Sunday, March 22, 2026
Sunday, March 22, 2026

JCI Shivamogga ಜೆಸಿಐ ಪರಸ್ಪರರಲ್ಲಿ ಆತ್ಮವಿಶ್ವಾಸ ಬೆಳೆಸುತ್ತದೆ- ಎಸ್.ಎಸ್.ಜ್ಯೋತಿಪ್ರಕಾಶ್

Date:

JCI Shivamogga ಯುವಜನತೆಗೆ ಮಾರ್ಗದರ್ಶನ, ವ್ಯಕ್ತಿತ್ವ ವಿಕಸನ ಹಾಗೂ ಕೌಶಲ್ಯಗಳ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಜೆಸಿಐ ಸಂಸ್ಥೆ ಮಾಡುತ್ತಿದೆ ಎಂದು ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಹೇಳಿದರು.
ಶಿವಗಂಗಾ ಯೋಗಕೇಂದ್ರ ರಾಘವ ಶಾಖೆಯಿಂದ ನಗರದ ಶುಭಂ ಸಭಾಂಗಣದಲ್ಲಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ಸಕಾರಾತ್ಮಕ ಭಾವನೆ ಬೆಳೆಸುವಲ್ಲಿ ಹಾಗೂ ನಾಯಕತ್ವ ಗುಣ ಬೆಳೆಸುವಲ್ಲಿ ಜೆಸಿಐ ಸಂಸ್ಥೆ ಉತ್ತಮ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಜೆಸಿಐ ಸಂಸ್ಥೆಯು ಸೇವಾ ಮನೋಭಾವನೆ ಬೆಳೆಸುತ್ತದೆ. ಪರಸ್ಪರರಲ್ಲಿ ಆತ್ಮವಿಶ್ವಾಸ ವೃದ್ಧಿಸುತ್ತದೆ. ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ರಾಘವ ಶಾಖೆಯ ಯೋಗಪಟು ಜಿ.ಗಣೇಶ್ ಅವರು ಉತ್ತಮ ಸೇವಾ ಚಟುವಟಿಕೆಗಳನ್ನು ನಡೆಸಲಿ ಎಂದು ಆಶಿಸಿದರು.
JCI Shivamogga ರಾಘವ ಶಾಖೆ ಯೋಗಕೇಂದ್ರದ ಗುರು ವಿಜಯಕೃಷ್ಣ ಮಾತನಾಡಿ, ಯುವಜನತೆಗೆ ಸಂಸ್ಕಾರ, ಶಿಕ್ಷಣ ಹಾಗೂ ಸಾಮಾಜಿಕ ಬದ್ಧತೆ, ಜವಾಬ್ದಾರಿ ಕಲಿಸುವ ಕೆಲಸಗಳನ್ನು ಜೆಸಿಐ ಸಂಸ್ಥೆ ಮಾಡುತ್ತಿದೆ ಎಂದು ತಿಳಿಸಿದರು.
ಯೋಗಗುರು ಜಿ.ಎಸ್.ಓಂಕಾರ್ ಮಾತನಾಡಿ, ಜೆಸಿಐ ಸಂಸ್ಥೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ಉತ್ತಮ ಸಾಧನೆ ಮಾಡುವಂತೆ ಸೂಕ್ತ ತರಬೇತಿ ನೀಡುತ್ತಿದೆ ಎಂದು ಹೇಳಿದರು.
ಸನ್ಮಾನ ಸ್ವೀಕರಿಸಿದ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಜಿ.ಗಣೇಶ್ ಮಾತನಾಡಿ, ಜೆಸಿಐ ಸಂಸ್ಥೆಗೆ ಹೆಚ್ಚು ಹೆಚ್ಚು ಯುವಜನರು ಸೇರ್ಪಡೆಗೊಳ್ಳಬೇಕು. ಉತ್ತಮ ಸಮಾಜ ಕಟ್ಟುವಲ್ಲಿ ಯುವಜನರ ಪಾತ್ರ ದೊಡ್ಡದಿದೆ ಎಂದು ತಿಳಿಸಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಕಾಟನ್ ಜಗದೀಶ್, ಶ್ರೀನಿವಾಸ್, ಆನಂದ್, ಶಶಿಧರ್, ಸುಧಾ ಜ್ಯೋತಿಪ್ರಕಾಶ್, ಸ್ಪರ್ಶ ಅಮೋಘ್, ಸುಬ್ರಮಣಿ, ಶಂಕರ, ನರಸೋಜಿರಾವ್, ಬಿಂದು ವಿಜಯಕುಮಾರ್, ಯೋಗಪಟುಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...