Wednesday, September 16, 2026
Wednesday, September 16, 2026

Akashavani Bhadravati ಭದ್ರಾವತಿ ಬಾನುಲಿ ಜನಮಾನಸ ತಲುಪಿ ಜನಪ್ರಿಯವಾಗಿದೆ- ಬಿ.ಗೋಪಿನಾಥ್

Date:

Akashavani Bhadravati ಆಕಾಶವಾಣಿ ಕೇಂದ್ರಕ್ಕೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಆಕಾಶವಾಣಿ ಆವರಣದಲ್ಲಿ ಹಮ್ಮಿಕೊಂಡಿದ್ದ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಆಕಾಶವಾಣಿ ಭದ್ರಾವತಿ ಮತ್ತು ಚಿತ್ರದುರ್ಗ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥ ಎಸ್.ಆರ್.ಭಟ್ ಅವರನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮತ್ತು ಪದಾಧಿಕಾರಿಗಳು ಸನ್ಮಾನಿಸಿದರು.
ಅರವತ್ತು ವರ್ಷಗಳಿಂದ ಆಕಾಶವಾಣಿ ಭದ್ರಾವತಿಯು ನಡೆಸಿಕೊಡುತ್ತಿರುವ ಅನೇಕ ಉಪಯುಕ್ತ ಕಾರ್ಯಕ್ರಮಗಳಿಂದ ಕೇಳುಗರ ಸಂಖ್ಯೆ ಹೆಚ್ಚಾಗಿದೆ. ಅಪಾರವಾದ ಕೇಳುಗರನ್ನು ಹೊಂದಿರುವ ಆಕಾಶವಾಣಿ, ಗುಣಮಟ್ಟದ ಪ್ರಸಾರ, ತಾಂತ್ರಿಕ ವರ್ಗ, ಅತ್ಯುತ್ತಮವಾದ ನಿರೂಪಕರು, ಸಿಬ್ಬಂದಿ ಸಹಕಾರ ಮತ್ತು ಶ್ರಮದಿಂದ ಅನೇಕ ಕಾರ್ಯಕ್ರಮಗಳು ಜನಮಾನಸ ತಲುಪುವುದರ ಮುಖಾಂತರ ಆಕಾಶವಾಣಿ ಕೇಂದ್ರವು ಜನಪ್ರಿಯವಾಗಿದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.
Akashavani Bhadravati ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಖಜಾಂಚಿ ಆರ್.ಮನೋಹರ್, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನದ ವಿಶ್ವವಿದ್ಯಾಲಯ ಕುಲಸಚಿವ ಡಾ. ಕೆ.ಸಿ.ಶಶಿಧರ್, ಕುವೆಂಪು ವಿಶ್ವವಿದ್ಯಾಲಯದ ಉಪ ಕುಲಸಚಿವ ಡಾ. ಕೆ.ಆರ್.ಮಂಜುನಾಥ್ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಜನರು, ಆಕಾಶವಾಣಿ ಕೇಂದ್ರದ ಅನೇಕ ಸಿಬ್ಬಂದಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...