Wednesday, February 4, 2026
Wednesday, February 4, 2026

Nehru Youth Centre ಶಿಕ್ಷಣದಂತೆಯೇ‌‌ ಕ್ರೀಡೆಯೂ ವಿದ್ಯಾರ್ಥಿ ಜೀವನದ ಬಹುಮುಖ್ಯ ಅಂಗ-ಎಂ.ಎನ್.ಸುಧಾಕರ್

Date:

Nehru Youth Centre ಕ್ರೀಡೆಗಳು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಲಿದ್ದು ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣದ ಜೊತೆಗೆ ಕ್ರೀಡೆಗೂ ವಿದ್ಯಾರ್ಥಿಗಳು ಮಹತ್ವವನ್ನು ನೀಡಬೇಕು ಎಂದು ಹೊಸನಗರ ಜಿಮ್ಮಿ ಜಾರ್ಜ್ ವಾಲಿಬಾಲ್ ಕ್ಲಬ್ ನ ಅಧ್ಯಕ್ಷರಾದ ಎಂ.ಎನ್ ಸುಧಾಕರ್ ತಿಳಿಸಿದರು. ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಶಿವಮೊಗ್ಗ ಹಾಗೂ ಜಿಮ್ಮಿ ಜಾರ್ಜ್ ವಾಲಿಬಾಲ್ ಕ್ಲಬ್, ಹೊಸನಗರ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 30.01.2025 ರಂದು ಹೊಸನಗರದ ನೆಹರು ಮೈದಾನದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ 2024-25 ಆಯೋಜಿಸಲಾಗಿತ್ತು. Nehru Youth Centre ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕ್ರೀಡಾಕೂಟಗಳಲ್ಲಿ ಗೆಲುವು ಸೋಲು ಸಹಜ ಎರಡನ್ನು ಸಮಾನವಾಗಿ ಸ್ವೀಕರಿಸುವ ಮನಸ್ಥಿತಿ ಕ್ರೀಡಾಪಟುಗಳಲ್ಲಿ ಇರಬೇಕು ಜೊತೆಗೆ ತೀರ್ಪುಗಾರರ ತೀರ್ಪನ್ನ ಗೌರವಿಸುವ ಕೆಲಸವನ್ನು ಮಾಡಬೇಕು. ಶಿಕ್ಷಣದಂತೆ ಕ್ರೀಡೆಯು ಸಹ ವಿದ್ಯಾರ್ಥಿ ಜೀವನದ ಬಹು ಮುಖ್ಯ ಅಂಗವಾಗಿರುತ್ತದೆ. ಕ್ರೀಡಾಪಟುಗಳು ದುಶ್ಚಟಗಳಿಗೆ ದಾಸರಾಗದೆ ಕ್ರೀಡೆಯನ್ನ ರೂಡಿಸಿಕೊಂಡಲ್ಲಿ ಭವಿಷ್ಯದಲ್ಲಿ ಉತ್ತಮವಾದಂತಹ ಸ್ಥಾನವನ್ನು ಪಡೆದುಕೊಳ್ಳಬಹುದು ಎಂದರು. ಕ್ರೀಡಾಕೂಟದಲ್ಲಿ ವೈಯುಕ್ತಿಕ ಕ್ರೀಡೆಗಳಾದ 100 ಮೀ.ಓಟದಲ್ಲಿ ಸಾದ್ವಿನಿ ಪ್ರಥಮ, ಸ್ಲೋ ಸೈಕಲಿಂಗ್ನಲ್ಲಿ ಮಿನುತ ಪ್ರಥಮ, ಬ್ಯಾಡ್ಮಿಂಟನ್ನಲ್ಲಿ ನಿಖಿಲ್ ಪ್ರಥಮ ಬಹುಮಾನ ಪಡೆದಿರುತ್ತಾರೆ. ಗುಂಪು ಕ್ರೀಡೆಗಳಾದ ವಾಲಿಬಾಲ್ ನಲ್ಲಿ ಶ್ರೀ ಸಿದ್ಧಿವಿನಾಯಕ ವಾಲಿಬಾಲ್ ಕ್ಲಬ್ ರಿಪ್ಪನ್ಪೇಟೆ, ಪ್ರಥಮ, ಹಗ್ಗಜಗ್ಗಾಟದಲ್ಲಿ ಛಾಯಾ ಟೀಮ್ ಪ್ರಥಮ ಬಹುಮಾನವನ್ನು ಪಡೆದಿರುತ್ತಾರೆ. ಕ್ರೀಡೆಕೂಟದಲ್ಲಿ ಮಹಿಳೆಯರು ಮತ್ತು ಪುರುಷರು ಎಂಬ ಭೇದವಿಲ್ಲದೆ ಭಾಗವಹಿಸಿದ್ದರು. ವಿಜೇತರಿಗೆ ಸ್ಪೋಟ್ಸ್೯ ಕಿಟ್ , ಪಾರಿತೋಷಕ,ಸರ್ಟಿಫಿಕೇಟ್ ನೀಡಲಾಯಿತು. ಈ ಸಂದರ್ಭದಲ್ಲಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳಾದ ಉಲ್ಲಾಸ್, ಲೆಕ್ಕಾಧಿಕಾರಿಗಳಾದ ಎಂ. ರಮೇಶ್, ಜಿಮ್ಮಿ ಜಾರ್ಜ್ ಸಂಸ್ಥೆಯ ಸದಸ್ಯರಾದ ಕೆ ಇಲಿಯಾಸ್, ರವಿಕುಮಾರ್, ಗಣೇಶ್, ಅಖಿಲೇಶ್, ದೈಹಿಕ ಶಿಕ್ಷಕರಾದ ಧನಂಜಯ, ಸುಹಾಸ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...