Friday, March 20, 2026
Friday, March 20, 2026

DC Shivamogga ಗಣಿ ದುರ್ಬಳಕೆಯಾದರೆ ಮುಖ್ಯಾಧಿಕಾರಿಗಳೇ ಹೊಣೆ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

Date:

DC Shivamogga ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್‌ಗಳನ್ನು ಸರ್ಕಾರದ ವಿವಿಧ ಕಾಮಗಾರಿಗಳಿಗೆ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ನಿಯಮಾನುಸಾರ ಸರ್ಕಾರದ ಮರಳು ನೀತಿಯ ನಿಬಂಧನೆಗಳಿಗೊಳಪಟ್ಟು ಇಲಾಖೆಗಳಿಗೆ ಕಾಯ್ದಿರಿಸಲು ಜಿಲ್ಲಾ ಸಮಿತಿಗೆ ಇರುವ ಪ್ರದತ್ತ ಅಧಿಕಾರವನ್ನು ಬಳಸಿ, ಗಣಿಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಗಣಿಯನ್ನು ಕಾಯ್ದಿರಿಸಲು ಕೋರಿಕೆ ಸಲ್ಲಿಸಿದ ಇಲಾಖಾಧಿಕಾರಿಗಳು ಸಲ್ಲಿಸಿದ ಕೋರಿಕೆಯನ್ನು ಪರಿಶೀಲಿಸಿ, ತಮ್ಮ ಕೋರಿಕೆಯ ಗಣಿಯನ್ನು ಬಳಸಿಕೊಳ್ಳಲು ಅನುಮತಿ ನೀಡಲಾಗುವುದು ಎಂದರು.
ಗಣಿಯನ್ನು ಬಳಸಿಕೊಳ್ಳಲು ಕೋರಿಕೆ ಸಲ್ಲಿಸಿದ ಇಲಾಖಾಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳು, ಬೇಕಾದ ಮರಳಿನ ಪ್ರಮಾಣವನ್ನು ಲಿಖಿತವಾಗಿ ಬರೆದುಕೊಡಬೇಕು. ಗಣಿಯನ್ನು ದು‍ರ್ಬಳಕೆ ಮಾಡಿದಲ್ಲಿ ಸಂಬಂದಿಸಿದ ಇಲಾಖಾ ಮುಖ್ಯಾಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.

ಮರಳನ್ನು ಉದ್ದೇಶಿಕ ಕಾ‍ರ್ಯಕ್ಕೆ ಬಳಸಿಕೊಳ್ಳಬೇಕು. ನೆರೆಯ ಜಿಲ್ಲೆಗಳಿಗೇ ರವಾನಿಸಿದಲ್ಲಿ, ದುರ್ಬಳಕೆ ಮಾಡಿಕೊಂಡ ಬಗ್ಗೆ ಮಾಹಿತಿ ದೊರೆತಲ್ಲಿ ಅಂತಹ ಅಧಿಕಾರಿ-ಸಿಬ್ಬಂಧಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಅಲ್ಲದೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು ಎಂದ ಅವರು, ಮರಳು ಗಣಿಗಾರಿಕೆ ಕೈಗೊಳ್ಳುವ ಸ್ಥಳದಲ್ಲಿ ಸಿ.ಸಿ.ಕ್ಯಾಮರಾಗಳ ಅಳವಡಿಕೆ ಮಾಡಿಕೊಳ್ಳಬೇಕು. ಅಗತ್ಯವಿರುವಾಗ ಸಿಸಿ.ಕ್ಯಾಮರಾ ಚಿತ್ರೀಕರಣದ ಪ್ರತಿಯನ್ನು ಸಂಬಂದಿಸಿದ ಇಲಾಖೆಗೆ ಒದಗಿಸಲು ಬದ್ದರಾಗಿರಬೇಕು ಎಂದರು.

ಕಾಯ್ದಿರಿಸಿದ ಗಣಿಗಳಲ್ಲದೆ ಉಳಿದ ಗಣಿಗಳನ್ನು ನಿಯಮಾನುಸಾರ ವಿಲೇ ಮಾಡುವಂತೆ ಜಿಲ್ಲಾ ಹಿರಿಯ ಭೂವಿಜ್ಞಾನಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ಶಿವಮೊಗ್ಗ-ಭದ್ರಾವತಿ ತಾಲೂಕುಗಳ ವ್ಯಾಪ್ತಿಯಲ್ಲಿ ಹರಿಯುವ ತುಂಗ-ಭದ್ರಾ ನದಿ ಪ್ರದೇಶದಲ್ಲಿ ಯಾಂತ್ರಿಕ ದೋಣಿಗಳನ್ನು ಬಳಸಿ, ಅನಧಿಕೃತವಾಗಿ ಮರಳು ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿದ್ದು, ಜಿಲ್ಲಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಗಣಿಗಳಿಂದ ಮರಳು ಸಾಗಾಣಿಕೆ ನಡೆಸುವ ಗುತ್ತಿಗೆದಾರರು ತಮ್ಮ ವಾಹನಗಳಿಗೆ ಜಿ.ಪಿ.ಎಸ್ ಅಳವಡಿಸಿರಬೇಕು.ಸ್ವಂತದ್ದಾಗಿರುವ ವೇಬ್ರಿಡ್ಜ್‌ ಹೊಂದಿರಬೇಕು. ಎನ್.ಜಿ.ಟಿ.ನಿಯಮಾನುಸಾರ ಯಂತ್ರಗಳನ್ನು ಬಳಸಬಾರದು. ಮಾನವ ಸಂಪನ್ಮೂಲವನ್ನೇ ಬಳಸಿ ಗಣಿಗಾರಿಕೆ ನಡೆಸಬೇಕು. ಐ.ಎಲ್ಎಂ.ಎಸ್.ನೋಂದಣಿ ಕಡ್ಡಾಯವಾಗಿ ಮಾಡಿಕೊಂಡಿರಬೇಕು ಹಾಗೂ ಮರಳು ದಾಸ್ತಾನಿಗೆ ಸ್ಥಳವನ್ನು ಹೊಂದಿರಬೇಕು ಎಂದರು.

ಮರಳು ಗಣಿಗಾರಿಕೆ ನಡೆಯುವ ಸ್ಥಳದಲ್ಲಿ ಸುರಕ್ಷತಾ ಸಿಬ್ಬಂಧಿಯನ್ನು ನಿಯೋಜಿಸಿಕೊಳ್ಳಬೇಕು. ಜವಾಬ್ದಾರಿಯುತ ಅಧಿಕಾರಿಗಳೇ ನಿರ್ವಹಣೆಯ ಹೊಣೆ ಹೊರಬೇಕು ಎಂದ ಅವರು, ಗಣಿಗಳ ಉಸ್ತುವಾರಿಗಾಗಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿ-ಸಿಬ್ಬಂಧಿಗಳನ್ನು ನಿಯೋಜಿಸುವಂತೆ ಹಾಗೂ ಖುದ್ದು ಭೇಟಿ ನೀಡಿ ಪರಿಶೀಲಿಸುವಂತೆ ಅವರು ಸೂಚಿಸಿದರು.

DC Shivamogga ಈ ಹಿಂದೆ ಗಣಿಯನ್ನು ಪಡೆದುಕೊಂಡಿದ್ದ ಪಂಚಾಯತ್‌ರಾಜ್‌ ಇಲಾಖೆಯಿಂದ ಕಾಲಕಾಲಕ್ಕೆ ಇಲಾಖೆಗೆ ಸರಿಯಾದ ಮಾಹಿತಿ ನೀಡಿರುವುದಿಲ್ಲ. ಆದ್ದರಿಂದ ಅವರಿಗೆ ತಿಳುವಳಿಕೆ ನೀಡಬೇಕಲ್ಲದೆ ನೀಡಿರುವ ಗಣಿಯನ್ನು ಹಿಂದಕ್ಕೆ ಪಡೆದುಕೊಳ್ಳಲಾಗುವುದೆಂದವರು ನುಡಿದರು.

ಜಿಲ್ಲೆಯ ಎಲ್ಲಾ ಗಣಿಗಳ ಸಮರ್ಪಕ ನಿರ್ವಹಣೆಯ ಕುರಿತು ಆಯಾ ಪಂಚಾಯಿತಿ ವ್ಯಾಪ್ತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಇಲಾಖಾ ನಿಯಮ ಅನುಸರಿಸುತ್ತಿರುವ ಬಗ್ಗೆ ವಿಶೇಷ ಗಮನಹರಿಸಬೇಕಲ್ಲದೆ ಸಂಬಂಧಿಸಿದ ಕಂದಾಯ ಹಾಗೂ ಪೊಲೀಸ್‌ ಇಲಾಖಾಧಿಕಾರಿಗಳು ಸೂಕ್ಷ್ಮವಾಗಿ ಗಮನಿಸಬೇಕೆಂದವರು ಸೂಚಿಸಿದರು.

ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಎತ್ತುವಳಿ ಮಾಡಿ ಆಂತರಿಕ ಸ್ಥಳಗಳಲ್ಲಿನ ನದಿ ಪಾತ್ರಗಳಲ್ಲಿ ದಾಸ್ತಾನು ಮಾಡಲಾಗುವ ಮರಳನ್ನು ಜಪ್ತಿ ಮಾಡಿ, ವಶಪಡಿಸಿಕೊಂಡು ವಿಲೇವಾರಿ ಮಾಡಲು ಹಾಗೂ ದರ ನಿಗಧಿಪಡಿಸಿಕೊಡುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಮಾರ್ಗದರ್ಶನ ನೀಡಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್‌, ಜಿಲ್ಲಾ ಪಂಚಾಯಿತಿ ಉಪಕಾರ್ಯದಶಿ ಶ್ರೀಮತಿ ಜಯಲಕ್ಷ್ಮಮ್ಮ, ಹಿರಿಯ ಭೂವಿಜ್ಞಾನಿ ಟಿ.ಕೆ.ನಾಯಕ್‌ ಸೇರಿದಂತೆ ಸಂಬಂದಿಸಿದ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...