Sunday, December 14, 2025
Sunday, December 14, 2025

National Road Safety Month ವಾಹನ ಸವಾರರು ರಸ್ತೆ ಸುರಕ್ಷತೆ ನಿಯಮಾವಳಿ ತಿಳಿದಿರಬೇಕು- ಭೀಮನಗೌಡ ಪಾಟೀಲ್

Date:

National Road Safety Month ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಕಚೇರಿಯ ಜಂಟಿ ಸಾರಿಗೆ ಆಯುಕ್ತಾರಾದ ಭೀಮನಗೌಡ ಪಾಟೀಲ್ ಅವರು ಆರ್‌ಟಿಓ ಕಚೇರಿ ಜ್ಯೋತಿ ಬೆಳಗುವ ಮೂಲಕ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಇತ್ತೀಚೆಗೆ ಉದ್ಘಾಟಿಸಿದರು.
ಅವರು ಈ ವೇಳೆ ಮಾತನಾಡಿ, ವಾಹನ ಚಾಲನೆ ಮಾಡುವ ಪ್ರತಿಯೊಬ್ಬರು ವಾಹನ ಚಾಲನೆ ಪರವಾನಿಗೆ ಹೊಂದಿರಬೇಕು. ವಾಹನ ಚಾಲನೆ ವೇಳೆ ರಸ್ತೆ ಸುರಕ್ಷತಾ ನಿಯಮಾವಳಿಗಳನ್ನು ಪಾಲಿಸಬೇಕು. ದ್ವಿಚಕ್ರ ವಾಹನ ಚಾಲಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗುವಾಗ ಸೇಫ್ಟಿ ಹಾರ್ನೆಸ್‌ನ್ನು ಬಳಸಬೇಕು. ನಾಲ್ಕು ಚಕ್ರ ವಾಹನ ಚಾಲಕರು ಸೀಟ್ ಬೆಲ್ಟ್ ಹಾಕಿಕೊಳ್ಳಬೇಕು ಎಂದು ತಿಳಿಸಿದರು.
National Road Safety Month ಇದೇ ವೇಳೆ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಿ ಹಂಚಲಾಯಿತು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಮುರಗೇಂದ್ರ ಬಿ ಶಿರೋಳಕರ, ಹಿರಿಯ ಮೋಟಾರ್ ವಾಹನ ನಿರೀಕ್ಷಕರಾದ ಮಲ್ಲೇಶಪ್ಪ, ಮೋಟಾರ್ ವಾಹನ ನಿರೀಕ್ಷಕರಾದ ಮಂಜುನಾಥ್, ಕಚೇರಿ ಅಧೀಕ್ಷಕರಾದ ರಮ್ಯಾ, ಸಿಬ್ಬಂದಿ ಡಿ.ಮೋಹನ್ ಕುಮಾರ್ ಹಾಗೂ ಚಾಲನಾ ತರಬೇತಿ ಶಾಲೆಯ ಪ್ರಾಂಶುಪಾಲರು, ವಕೀಲರು, ಸಾರ್ವಜನಿಕರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...