸಲ್ಲಿಸುತ್ತಾರೆ. ಪ್ರತಿದಿನ ಕಲಿಕೆ ಎಂಬುದು ಇರುತ್ತದೆ. ಇಲ್ಲಿ ಸೆಲ್ಯೂಟ್ ಬಗ್ಗೆ ಕಲಿಕೆ ಉತ್ತಮ ಪ್ರಯೋಜನಕಾರಿಯಾಗಿದೆ ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

Bharat Scouts and Guides ಕಾರ್ಯಕ್ರಮದಲ್ಲಿ ಚಿತ್ರಕಲೆ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಸ್ಕೌಟ್ಸ್ ಮತ್ತು ಬುಲ್ ಬುಲ್ಸ್ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಸ್ಕೌಟ್ ಆಯುಕ್ತ ಎಸ್.ಜಿ. ಆನಂದ್, ಗೈಡ್ ಆಯುಕ್ತೆ ಶಕುಂತಲಾ ಚಂದ್ರಶೇಖರ, ರೋವರ್ ಜಿಲ್ಲಾ ಆಯುಕ್ತ ಕೆ. ರವಿ, ಕೇಂದ್ರ ಸ್ಥಾನಿಕ ಆಯುಕ್ತ ಜಿ. ವಿಜಯ ಕುಮಾರ್, ಚಂದ್ರಶೇಖರ್, ಚೂಡಾಮಣಿ ಪವಾರ್, ಡಿ.ವೈಎಸ್.ಪಿ. ಸಂಜೀವ್ ಕುಮಾರ್, ಟ್ರಾಫಿಕ್ ಇನ್ಸ್ ಪೆಕ್ಟರ್ ಸಂತೋಷ್.. ರಾಜೇಶ್ ಅವಲಕ್ಕಿ. ಶಿವಶಂಕರ್. ಮಲ್ಲಿಕಾರ್ಜುನ್ ಖಾನೂರ್. ಗೀತಾ ಚಿಕ್ಕಮಠ. ವೈ ಆರ್ ಕಾರ್ಯದರ್ಶಿ ಚಂದ್ರಶೇಖರ್ . ಕಾತ್ಯಾಯಿನಿ.. ರಾಮಚಂದ್ರ ಸೇರಿದಂತೆ ಇತರರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...