Tuesday, August 25, 2026
Tuesday, August 25, 2026

Rotary Club Shivamogga ರೋಟರಿ ಸಂಸ್ಥೆ ನಿರಂತರ ಸಮಾಜ ಮುಖಿಯಾಗಿದೆ- ಜಿ.ಕಿರಣ್ ಕುಮಾರ್

Date:

Rotary Club Shivamogga ರೋಟರಿ ಸಂಸ್ಥೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಹೆಚ್ಚಿನ ಸೇವಾ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಜಿ.ಕಿರಣಕುಮಾರ್ ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ರೋಟರಿ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದು, ವಿಶೇಷ ಅಭಿಯಾನಗಳನ್ನು ನಡೆಸಿದೆ ಎಂದು ತಿಳಿಸಿದರು.

ರೋಟರಿ ಜಿಯೋಜಿತ ಜಿಲ್ಲಾ ಗವರ್ನರ್ ವಸಂತ ಹೋಬಳಿದಾರ್, ನಿಯೋಜಿತ ಸಹಾಯಕ ಗವರ್ನರ್ ಎಂ.ಬಿ.ಲಕ್ಷ್ಮಣ್ ಗೌಡ ಹಾಗೂ ಮಾಜಿ ಶಾಸಕ ಅಶೋಕ್ ನಾಯ್ಕ್ ಅವರನ್ನು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಸನ್ಮಾನಿಸಲಾಯಿತು.
ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್ ಮಾತನಾಡಿ, ಜಿಲ್ಲಾ ಗವರ್ನರ್ ಆಗಿ ಆಯ್ಕೆ ಆಗಿರುವುದು ಹೆಚ್ಚು ಸಂತಸ ತಂದಿದೆ.

ಜವಾಬ್ದಾರಿಯನ್ನು ಉತ್ತಮ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ನಿರ್ವಹಿಸುತ್ತೇನೆ. ಈವರೆಗೂ ರೋಟರಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದೇನೆ ಎಂದು ತಿಳಿಸಿದರು.

Rotary Club Shivamogga ನಿಯೋಜಿತ ಸಹಾಯಕ ಗವರ್ನರ್ ಎಂ.ಬಿ.ಲಕ್ಷ್ಮಣ್ ಗೌಡ ಮಾತನಾಡಿ, ಮುಂದಿನ ದಿನಗಳಲ್ಲಿ ರೋಟರಿ ಸಂಸ್ಥೆಗಳಿಂದ ಸಮಾಜಕ್ಕೆ ಉತ್ತಮವಾದ ಸಮಾಜಮುಖಿ ಕಾರ್ಯಕ್ರಮಗಳನ್ನು ಮತ್ತಷ್ಟು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಈಶ್ವರ್ ಹಾಗೂ ಮಾಜಿ ಸಹಾಯಕ ಗವರ್ನರ್ ರವಿ ಕೂಟೋಜಿ, ಜಿ.ವಿಜಯಕುಮಾರ್, ಗೀತಾ ಜಗದೀಶ್, ಜಿ.ಎನ್.ಪ್ರಕಾಶ್, ಎಸ್.ಕೆ.ಕುಮಾರ್, ಅರುಣ್ ಕುಮಾರ್, ಚುಡಾಮಣಿ ಪವಾರ್, ಬಸವರಾಜ, ಜಯಶೀಲಶೆಟ್ಟಿ ಹಾಗೂ ಸೆಂಟ್ರಲ್ ಕಬ್ಬಿನ ಎಲ್ಲಾ ಸದಸ್ಯರು ಕುಟುಂಬ ಸಮೇತರಾಗಿ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...