Thursday, October 3, 2024
Thursday, October 3, 2024

ಮೇಕೆದಾಟು ಪಾದಯಾತ್ರೆ : ಕುಮಾರಣ್ಣನ ಕುಟುಕು

Date:

ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಎಂಬ ಪಾದಯಾತ್ರೆ ಮಾಡಿ ಉತ್ತರ ಕರ್ನಾಟಕಕ್ಕೆ ಟೋಪಿ ಹಾಕಿದಂತೆಯೇ, ಮೇಕೆದಾಟು ವಿಚಾರದಲ್ಲಿಯೂ ಕೆಪಿಸಿಸಿ ಅಧ್ಯಕ್ಷರು ನನ್ನನ್ನು ಸೇರಿದಂತೆ 83 ತಾಲೂಕುಗಳ ಜನರಿಗೆ ಮೇಕೆದಾಟು ಮಕ್ಮಲ್ ಟೋಪಿ ಹಾಕಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಣಿ ಟ್ವೀಟ್ ನಲ್ಲಿ ‘ ನೀರಾವರಿ ವಿಷಯದಲ್ಲಿ ರಾಜ್ಯಕ್ಕೆ ಎಚ್. ಡಿ. ದೇವೇಗೌಡರು ಕೊಟ್ಟ ಕಾಣಿಕೆ ಅಗಣಿತ. ಮೇಕೆದಾಟು ಮೂಲ ರುವಾರಿಯೇ ಅವರು. ಅವರನ್ನೇ ಮರೆತ ಕಾಂಗ್ರೆಸ್ ನಾಯಕರು ಸತ್ಯಕ್ಕೆ ಸಮಾಧಿ ಕಟ್ಟುತ್ತಿದ್ದಾರೆ. ಅವರಿಗೆ ಸತ್ಯ ಹೇಳಲು ನಾಲಿಗೆ ಹೊರಳುತ್ತದೆ. ಆದರೆ, ಸತ್ಯಕ್ಕೆ ನಾಲಿಗೆ ಪ್ರಮೇಯವಿಲ್ಲ. ನೀರಾವರಿಗಾಗಿ ಗೌಡರು ಅವಿರತವಾಗಿ ಶ್ರಮಿಸಿದ್ದಾರೆ. ಅವರ ನೀರಾವರಿ ಕನಸನ್ನು ಬುಲ್ಡೋಜ್ ಮಾಡುವಂತಹ ರಾಜಕಾರಣವನ್ನು ಕೈ ಮಾಡುತ್ತಿದೆ ಎಂದು ಜರಿದಿದ್ದಾರೆ.

ಬೆಂಗಳೂರಿನ ನ್ಯಾಯಯುತ ಪಾಲು ಕಾವೇರಿ ನಾಲ್ಕನೇ ಹಂತದ 9 ಟಿಎಂಸಿ ನೀರನ್ನು ತಮಿಳುನಾಡಿನ ಮಣಿದು ಕಾಂಗ್ರೆಸ್ ತಡೆದಿತ್ತು. ಆಗ ನರಸಿಂಹರಾವ್ ಪ್ರಧಾನಿಯಾಗಿದ್ದರು. ಕನ್ನಡಿಗರ ಕನಸುಗಳಿಗೆ ಕೊಳ್ಳಿ ಇಟ್ಟ ಅದೇ ಪಕ್ಷ ಈಗ ಸತ್ಯಗಳನ್ನು ಹೂತು ಮುಜುಗರವಿಲ್ಲದೆ ಮತ ಯಾತ್ರೆಗೆ ಹೊರಟಿದೆ. ಆಗ ಮುಖ್ಯಮಂತ್ರಿ ಆಗಿದ್ದ ದೇವೇಗೌಡರನ್ನು ತಡೆದ ಪಕ್ಷಕ್ಕೆ ಪ್ರಧಾನಿಯಾದ ಗೌಡರನ್ನು ತಡೆಯಲು ಧೈರ್ಯ ಸಾಲಲಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಬೆಂಗಳೂರಿಗೆ ಕಾವೇರಿ ನೀರು ಕೊಟ್ಟವರು ದೇವೇಗೌಡರು ಭಗೀರಥನನ್ನೇ ಮರೆತ ಕಾಂಗ್ರೆಸ್ ನ ಕೃತಘ್ನ ರಾಜಕಾರಣಕ್ಕೆ ಏನು ಹೇಳುವುದು? ಕಾಂಗ್ರೆಸ್ ನ ಐದುವರ್ಷದ ಸರ್ಕಾರದಲ್ಲಿ ಸಿದ್ಧಹಸ್ತರೇ ಮುಖ್ಯಮಂತ್ರಿಯಾಗಿದ್ದರು. ಆಗ ಕೇಂದ್ರದ ಮುಂದೆ ಪ್ರತಾಪ ತೋರಬಹುದಿತ್ತು. ಆಗ ಗಾಂಧಿ ಪ್ರತಿಮೆ ಮುಂದೆ ಉಪವಾಸ ಕೂತ ಮಣ್ಣಿನ ಮಗನ ಖದರಿಗೆ ಕೇಂದ್ರವೇ ನಡುಗಿತ್ತು. ದೆಹಲಿಯಿಂದ ಸಚಿವರು ಓಡಿಬಂದರು. ಅದೆಲ್ಲವನ್ನು ಕಾಂಗ್ರೆಸ್ ಮರೆತಿದೆಯೇ ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ರಾಜ್ಯದ ಹಿತದ ಪ್ರಶ್ನೆ ಬಂದಾಗ ಗೌಡರು ರಾಜ್ಯದ ವರಲ್ಲ. ಅವರೊಬ್ಬರಿಂದಲೇ ಮೇಕೆದಾಟು ಯೋಜನೆ ಸಾಕಾರ ಸಾಧ್ಯ. ಇಲ್ಲಿ 30ವರ್ಷ ಆಳಿದವರು ಕಾವೇರಿ ಕೃಷ್ಣ ವಿಚಾರದಲ್ಲಿ ಕೊಟ್ಟ ಕೊಡುಗೆ ಏನು ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ದೇವೇಗೌಡರು ಕೃಷ್ಣೆ, ಕಾವೇರಿ ಕೊಳ್ಳದಲ್ಲಿ ಮಾಡಿದ ಸಾಧನೆ ತಿಳಿಯಲು ಇತಿಹಾಸದ ಪುಟಗಳನ್ನು ನೋಡಬೇಕು. ಪಾಪ ತೊಳೆಯುವ ತಾಯಿ ಲೋಕಪಾವನಿ ಈಗ ಓಟಿನ ದಾಳವಾಗುತ್ತಿರುವುದು ನಾಡಿನ ದುರ್ದೈವ. ನೀರಿನ ಮುಂದೆ ಕಪಟನಾಟಕ ಮಾಡುವ ಸಿದ್ಧಹಸ್ತ, ಡಿಸೈನ್ ಶೂರರಿಗೆ ಮುಂದೆ ಕಾದಿದೆ ಶಾಸ್ತಿ. ಭೂತಾಯಿ ಒಡಲಿನ ಮಣ್ಣು ಬಗೆದ, ಕಲ್ಲುಬಂಡೆಗಳನ್ನು ನುಂಗಿದ ರಾಕ್ಷಸ ರಾಜಕಾರಣದ ಕಾಕದೃಷ್ಟಿ ಈಗ ತಾಯಿ ಕಾವೇರಿ ಮೇಲೆ ಬಿದ್ದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಕುಟುಕಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.


Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...