Friday, July 10, 2026
Friday, July 10, 2026

Madivala Machideva Jayanti ಫೆಬ್ರವರಿ 1. ಶೀವಮೊಗ್ಗ ಜಿಲ್ಲಾಡಳಿತದಿಂದ ಮಡಿವಾಳ ಮಾಚಿದೇವ ಜಯಂತಿಗೆ ಸಿದ್ಧತೆ

Date:

Madivala Machideva Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಮಡಿವಾಳ ಸಮಾಜ ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 01 ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಮಡಿವಾಳ ಮಾಚಿದೇವ ಜಯಂತಿಯನ್ನು ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪರವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕರಾದ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.

Madivala Machideva Jayanti ಸಂಸದರು, ವಿಧಾನಸಭಾ, ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರುಗಳು, ಮಹಾನಗರಪಾಲಿಕೆ ಮಹಾಪೌರರು, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮದ ನಾಮ ನಿರ್ದೇಶಕರು, ಜಿಲ್ಲಾ ಮಡಿವಾಳ ಸಮಾಜದ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು, ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು/ಸಿಬ್ಬಂದಿಗಳು ಸೇರಿದಂತೆ ವಿವಿಧ ಸಂಘಟನೆ ಮುಖಂಡರು ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ಶಿವಮೊಗ್ಗದ ನಿವೃತ್ತ ಪ್ರೌಢಶಾಲಾ ಶಿಕ್ಷಕ ಕೆ.ಬಿ.ಮಂಜಪ್ಪ ರವರು ವಿಶೇಷ ಉಪನ್ಯಾಸ ನೀಡುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆಗೆ ನೂತನ ಪದಾಧಿಕಾರಿಗಳ ಆಯ್ಕೆ

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ...

Friends Center Organization ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ಫ್ರೆಂಡ್ಸ್ ಸೆಂಟರ್ ಸಂಸ್ಥೆ ಪ್ರಸಿದ್ಧಿ ಪಡೆದಿದೆ- ಎಸ್.ಎನ್.ಚನ್ನಬಸಪ್ಪ

Friends Center Organization ಸಮಾಜಮುಖಿ, ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ಹಲವಾರು ಕಾರ್ಯಕ್ರಗಳನ್ನು...

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....