Monday, May 25, 2026
Monday, May 25, 2026

Karnataka Lokayukta ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

Date:

Karnataka Lokayukta ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು ಹಾಗೂ ಕರ್ನಾಟಕ ಲೋಕಾಯುಕ್ತ ವತಿಯಿಂದ ಜ.23, 24, 28 ಹಾಗೂ 29 ರಂದು ಬೆಳಿಗ್ಗೆ 11 ಗಂಟೆಯಿಂದ 12.30 ವರವರೆಗೆ ಸಾರ್ವಜನಿಕರ ಕುಂದು ಕೊರತೆಯ ಅರ್ಜಿ ಸ್ವೀಕಾರ ಸಭೆ ನಡೆಸಲಾಗುವುದು.
ಈ ಸಭೆಯಲ್ಲಿ ಸಾರ್ವಜನಿಕರು ತಮ್ಮ ಅಹವಾಲನ್ನು ನೀಡಲು ಅವಕಾಶವಿದ್ದು, ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವಲ್ಲಿ ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ, ಸರ್ಕಾರಿ ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯ ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ದ ಸಾರ್ವಜನಿಕರು ಲಿಖಿತ ಅಹವಾಲುವನ್ನು ನೀಡಬಹುದಾಗಿದೆ.
Karnataka Lokayukta ಜ.23 ರ ಬೆಳಿಗ್ಗೆ 11ಗಂಟೆಯಿಂದ 12.30 ರವರೆಗೆ ತಾಲ್ಲೂಕು ಕಛೇರಿ ಸಭಾಂಗಣ ಸೊರಬ, ತಾಲ್ಲೂಕು ಕಛೇರಿ ಸಭಾಂಗಣ ತೀರ್ಥಹಳ್ಳಿ, ಜ.24 ರ ಬೆಳಿಗ್ಗೆ 11 ಗಂಟೆಯಿAದ 12.30 ರವರೆಗೆ ತಾಲ್ಲೂಕು ಕಛೇರಿ ಸಭಾಂಗಣ ಶಿಕಾರಿಪುರ, ತಾಲ್ಲೂಕು ಪಂಚಾಯಿತಿ ಸಭಾಂಗಣ ಸಾಗರ, ಜ.28 ರ ಬೆಳಿಗ್ಗೆ 11 ಗಂಟೆಯಿAದ 12.30 ರವರೆಗೆ ತಾಲ್ಲೂಕು ಕಛೇರಿ ಸಭಾಂಗಣ ಹೊಸನಗರ, ಭದ್ರಾವತಿ ನಗರಸಭೆ ಸಭಾಂಗಣ ಭದ್ರಾವತಿ, ಜ.29 ರ ಬೆಳಿಗ್ಗೆ 11 ಗಂಟೆಯಿಂದ 12.30 ರವರೆಗೆ ತಾಲ್ಲೂಕು ಪಂಚಾಯತ್ ಸಭಾಂಗಣ ಶಿವಮೊಗ್ಗ ಈ ಸ್ಥಳಗಳಲ್ಲಿ ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಾಗುತ್ತದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಬದುಕಿನ ಪುಟದಲ್ಲೊಂದು ಘಟನೆ

ಪ್ರಸಾದ್ ಶ್ರೀವತ್ಸ ,ದಾವಣಗೆರೆ. Klive Special Article ಮನುಷ್ಯನೆಂದ ಮೇಲೆ ಹಲವಾರು ಸರಿ-ತಪ್ಪು...

Rotary Shivamogga ವೈವಿಧ್ಯಮಯ ಕಲಾಪ್ರಕಾರಗಳ ಕಲಿಕೆಯಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿ- ಡಿ.ಕಿಶೋರ್ ಕುಮಾರ್

Rotary Shivamogga ಬಾಲ್ಯದಿಂದಲೇ ಕಲೆ, ಸಾಹಿತ್ಯ, ನೃತ್ಯದ ಬಗ್ಗೆ ಮಕ್ಕಳಲ್ಲಿ ಆಸಕ್ತಿ...

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...