Friday, March 14, 2025
Friday, March 14, 2025

Channagiri Keshava Murthy ವಿಶ್ವಮಟ್ಟದ ಕ್ರಿಕೆಟ್ ಅಂಕಿ ಅಂಶ ತಜ್ಞ ಚನ್ನಗಿರಿ ಕೇಶವಮೂರ್ತಿ‌‌ ಅವರ ಪುಸ್ತಕ ಲೋಕಾರ್ಪಣೆ

Date:

Channagiri Keshava Murthy ವಿಶ್ವಮಾನ್ಯ ಕ್ರಿಕೆಟ್ ಅಂಕಿ ಅಂಶ ತಜ್ಞ ಚನ್ನಗಿರಿ ಕೇಶವಮೂರ್ತಿ ಅವರ ಜೀವನ ಸಾಧನೆಯ ‘ಸಾಹಿತ್ಯವೇ ಹಸಿರು ಕ್ರಿಕೆಟೇ ಉಸಿರು’ ಯಶೋಗಾಥೆ ಪುಸ್ತಕ ಲೋಕಾರ್ಪಣೆಗೊಂಡಿತು.

ವಿಶ್ವ ವಿಖ್ಯಾತ ಕ್ರಿಕೆಟ್‌ನ ಸ್ಪಿನ್ ಮಾಂತ್ರಿಕ ಬಿ.ಎಸ್. ಚಂದ್ರಶೇಖರ್ ಅವರು ಜಯನಗರದ ತಮ್ಮ ಸ್ವಗೃಹದಲ್ಲಿ ಪುಸ್ತಕ ಬಿಡುಗಡೆ ಮಾಡಿದರು.

ಚನ್ನಗಿರಿ ಕೇಶವಮೂರ್ತಿ ಅವರ ಸಾಹಿತ್ಯ ಮತ್ತು ಕ್ರಿಕೆಟ್ ಸೇವೆ ಮಾದರಿಯಾಗಿದ್ದು, ಅವರೊಬ್ಬ ಶ್ರೇಷ್ಠ ಕ್ರಿಕೆಟ್ ಅಂಕಿ ಅಂಶ ತಜ್ಞರಾಗಿರುವುದು ನಮ್ಮ ಕರ್ನಾಟಕದ ಹೆಮ್ಮೆ ಎಂದು ಅವರು ಪ್ರಶಂಸಿಸಿದರು.

ಕೇಶವಮೂರ್ತಿ ಕುರಿತ ‘ಸಾಹಿತ್ಯವೇ ಹಸಿರು ಕ್ರಿಕೆಟೇ ಉಸಿರು’ ಪುಸ್ತಕ ಸಾಹಿತ್ಯ ಹಾಗೂ ಕ್ರಿಕೆಟ್ ಆಸಕ್ತರಿಗೆ ಮಾರ್ಗದರ್ಶಿಯಾಗಿದೆ ಎಂದು ಅವರು ತಿಳಿಸಿದರು.

Channagiri Keshava Murthy ಪತ್ತೇದಾರಿ ಕಾದಂಬರಿಗಳನ್ನೂ ಬರೆದಿರುವ ಕೇಶವಮೂರ್ತಿ ಅವರು ಕ್ರಿಕೆಟ್ ಕುರಿತು ಪುಸ್ತಕಗಳ ರಚನೆ ಮಾಡಿರುವುದು ಕ್ರೀಡಾ ಸಾಹಿತ್ಯಕ್ಕೆ ಅನನ್ಯ ಕೊಡುಗೆಗಳಾಗಿವೆ ಎಂದು ಸಂಧ್ಯಾ ಚಂದ್ರಶೇಖರ್ ಹೇಳಿದರು.

85ರ ಇಳಿವಯಸ್ಸಿನಲ್ಲೂ ಚನ್ನಗಿರಿ ಕೇಶವಮೂರ್ತಿ ಅವರು ಇವತ್ತಿಗೂ ಕ್ರಿಕೆಟ್ ಅಂಕಿ ಅಂಶ ದಾಖಲು ಮಾಡುತ್ತಿರುವುದು ಅಪರೂಪ ಎಂದು ಚಂದ್ರಶೇಖರ್ ದಂಪತಿಗಳು ಶುಭ ಹಾರೈಸಿದರು.

ಪುಸ್ತಕದ ಸಂಪಾದಕ ಕಗ್ಗೆರೆ ಪ್ರಕಾಶ್, ಸಿಕೆಎಂ ಮಗ ಸಂಜಯ್ ಚನ್ನಗಿರಿ, ಮಗಳು ಸವಿತಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...

Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ‌ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿ

Senior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್...

State Film Awards 2020 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆ

State Film Awards 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ ವರದಿಯಲ್ಲಿ...