Monday, May 4, 2026
Monday, May 4, 2026

JCI Shivamogga ಸಮಾಜಮುಖಿ ಚಟುವಟಿಕೆಗಳಲ್ಲಿ ಜೆಸಿಐ ಘಟಕಗಳು ಸಂಘಟನಾತ್ಮಕ ಪಾತ್ರ- ಜಿ.ಗಣೇಶ್

Date:

JCI Shivamogga ಸಮಾಜಮುಖಿ ಕಾರ್ಯಗಳಲ್ಲಿ ಜೆಸಿಐ ಘಟಕಗಳು ಸಂಘಟನಾತ್ಮಕವಾಗಿ ಕೆಲಸ ಮಾಡಲಿವೆ ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಘಟಕದ ಅಧ್ಯಕ್ಷ ಜಿ.ಗಣೇಶ್ ಹೇಳಿದರು.

ಶಿವಮೊಗ್ಗ ನಗರದ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಘಟಕದಿಂದ ಆಯೋಜಿಸಿದ್ದ ಜೆಸಿಐ ಶಿವಮೊಗ್ಗ ಶಕ್ತಿ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಸ್ವಾತಿ ಅವರು 24 ಗಂಟೆಯಲ್ಲಿ ಹೊಸ ಘಟಕ ಮಾಡಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಜೆಸಿಐನಿಂದ ಹೆಚ್ಚು ಸಮಾಜಮುಖಿ ಕಾರ್ಯ ನಡೆಸಲು ಒಟ್ಟಾಗಿ ಕಾರ್ಯ ನಿರ್ವಹಿಸೋಣ ಎಂದು ತಿಳಿಸಿದರು.

ಜೆಸಿಐ ವಲಯ-24 ಅಧ್ಯಕ್ಷ ಗೌರೀಶ್ ಭಾರ್ಗವ್ ಮಾತನಾಡಿ, 24 ಗಂಟೆಯಲ್ಲೇ ಹೊಸ ಘಟಕ ಸ್ಥಾಪಿಸಿದ ಸ್ವಾತಿ ಅವರು ಜೆಸಿಐ ಶಿವಮೊಗ್ಗ ಶಕ್ತಿ ಘಟಕಕ್ಕೆ ನಿಜವಾಗಿಯೂ ಶಕ್ತಿಯೇ ಆಗಿದ್ದಾರೆ.

ಶಕ್ತಿಯುತವಾದ ಘಟಕಕ್ಕೆ ಶಕ್ತಿಯುತ ವ್ಯಕ್ತಿ ಅಧ್ಯಕ್ಷರಾಗಿರುವುದು ಸಂತಸ ತಂದಿದೆ. ಅಧಿಕಾರ ವಹಿಸಿಕೊಂಡ ಕೆಲ ಸಮಯದಲ್ಲಿ ಶೇ. 100 ಸದಸ್ಯತ್ವ ಹೆಚ್ಚು ಮಾಡಿದ್ದು, ಶಕ್ತಿ ಬುಲೆಟಿನ್ ರಿಲೀಸ್ ಮಾಡಿರುವುದು, ಜತೆಗೆ ತರಬೇತಿ ಮತ್ತು ಸಾಮಾಜಿಕ ಜಾಗೃತಿ ವಿಚಾರದಲ್ಲಿ ಶಿವಮೊಗ್ಗ ಸಿಬಿಆರ್ ರಾಷ್ಟ್ರೀಯ ಕಾನೂನು ಕಾಲೇಜಿನವರೊಂದಿಗೆ ಎಂಎಯು ಕೂಡ ಮಾಡಿಕೊಳ್ಳುತ್ತಿರುವ ವಿಚಾರ ಅಭಿನಂದನೀಯ ಎಂದು ಅಭಿಪ್ರಾಯಪಟ್ಟರು.

JCI Shivamogga ಜೆಸಿಐ ಶಿವಮೊಗ್ಗ ಶಕ್ತಿ ಘಟಕದ ಅಧ್ಯಕ್ಷೆ ಸ್ವಾತಿ ಎಸ್.ಎಂ ಮಾತನಾಡಿ, ಜೆಸಿಐ ಶಿವಮೊಗ್ಗ ಶಕ್ತಿ ಘಟಕ ನಿರ್ಮಿಸಲು ಎಸ್.ವಿ.ಶಾಸ್ತ್ರಿ ಮತ್ತು ಶ್ಯಾಮಲಾ ಶಾಸ್ತ್ರಿ ಕಾರಣಕರ್ತರು. ಉತ್ತಮ ನಾಯಕನಾಗಿ ಒಂದು ವರ್ಷದ ಅವಧಿ ಜೆಸಿಐ ಶಿವಮೊಗ್ಗ ಶಕ್ತಿ ಘಟಕವನ್ನು ಮುನ್ನಡೆಸುತ್ತೇನೆ. ಎಲ್ಲರ ಸಹಕಾರ, ಮಾರ್ಗದರ್ಶನ ಅವಶ್ಯಕ. ಸಾಮಾಜಿಕ ಕಳಕಳಿಯೊಂದಿಗೆ ಜೆಸಿಐ ಶಿವಮೊಗ್ಗ ಶಕ್ತಿ ಘಟಕ ಕೆಲಸ ಮಾಡಲಿದೆ ಎಂದು ತಿಳಿಸಿದರು.

ಜೆಸಿಐ ಶಿವಮೊಗ್ಗ ಶಕ್ತಿ ಘಟಕ ಉದ್ಘಾಟನೆಗೆ ಡಾ. ಎಸ್.ವಿ.ಶಾಸ್ತ್ರಿ ಮತ್ತು ಶ್ಯಾಮಲಾ ಶಾಸ್ತ್ರಿ ಶುಭಕೋರಿದರು. ಜೆಸಿಐ ವಿವಿಧ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...