Friday, March 20, 2026
Friday, March 20, 2026

JCI Shivamogga ಜೆಸಿಐ ಪರಸ್ಪರರಲ್ಲಿ ಆತ್ಮವಿಶ್ವಾಸ ಬೆಳೆಸುತ್ತದೆ- ಎಸ್.ಎಸ್.ಜ್ಯೋತಿಪ್ರಕಾಶ್

Date:

JCI Shivamogga ಯುವಜನತೆಗೆ ಮಾರ್ಗದರ್ಶನ, ವ್ಯಕ್ತಿತ್ವ ವಿಕಸನ ಹಾಗೂ ಕೌಶಲ್ಯಗಳ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಜೆಸಿಐ ಸಂಸ್ಥೆ ಮಾಡುತ್ತಿದೆ ಎಂದು ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಹೇಳಿದರು.
ಶಿವಗಂಗಾ ಯೋಗಕೇಂದ್ರ ರಾಘವ ಶಾಖೆಯಿಂದ ನಗರದ ಶುಭಂ ಸಭಾಂಗಣದಲ್ಲಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ಸಕಾರಾತ್ಮಕ ಭಾವನೆ ಬೆಳೆಸುವಲ್ಲಿ ಹಾಗೂ ನಾಯಕತ್ವ ಗುಣ ಬೆಳೆಸುವಲ್ಲಿ ಜೆಸಿಐ ಸಂಸ್ಥೆ ಉತ್ತಮ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಜೆಸಿಐ ಸಂಸ್ಥೆಯು ಸೇವಾ ಮನೋಭಾವನೆ ಬೆಳೆಸುತ್ತದೆ. ಪರಸ್ಪರರಲ್ಲಿ ಆತ್ಮವಿಶ್ವಾಸ ವೃದ್ಧಿಸುತ್ತದೆ. ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ರಾಘವ ಶಾಖೆಯ ಯೋಗಪಟು ಜಿ.ಗಣೇಶ್ ಅವರು ಉತ್ತಮ ಸೇವಾ ಚಟುವಟಿಕೆಗಳನ್ನು ನಡೆಸಲಿ ಎಂದು ಆಶಿಸಿದರು.
JCI Shivamogga ರಾಘವ ಶಾಖೆ ಯೋಗಕೇಂದ್ರದ ಗುರು ವಿಜಯಕೃಷ್ಣ ಮಾತನಾಡಿ, ಯುವಜನತೆಗೆ ಸಂಸ್ಕಾರ, ಶಿಕ್ಷಣ ಹಾಗೂ ಸಾಮಾಜಿಕ ಬದ್ಧತೆ, ಜವಾಬ್ದಾರಿ ಕಲಿಸುವ ಕೆಲಸಗಳನ್ನು ಜೆಸಿಐ ಸಂಸ್ಥೆ ಮಾಡುತ್ತಿದೆ ಎಂದು ತಿಳಿಸಿದರು.
ಯೋಗಗುರು ಜಿ.ಎಸ್.ಓಂಕಾರ್ ಮಾತನಾಡಿ, ಜೆಸಿಐ ಸಂಸ್ಥೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ಉತ್ತಮ ಸಾಧನೆ ಮಾಡುವಂತೆ ಸೂಕ್ತ ತರಬೇತಿ ನೀಡುತ್ತಿದೆ ಎಂದು ಹೇಳಿದರು.
ಸನ್ಮಾನ ಸ್ವೀಕರಿಸಿದ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಜಿ.ಗಣೇಶ್ ಮಾತನಾಡಿ, ಜೆಸಿಐ ಸಂಸ್ಥೆಗೆ ಹೆಚ್ಚು ಹೆಚ್ಚು ಯುವಜನರು ಸೇರ್ಪಡೆಗೊಳ್ಳಬೇಕು. ಉತ್ತಮ ಸಮಾಜ ಕಟ್ಟುವಲ್ಲಿ ಯುವಜನರ ಪಾತ್ರ ದೊಡ್ಡದಿದೆ ಎಂದು ತಿಳಿಸಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಕಾಟನ್ ಜಗದೀಶ್, ಶ್ರೀನಿವಾಸ್, ಆನಂದ್, ಶಶಿಧರ್, ಸುಧಾ ಜ್ಯೋತಿಪ್ರಕಾಶ್, ಸ್ಪರ್ಶ ಅಮೋಘ್, ಸುಬ್ರಮಣಿ, ಶಂಕರ, ನರಸೋಜಿರಾವ್, ಬಿಂದು ವಿಜಯಕುಮಾರ್, ಯೋಗಪಟುಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ugadi ನಮ್ಮೂರಿನ ಯುಗಾದಿ.ಒಂದು ನೆನಪು…ಲೇ: ಎನ್.ಎಸ್.ಕುಮಾರ್.ನಿವೃತ್ತ ನಿರ್ದೇಶಕರು.( ಶಿಕ್ಷಣ ಇಲಾಖೆ).ಶಿವಮೊಗ್ಗ

Ugadi ಹಬ್ಬ ಎಂದರೆ ಎಲ್ಲರಿಗೂ ಸಡಗರ ಸಂಭ್ರಮ ಅದರಲ್ಲೂ ನಮ್ಮೂರಿನ ಹಬ್ಬದ...

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...