Wednesday, May 27, 2026
Wednesday, May 27, 2026

B.Y. Raghavendra ಎಲ್ಲರೂ ಎಣ್ಣೆಗಾಣದಿಂದ ತೆಗೆದ ಎಣ್ಣೆ ಉಪಯೋಗಿಸಿ- ಬಿ.ವೈ.ರಾಘವೇಂದ್ರ

Date:

B.Y. Raghavendra ಸಣ್ಣ ಉದ್ಯಮಗಳನ್ನು ಹೆಚ್ಚು ಪ್ರೋತ್ಸಾಹಿಸುವ ಅವಶ್ಯಕತೆ ಇದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ಶಿವಮೊಗ್ಗ ನಗರದ ಮೂರ್ತಿ ಸೈಕಲೋತ್ಸವ ಸಮೀಪ ಶ್ರೀ ಸೇವಾ ಎಣ್ಣೆಗಾಣವನ್ನು ಉದ್ಘಾಟಿಸಿ ಮಾತನಾಡಿ, ಮರದ ಗಾಣದ ಎಣ್ಣೆಯನ್ನು ಪ್ರಸ್ತುತ ದಿನಗಳಲ್ಲಿ ಎಲ್ಲರೂ ಬಳಸಿದರೆ ಉತ್ತಮ. ಕಳಪೆ ಹಾಗೂ ಕೆಮಿಕಲ್ ಇರುವ ಎಣ್ಣೆಗಳನ್ನು ಬಳಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಬಿರುತ್ತವೆ. ಹೃದಯಾಘಾತ, ಹೃದಯ ಸಂಬಂಧಿ ಕಾಯಿಲೆಗಳು ಬರುವುದನ್ನು ನೋಡುತ್ತೇವೆ. ಮರದಗಾಣ ಶುದ್ಧ ಪರಿಶುದ್ಧ ಎಣ್ಣೆಯನ್ನು ನೀಡುತ್ತದೆ. ಕೆಮಿಕಲ್ ಮುಕ್ತವಾಗಿರುವುದರಿಂದ ಎಲ್ಲರೂ ಎಣ್ಣೆಗಾಣಗಳಿಂದ ತೆಗೆದ ಎಣ್ಣೆಗಳನ್ನೆ ಬಳಸುವುದು ಸೂಕ್ತ ಎಂದು ತಿಳಿಸಿದರು.

ಶಾಸಕಿ ಶಾರದಾ ಪರ‍್ಯಾನಾಯ್ಕ್ ಮಾತನಾಡಿ, ಪ್ರಾಚೀನ ಕಾಲದಲ್ಲಿ ಎಲ್ಲರೂ ಅವರವರ ಮನೆಗಳಲ್ಲಿ ಎತ್ತಿನ ಗಾಣಗಳನ್ನು ಬಳಸಿ ಎಣ್ಣೆಗಳನ್ನು ತಯಾರಿ ಮಾಡಿಕೊಂಡು ಉಪಯೋಗಿಸುತ್ತಿದ್ದರು. ಹಿಂದಿನ ಪದ್ಧತಿ ಮರುಕಳಿಸುತ್ತಿದೆ. ಎಲ್ಲರೂ ಮರದ ಗಾಣಗಳನ್ನು ಬಳಸುವ ದಿನಗಳು ಮರುಕಳಿಸುತ್ತಿದೆ. ಆರೋಗ್ಯ ಹಿತ ದೃಷ್ಟಿಯಿಂದ ಉತ್ತಮವಾದ ವಿಧಾನ ಎಂದರು.

B.Y. Raghavendra ಶ್ರೀ ಸೇವಾ ಎಣ್ಣೆಗಾಣದ ಮಾಲೀಕ ಅನುಷಾ ಸಂತೋಷ್ ಕುಮಾರ್ ಮಾತನಾಡಿ, ಮರದ ಗಾಣದ ಎಣ್ಣೆ ಹೃದಯ ಸಂಬಂಧ ಕಾಯಿಲೆಗಳನ್ನು ತಡೆಗಟ್ಟುತ್ತದೆ. ಕ್ಯಾನ್ಸರ್ ನಂತಹ ಮಾರಕ ರೋಗಗಳನ್ನು ತಡೆಗಟ್ಟುತ್ತದೆ. ಎಣ್ಣೆಯು ನೈಸರ್ಗಿಕ ಬಣ್ಣ, ನೈಸರ್ಗಿಕ ಸುವಾಸನೆ ಮತ್ತು ನೈಸರ್ಗಿಕ ರುಚಿಯಿಂದ ಕೂಡಿರುತ್ತದೆ. ನೈಸರ್ಗಿಕ ಪೋಷಕಾಂಶಗಳನ್ನು ಹೊಂದಿರುತ್ತದೆ ಎಂದರು.

ಬಂಜಾರ ಗುರು ಶ್ರೀ ಸೈನಾಭಗತ್ ಗುರು, ನಾಗರಾಜ ಸ್ವಾಮಿ, ಸಂತೋಷ್ ಕುಮಾರ್, ಜಿ.ವಿಜಯ್ ಕುಮಾರ್, ಅಭಿಷೇಕ, ಸತೀಶ್ ಚಂದ್ರ, ಮಂಜುನಾಥ್ ಕದಂ, ಕಿಶೋರ್ ಕುಮಾರ್, ಅರುಣ್ ದಿಕ್ಷಿತ್, ಶಶಿಕಾಂತ್ ನಾಡಿಗ್ ಇತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಸಿದ್ಧರಾಮಯ್ಯ ರಾಜೀನಾಮೆ? ಡಿ.ಕೆ.ಶಿವಕುಮಾರ್ ಗೆ ಸೀಎಂ ಪಟ್ಟ?.

Breaking News ನವದೆಹಲಿಯಲ್ಲಿ ರಾಜಕೀಯ ಚಟುವಟಿಕೆ ಬಿರುಸಾಗಿ ನಡೆದಿದೆ. ರಾಜ್ಯದ ಕಾಂಗ್ರೆಸ್...

Akashavani Bhadravati ಜೂನ್ 2. ಭದ್ರಾವತಿ ಆಕಾಶವಾಣಿಯಿಂದ” ಬಾನುಲಿ ಬರಹ ” ವಿಶೇಷ ಕಾರ್ಯಾಗಾರ

Akashavani Bhadravati ಭಾರತದ ಸಾರ್ವಜನಿಕ ಪ್ರಸಾರ ಸೇವೆ ಸಂಸ್ಥೆಯಾದ ಪ್ರಸಾರ ಭಾರತಿಯ...

JCI Institute ಯುವ ನಾಯಕತ್ವ ಬೆಳವಣಿಗೆಯಲ್ಲಿ ಜೆಸಿಐ ಸಂಸ್ಥೆ ಸದಾ ಮುಂಚೂಣಿಯಲ್ಲಿದೆ- ವಿಜಯಲಕ್ಷ್ಮಿ ಕಡಂಬ.

JCI Institute ಸ್ಥಳೀಯ ಸಮಾಜಮುಖಿ ಕಾರ್ಯಗಳಲ್ಲಿ ಹಾಗೂ ಯುವ ನಾಯಕತ್ವದ ಬೆಳವಣಿಗೆಯಲ್ಲಿ...