Friday, April 10, 2026
Friday, April 10, 2026

DC Shivamogga ದಲಿತ ವಿರೋಧಿ ಧೋರಣೆ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ

Date:

DC Shivamogga ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ಕಂದಾಯ ಅಧಿಕಾರಿಗಳ ವಿರುದ್ಧ ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿಯ ಅಹೋರಾತ್ರಿ ಧರಣಿ ಸತ್ಯಾಗ್ರಹ 5ನೇ ದಿನಕ್ಕೆ ಕಾಲಿಟ್ಟಿದೆ.
ಶಿವಮೊಗ್ಗ ತಾಲ್ಲೂಕು, ಹಸೂಡಿ ಗ್ರಾಮದ ಸರ್ವೆ ನಂ. 134/6 ರಲ್ಲಿ 2 ಎಕರೆ ಜಮೀನನ್ನು ಪಿ.ಟಿ.ಸಿ.ಎಲ್. ಕಾಯ್ದೆ ಅಡಿಯಲ್ಲಿ ಜಮೀನನ್ನು ಮರುಸ್ವಾಧೀನಪಡಿಸಿ ಕೊಡಬೇಕೆಂದು ಈ ಹಿಂದೆ ಮಾನ್ಯ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಪಿ.ಟಿ.ಸಿ.ಎಲ್. ಸಿ.ಆರ್. ನಂ. 29/1980-81,, ದಿನಾಂಕ: 11-12-1985 ರಂದು ಆದೇಶವಾಗಿದ್ದು ಹಾಗೂ ಹೈಕೋರ್ಟ್‌ನಲ್ಲಿ ಜಮೀನು ತೆರವುಗೊಳಿಸುವ ನೋಟಿಸ್ ನೀಡಿ ಶೀಘ್ರದಲ್ಲಿ ಜಮೀನನ್ನು ಸ್ವಾಧೀನ ಮರುಸ್ಥಾಪಿಸಬೇಕೆಂದು ಆದೇಶಿಸಿದ್ದು, ಕಂದಾಯ ಅಧಿಕಾರಿಗಳು ಹೈಕೋರ್ಟ್ ಆದೇಶಕ್ಕೂ ಮನ್ನಣೆ ನೀಡದೇ ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಹೈಕೋರ್ಟ್ ಆದೇಶದಂತೆ ಜ.09ರಂದು ಜಮೀನನ್ನು ನಮಗೆ ಜಿ.ಜೆ. ವೆಂಕಟೇಶ್ ಬಿನ್ ಜಗದೀಶ್ ಕೆ ಇವರಿಂದ ಬಿಡಿಸಿಕೊಡಬೇಕೆಂದು ಜಿ.ಪಿ.ಉಮಾದೇವಿ ಅವರು ಕೇಳಿಕೊಂಡಿದ್ದರು ಸಹ ಉಪವಿಬಾಗಾಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳು ನಿರ್ಲರ್ಕ್ಷ್ಯ ವಹಿಸುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
DC Shivamogga ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ರಾಜ್ಯಾಧ್ಯಕ್ಷ ಮಂಜುನಾಥ್, ಉಪಾದ್ಯಕ್ಷ ಜಗದೀಶ್, ಉಮಾದೇವಿ, ಶಿರಾ,ವೇಣುಗೋಪಾಲ್,ಚಂದ್ರಪ್ಪ,ಕರಿಯಪ್ಪ, ಚನ್ನಕೇಶವ ಬಾಧಿತರು,ರುದ್ರಮ್ಮ ಸೇರಿದಂತೆ ಮತ್ತಿತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

2nd PUC Exam Result 2026 ಪಿಯು (ವಿಜ್ಞಾನ ) ಪರೀಕ್ಷೆ: ಶಿವಮೊಗ್ಗದ ಮಹೀನ್ ಖಾನುಂ ಗೆ600/596 ಸಾಧನೆಯ ಗರಿ.

2nd PUC Exam Result 2026 ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ...

Pace PU College Shivamogga ಶಿವಮೊಗ್ಗ ಪೇಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ಸುಗ್ಗಿ.

Pace PU College Shivamogga 2025-26ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1ಕ್ಕೆ...

CM Siddharamaiah ಚುನಾವಣಾ ಆಯೋಗವು ಗ್ಯಾರಂಟಿ ಯೋಜನೆಗಳ ಲೆಕ್ಕ ಕೇಳಿ ನಮ್ಮನ್ನ ಬೆದರಿಸಲು ಹೊರಟಿದೆ- ಸಿದ್ಧರಾಮಯ್ಯ

CM Siddharamaiah ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ...