Sunday, May 17, 2026
Sunday, May 17, 2026

Rotary Club Shivamogga ರೋಟರಿ ಸಂಸ್ಥೆ ನಿರಂತರ ಸಮಾಜ ಮುಖಿಯಾಗಿದೆ- ಜಿ.ಕಿರಣ್ ಕುಮಾರ್

Date:

Rotary Club Shivamogga ರೋಟರಿ ಸಂಸ್ಥೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಹೆಚ್ಚಿನ ಸೇವಾ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಜಿ.ಕಿರಣಕುಮಾರ್ ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ರೋಟರಿ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದು, ವಿಶೇಷ ಅಭಿಯಾನಗಳನ್ನು ನಡೆಸಿದೆ ಎಂದು ತಿಳಿಸಿದರು.

ರೋಟರಿ ಜಿಯೋಜಿತ ಜಿಲ್ಲಾ ಗವರ್ನರ್ ವಸಂತ ಹೋಬಳಿದಾರ್, ನಿಯೋಜಿತ ಸಹಾಯಕ ಗವರ್ನರ್ ಎಂ.ಬಿ.ಲಕ್ಷ್ಮಣ್ ಗೌಡ ಹಾಗೂ ಮಾಜಿ ಶಾಸಕ ಅಶೋಕ್ ನಾಯ್ಕ್ ಅವರನ್ನು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಸನ್ಮಾನಿಸಲಾಯಿತು.
ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್ ಮಾತನಾಡಿ, ಜಿಲ್ಲಾ ಗವರ್ನರ್ ಆಗಿ ಆಯ್ಕೆ ಆಗಿರುವುದು ಹೆಚ್ಚು ಸಂತಸ ತಂದಿದೆ.

ಜವಾಬ್ದಾರಿಯನ್ನು ಉತ್ತಮ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ನಿರ್ವಹಿಸುತ್ತೇನೆ. ಈವರೆಗೂ ರೋಟರಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದೇನೆ ಎಂದು ತಿಳಿಸಿದರು.

Rotary Club Shivamogga ನಿಯೋಜಿತ ಸಹಾಯಕ ಗವರ್ನರ್ ಎಂ.ಬಿ.ಲಕ್ಷ್ಮಣ್ ಗೌಡ ಮಾತನಾಡಿ, ಮುಂದಿನ ದಿನಗಳಲ್ಲಿ ರೋಟರಿ ಸಂಸ್ಥೆಗಳಿಂದ ಸಮಾಜಕ್ಕೆ ಉತ್ತಮವಾದ ಸಮಾಜಮುಖಿ ಕಾರ್ಯಕ್ರಮಗಳನ್ನು ಮತ್ತಷ್ಟು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಈಶ್ವರ್ ಹಾಗೂ ಮಾಜಿ ಸಹಾಯಕ ಗವರ್ನರ್ ರವಿ ಕೂಟೋಜಿ, ಜಿ.ವಿಜಯಕುಮಾರ್, ಗೀತಾ ಜಗದೀಶ್, ಜಿ.ಎನ್.ಪ್ರಕಾಶ್, ಎಸ್.ಕೆ.ಕುಮಾರ್, ಅರುಣ್ ಕುಮಾರ್, ಚುಡಾಮಣಿ ಪವಾರ್, ಬಸವರಾಜ, ಜಯಶೀಲಶೆಟ್ಟಿ ಹಾಗೂ ಸೆಂಟ್ರಲ್ ಕಬ್ಬಿನ ಎಲ್ಲಾ ಸದಸ್ಯರು ಕುಟುಂಬ ಸಮೇತರಾಗಿ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...