Saturday, March 1, 2025
Saturday, March 1, 2025

Shivaganga Yoga Centre ಸೂರ್ಯ ನಮಸ್ಕಾರದಿಂದ ಆಯುಸ್ಸು ವೃದ್ಧಿ- ಸಿ.ವಿ. ರುದ್ರಾರಾಧ್ಯ

Date:

Shivaganga Yoga Centre ಸೂರ್ಯ ನಮಸ್ಕಾರದಿಂದ ಸರ್ವ ರೋಗವು ಗುಣವಾಗುವುದರ ಜೊತೆಗೆ ನಮ್ಮ ಆಯಸ್ಸು ವೃದ್ಧಿಯಾಗುತ್ತದೆ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ಶಿವಗಂಗಾ ಯೋಗ ಕೇಂದ್ರದ ಯೋಗಾಚಾರ್ಯ ಡಾ. ಸಿ.ವಿ.ರುದ್ರಾರಾಧ್ಯ ಹೇಳಿದರು.
ಶ್ರೀ ಶಿವಗಂಗಾ ಯೋಗಕೇಂದ್ರದಲ್ಲಿ ಏರ್ಪಡಿಸಿದ್ದ ರಥಸಪ್ತಮಿ ಕಾರ್ಯಕ್ರಮದಲ್ಲಿ ಮಾತನಾಡಿ, ಸೂರ್ಯ ನಮಸ್ಕಾರ ಆಸನಗಳ ಒಂದು ರಾಜ. ದೇಹದಲ್ಲಿ ಎಲ್ಲಾ ಅಂಗಾಂಗಗಳಲ್ಲಿ ರಕ್ತ ಚೆನ್ನಾಗಿ ಸಂಚಾರ ಆಗುವುದರಿಂದ ದೇಹದಲ್ಲಿ ಯಾವುದೇ ಕಾಯಿಲೆಗಳು ನಮಗೆ ಬರುವುದಿಲ್ಲ. ನಿರಂತರವಾಗಿ ಅಭ್ಯಾಸ ಮಾಡುವುದರಿಂದ ನಾವುಗಳು ಸದಾ ಲವಲವಿಕೆ ಹಾಗೂ ಆರೋಗ್ಯವಂತರಾಗಿರುತ್ತೇವೆ ಎಂದು ತಿಳಿಸಿದರು.
ಸಕಲ ಜೀವರಾಶಿಗೂ ಸೂರ್ಯನು ಬೇಕೇ ಬೇಕು. ಸೂರ್ಯನಿಲ್ಲದಿದ್ದರೆ ಬದುಕೇ ಇಲ್ಲ. ಸೂರ್ಯದೇವನನ್ನು ಪ್ರಾರ್ಥಿಸಿ ಶಕ್ತಿ ಅನುಸಾರ ನಮಸ್ಕಾರಗಳನ್ನು ಮಾಡಿದರೆ ಆರೋಗ್ಯ ವೃದ್ಧಿಯಾಗುವುದು ಎಂದರು.
Shivaganga Yoga Centre ಶ್ರೀ ಶಿವಗಂಗಾ ಯೋಗಕೇಂದ್ರದಲ್ಲಿ ರಥಸಪ್ತಮಿ ಕಾರ್ಯಕ್ರಮವನ್ನು ಬಹಳ ಸಂಭ್ರಮ ಸಡಗರದಿಂದ ಆಚರಿಸಲಾಯಿತು. 15 ದಿನ ಸೂರ್ಯ ನಮಸ್ಕಾರವನ್ನು ಅಭ್ಯಾಸ ಮಾಡಿರುವ ಎಲ್ಲರಿಗೂ ಸೂರ್ಯದೇವ ಒಳಿತು ಮಾಡಲಿ ಎಂದು ಆಶಿಸಿದರು.
ಬೆಳಗ್ಗೆ 5.30ಕ್ಕೆ ಪೂಜಾ ಕಾರ್ಯಕ್ರಮಗಳು ಪ್ರಾರಂಭವಾಗಿ 6 ಗಂಟೆಗೆ ಸರಿಯಾಗಿ ಅಖಂಡ ಸೂರ್ಯ ನಮಸ್ಕಾರ ಪ್ರಾರಂಭವಾಯಿತು. ಯೋಗ ಗುರು ಡಾ. ಪದ್ಮನಾಭ ಅಡಿಗ ಅವರು ರಥಸಪ್ತಮಿ ಹಾಗೂ ಸೂರ್ಯ ನಮಸ್ಕಾರದ ಪ್ರಾಮುಖ್ಯತೆ ಕುರಿತು ವಿವರಿಸಿದರು.
ಶಿವಗಂಗಾ ಯೋಗ ಕೇಂದ್ರದ ಎಲ್ಲಾ ಶಾಖೆಗಳಿಂದ ಸಾವಿರಕ್ಕೂ ಹೆಚ್ಚು ಶಿಕ್ಷಣಾರ್ಥಿಗಳು ರಥಸಪ್ತಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸೂರ್ಯ ನಮಸ್ಕಾರ ಮಾಡಿದರು. 300ಕ್ಕೂ ಹೆಚ್ಚು ಶಿಬಿರಾರ್ಥಿಗಳು 12 ಮಂಡಲ ಸೂರ್ಯ ನಮಸ್ಕಾರ ಮಾಡಿ ವಿಶೇಷ ಸಾಧನೆ ಮಾಡಿದರು.
ಕಾರ್ಯಕ್ರಮದಲ್ಲಿ ಚಂದ್ರಶೇಖರಯ್ಯ, ಓಂಕಾರ್, ಡಾ. ನಾಗರಾಜ ಪರಿಸರ, ಜಿ.ವಿಜಯಕುಮಾರ್, ಜಗದೀಶ್, ಲವಕುಮಾರ, ಚಂದ್ರಶೇಖರಯ್ಯ, ಹರೀಶ್, ನೀಲಕಂಠ ರಾವ್ ಹಾಗೂ ಎಲ್ಲ ಶಾಖೆಯ ಯೋಗ ಶಿಕ್ಷಕರಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Science Day ವೈಜ್ಞಾನಿಕ ಚಿಂತನೆಯಿಂದ ಮೂಢ ನಂಬಿಕೆ ತೊಡೆದು ಹಾಕಿ-ಡಿಡಿಪಿಐ ಮಂಜುನಾಥ್

National Science Day ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳಿಸಿಕೊಂಡು, ವಿಜ್ಞಾನದ ಅಧ್ಯಯನದಲ್ಲಿ...

KUWJ Shivamogga ಶಿವಮೊಗ್ಗದ ಪತ್ರಕರ್ತರಾದ ಗಿರೀಶ್ ‌ಉಮ್ರಾಯ್, ಶೃಂಗೇರಿ ಚಂದ್ರಶೇಖರ್ & ಕವಿತಾ ಅವರಿಗೆ ವಾರ್ಷಿಕ ದತ್ತಿ ಪ್ರಶಸ್ತಿ

KUWJ Shivamogga ವೃತ್ತಿ ಸೇವೆ, ಸಾಮಾಜಿಕ ಬದ್ಧತೆ ಮತ್ತು ಸಾಧನೆಗಳನ್ನು ಗುರುತಿಸಿ...

Karnataka Govt Urban Development ಹೊರಗುತ್ತಿಗೆ ವಾಹನ ಚಾಲಕರು & ಸಹಾಯಕರಿಗೆ ನೇರ‌ಪಾವತಿ ಮಾಡಲು ಮನವಿ

Karnataka Govt Urban Development ಶಿವಮೊಗ್ಗನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ವಾಹನ...