Monday, May 25, 2026
Monday, May 25, 2026

Shimoga Yakshagana ಫೆಬ್ರವರಿ 22 ರಿಂದ ಶಂಭುಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ – ಶಿವಾನಂದ‌‌ ಹೆಗಡೆ

Date:

Shimoga Yakshagana “ಕೋವಿಡ್ ನಂತರದ ಕಾಲಾವಧಿಯಲ್ಲಿ‌ ಯಕ್ಷಗಾನ ಕಲಾಕೇಂದ್ರ ಆರ್ಥಿಕ ಸಂಕಷ್ಟದಿಂದ ಮುಂಚಿನಂತೆ ಕ್ರಿಯಾಶೀಲವಾಗಲಿಲ್ಲ. ಆದರೂ‌ ಪ್ರೋತ್ಸಾಹಕರು,‌ದಾನಿಗಳು ,ಆತ್ಮೀಯರಿಂದ‌ ಕೆರೆಮನೆ ಶಂಭುಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ‌‌ ವರ್ಷದಿಂದ‌ ವರ್ಷಕ್ಕೆ
ಹೊಸ ಮೆರುಗು ಪಡೆಯುತ್ತಿದೆ.
ಇಡಗುಂಜಿಯ ಮಹಾಗಣಪತಿ ಯಕ್ಷಗಾನ ಮಂಡಳಿಗೆ ಪ್ರಸ್ತುತ
ಯುನೆಸ್ಕೊ ಮಾನ್ಯತೆ ಲಭಿಸಿದೆ. ಈ ಯಶಸ್ಸಿಗೆ ಕೆರೆಮನೆ ಕುಟುಂಬದ ಹಿರಯರು ಮಂಡಳಿಯ ಕಲಾವಿದರು ಹಾಗೂ‌‌ ಯಕ್ಷಗಾನ ಪ್ರೇಮಿಗಳ ಸಂಘಟಿತ ಪ್ರಯತ್ನವೇ ಕಾರಣ ” ಎಂದು ಮಂಡಳಿಯ ನಿರ್ದೇಶಕ ಶಿವಾನಂದ ಹೆಗಡೆ ಹೇಳಿದರು.

Shimoga Yakshagana ಶಿವಮೊಗ್ಗದ ಅಭ್ಯುದಯ‌ ಮತ್ತು ಶ್ರೀಮಯ 90. ಸಾರಥಿಗಳ‌ ಆಶ್ರಯದಲ್ಲಿ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ‌ ಹೆಗಡೆ ಮಾತನಾಡುತ್ತಿದ್ದರು.
ನಮ್ಮ ಹಿರಿಯರು
ಕೇವಲ ಹನ್ನೆರಡು ರೂಪಾಯಿಗಳಿಂದ ಮಂಡಳಿಯನ್ನ ಆರಂಭ ಮಾಡಿದ್ದರು.
ಆದರೆ ಹಣಕ್ಕೆ ‌ಪ್ರಧಾನ್ಯತೆ ಕೊಡದೇ ಕಲೆಗೆ ಪ್ರಾಮುಖ್ಯತೆ ನೀಡಿದ್ದರಿಂದ‌ ಮಂಡಳಿ‌ ಇಂದಿನ ಹಂತ ಮುಟ್ಟಿದೆ. ತೊಂಭತ್ತು ವಸಂತಗಳನ್ಮ ಸಾರ್ಥಕತೆ‌‌ ದಕ್ಕಿದೆ.
ಸಂಕಷ್ಟದ ದಿನಗಳಲ್ಲಿ‌‌ ಶಿವಮೊಗ್ಗದ ‌ಯಕ್ಷಗಾನ ಪ್ರೇಮಿಗಳು,ಆಪ್ತರು‌
ಕಲೆಗೆ ನೀರೆರೆದು ಪೋಷಿಸಿದರು.
ಇಂತಹ ಕಲಾಸಂಘಟನೆ ತೊಂಭತ್ತು ವರ್ಷದ ಹರ್ಷದಲ್ಲಿದೆ. ಫೆಬ್ರವರಿ 22 ರಿಂದ‌ ಮಾರ್ಚ್ 2 ರವರೆಗೆ ‌ನಡೆಯಲಿರುವ ‌ಶಂಭುಹೆಗಡೆ ರಾಷ್ಡ್ರೀಯ ನಾಟ್ಯೋತ್ಸವಕ್ಕೆ‌‌ ಎಲ್ಲರೂ ಬನ್ನಿ‌ ಎಂದು
ಶಿವಾನಂದ ಹೆಗಡೆ ತಮ್ಮ ಸನ್ಮಾನಕ್ಕೆ ಉತ್ತರಿಸಿ ಮಾತನಾಡಿದರು.

ಅಭ್ಯುದಯ ಸಂಸ್ಥೆಯ ಲಕ್ಷ್ಮೀನಾರಾಯಣ ಕಾಶಿ ಎಲ್ಲರಿಗೂ ಸ್ವಾಗತ ಕೋರಿದರು.
ಡಾ.ರತ್ನಾಕರ್ ಶಿವಾನಂದ ಹೆಗಡೆ ಅವರನ್ನು ಆತ್ಮೀಯವಾಗಿ ಪರಿಚಯಿಸಿದರು.
ಸಂಘಟಕರಾದ ಬಾಬಣ್ಣ, ಡಾ.ಕೃಷ್ಣ ಎಸ್ ಭಟ್, ಡಾ.ಸಂಜಯ್, ಐತಾಳ್, ರಾಮಚಂದ್ರ,ಮುಂತಾದವರು‌ ಉಪಸ್ಥಿತರಿದ್ದರು.
ವಿಶೇಷ ಆಕರ್ಷಣೆಯಾಗಿ ಇಡಗುಂಜಿ ಮೇಳದವರಿಂದ
“ಸೀತಾಪಹರಣ” ಪ್ರಸಂಗದ ಪ್ರದರ್ಶನ ಏರ್ಪಡಿಸಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...