Friday, March 20, 2026
Friday, March 20, 2026

Mysore University ಮುಖ್ಯ ಸಾರಿಗೆ ಇಂಜಿನಿಯರ್ ಕೆ‌‌.ವೀರೇಗೌಡರಿಗೆ ಮೈಸೂರ ವಿವಿಯ ಗೌರವ ಡಾಕ್ಟರೇಟ್

Date:

Mysore University ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಬಾಬು ಕೆ ವೀರೇಗೌಡ ಅವರಿಗೆ ನೀಡಲಾಗಿರುವ ಗೌರವ ಡಾಕ್ಟರೇಟ್ ಅನ್ನು ರಾಜಭವನದ ಬಾಂಕ್ವೆಟ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, “ಮೈಸೂರು ವಿಶ್ವವಿದ್ಯಾಲಯವು ದೇಶದ ಆರನೇ ಅತ್ಯಂತ ಹಳೆಯ ವಿಶ್ವವಿದ್ಯಾಲಯ ಮತ್ತು ಕರ್ನಾಟಕ ರಾಜ್ಯದ ಮೊದಲ ವಿಶ್ವವಿದ್ಯಾಲಯವಾಗಿದೆ. ಈ ವಿಶ್ವವಿದ್ಯಾಲಯವು ಈ ದೇಶಕ್ಕೆ ಅನೇಕ ವಿಜ್ಞಾನಿಗಳು, ತತ್ವಜ್ಞಾನಿಗಳು ಮತ್ತು ರಾಜಕಾರಣಿಗಳನ್ನು ನೀಡಿದ್ದು, ಇವೆರಲ್ಲರೂ ಕರ್ನಾಟಕ ಮತ್ತು ಭಾರತದ ನಿರ್ಮಾಣದಲ್ಲಿ ಜ್ಞಾನ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಕೊಡುಗೆ ನೀಡಿದ್ದಾರೆ” ಎಂದು ಶ್ಲಾಘಿಸಿದರು.

“ಘಟಿಕೋತ್ಸವದ ಸಂದರ್ಭದಲ್ಲಿ ಶಿಕ್ಷಣ, ವಿಜ್ಞಾನ, ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಮತ್ತು ದೇಶದ ಪ್ರಗತಿಗೆ ಗಣನೀಯ ಕೊಡುಗೆ ನೀಡಿದ ಮಹನೀಯರಿಗೆ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿಗಳನ್ನು ನೀಡುತ್ತಿರುವುದು ಸಂತೋಷದ ಸಂಗತಿಯಾಗಿದೆ” ಎಂದು ಹೇಳಿದರು.

Mysore University “ಮೈಸೂರು ವಿಶ್ವವಿದ್ಯಾಲಯ ವತಿಯಿಂದ ಈ ದಿನ ಡಾ.ಬಾಬು ಕೆ ವೀರೇಗೌಡ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. ಎಚ್ ಎನ್ ಟಿಬಿ ಯ ಈಶಾನ್ಯ ವಿಭಾಗದ ಉಪಾಧ್ಯಕ್ಷರಾಗಿ ಮತ್ತು ಮುಖ್ಯಸಾರಿಗೆ ಮತ್ತು ಸಂಚಾರ ಇಂಜಿನಿಯರ್ ಆಗಿ, ನೀವು ಅನೇಕ ಸಂಕೀರ್ಣ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಉನ್ನತ ಮಟ್ಟದ ಮೂಲಸೌಕರ್ಯ ಯೋಜನೆಗಳ ನಿಮ್ಮ ಸಮರ್ಥ ನಿರ್ವಹಣೆಗಾಗಿ ನೀವು ಪ್ರಸಿದ್ಧರಾಗಿದ್ದೀರಿ. ಯುನೈಟೆಡ್ ಸ್ಟೇಟ್ಸ್‌ನ ಅನೇಕ ದೇವಾಲಯಗಳಿಗೆ ಪ್ರೊ ಬೊನೊ ಎಂಜಿನಿಯರಿಂಗ್ ಮತ್ತು ಸೈಟ್ ವಿನ್ಯಾಸ ಸೇವೆಗಳ ಮೂಲಕ ನೀವು ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಅವರಿಗೆ ಅಭಿನಂದಿಸುತ್ತಾ, ಅವರ ಸಮಾಜ ಸೇವೆ ಹೀಗೆ ನಿರಂತರವಾಗಿರಲಿ ಇತರರಿಗೆ ಸ್ಫೂರ್ತಿಯಾಗಲಿ” ಎಂದು ಆಶಿಸುತ್ತೇನೆಂದರು.

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು, ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...