Monday, May 25, 2026
Monday, May 25, 2026

RM Manjunatha Gowda ಮಲೆನಾಡು ಅಭಿವೃದ್ಧಿ ಮಂಡಳಿಯ ಬಾಕಿ ಕಾಮಗಾರಿಗಳು‌ ಮಾರ್ಚ್ ಒಳಗೆ ಶೀಘ್ರ ಪೂರ್ಣಗೊಳ್ಳಬೇಕಿದೆ- ಆರ್.ಎಂ.ಮಂಜುನಾಥ ಗೌಡ

Date:

RM Manjunatha ಕಳೆದ ಸಾಲಿನಲ್ಲಿ ಮಂಡಳಿ ವತಿಯಿಂದ ಮಂಜೂರಾಗಿರುವ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕಿದೆ ಎಂದು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷರಾದ ಆರ್.ಎಂ.ಮಂಜುನಾಥ ಗೌಡ ಹೇಳಿದರು.
ಇತ್ತೀಚೆಗೆ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಕಚೇರಿಯಲ್ಲಿ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ 2025-26ನೇ ಸಾಲಿನ ಹೊಸ ದಿನಚರಿ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಕಳೆದ ಸಾಲಿನಲ್ಲಿ ಮಂಜೂರಾದ 954 ಕಾಮಗಾರಿಗಳ ಪೈಕಿ 335 ಕಾಮಗಾರಿಗಳು ಪೂರ್ಣಗೊಂಡಿವೆ. ಪೂರ್ಣಗೊಂಡ ಕೆಲವು ಕಾಮಗಾರಿಗಳಿಗೆ ಪಾವತಿಯೂ ಆಗಿದೆ. 282 ಕಾಮಗಾರಿಗಳಿಗೆ ಅನುಮೋದನೆ ನೀಡಿ ಏಜೆನ್ಸಿ ನಿಗದಿಗೊಳಿಸಲಾಗಿದೆ. ಮಾರ್ಚ್ ಒಳಗೆ ಬಾಕಿ ಉಳಿದ ಕಾಮಗಾರಿಗಳು ಪೂರ್ಣಗೊಳ್ಳಬೇಕಿದೆ. ಮಂಡಳಿಯಲ್ಲಿ ಸುಮಾರು ರೂ. 60 ರಿಂದ 70 ಕೋಟಿ ಅನುದಾನವೂ ಇದೆ. ಕಾಮಗಾರಿಗಳು ಶೀಘ್ರವಾಗಿ ಪೂರ್ಣಗೊಳ್ಳಬೇಕಿದೆ. ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವ ಸಂಬಂಧ ಶಾಸಕರಿಗೆ ಪತ್ರ ಬರೆಯಲಾಗಿದೆ ಎಂದರು.
RM Manjunatha ಜಿಲ್ಲೆಯಲ್ಲಿ ಮಂಡಳಿ ವತಿಯಿಂದ ಕಾಲುಸಂಕಗಳು, ಪೆವಿಲಿಯನ್, ಕುಂದಾದ್ರಿ ಬೆಟ್ಟದ ಬಳಿ, ಹುಂಚದಲ್ಲಿ ರಸ್ತೆ ಕಾಮಗಾರಿಗಳು ಸೇರಿದಂತೆ ಸುಮಾರು 1200 ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾಮಗಾರಿಗಳ ವೀಕ್ಷಣೆಗೆ ಜಿಲ್ಲಾ ಪ್ರವಾಸ ಕೈಗೊಳ್ಳಲಾಗುವುದು.
ಜಿಲ್ಲೆಯಲ್ಲಿ ಕಾಲುಸಂಕ, ಸೇತುವೆ ಮತ್ತು ಇತರೆ ಕಾಮಗಾರಿಗಳಿಗೆ ರೂ.200 ಕೋಟಿ ನಬಾರ್ಡ್ ಅನುದಾನಕ್ಕೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುದಾನ ಮಂಜೂರಾದಲ್ಲಿ ಮುಂದಿನ ವರ್ಷದಿಂದ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಹಾಗೂ ಈ ಬಾರಿ ಪ್ರತಿ ಶಾಸಕರಿಗೆ ಮಂಡಳಿಯಿAದ ತಲಾ ರೂ.1 ಕೋಟಿ ಅನುದಾನ ನೀಡುವಂತೆ ಕೋರಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಎಸ್.ಕೆ.ಮರಿಯಪ್ಪ, ಮಂಡಳಿ ಕಾರ್ಯದರ್ಶಿಗಳಾದ ಮೊಹಮ್ಮದ್ ನಜೀರ್, ಅಧೀನ ಕಾರ್ಯದರ್ಶಿ ಹನುಮಾನಾಯ್ಕ್, ಉಪ ನಿರ್ದೇಶಕ ಶಿವಾನಂದ ಕುದ್ರಿ, ಕಾರ್ಯಪಾಲಕ ಅಭಿಯಂತರ ವಿಜಯಕುಮಾರ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...