Friday, April 10, 2026
Friday, April 10, 2026

ಭದ್ರಾವತಿಯಲ್ಲಿ ಸಜ್ಜನರು ವಾಸಮಾಡುವಂತಹ ಪರಿಸ್ಥಿತಿಯೇ ಇಲ್ಲವಾಗಿದೆ :ಹಿತರಕ್ಷಣಾ ವೇದಿಕೆ ಮುಖ್ಯಸ್ಥ ಸುರೇಶ್

Date:

ಭದ್ರಾವತಿಯಲ್ಲಿ ಸಜ್ಜನರು ವಾಸಮಾಡುವಂತಹ ಪರಿಸ್ಥಿತಿಯೇ ಇಲ್ಲವಾಗಿದೆ. ಪೊಲೀಸ್ ಇಲಾಖೆ ಸೇರಿದಂತೆ ರಾಜಕಾರಣಿಗಳು ಕೂಡ ಭದ್ರಾವತಿ ನಗರವನ್ನು ಅಶಾಂತಿಯತ್ತ ಕೊಂಡೋಯ್ಯುತ್ತಿದ್ದಾರೆ ಎಂದು ಭದ್ರಾವತಿ ಹಿತರಕ್ಷಣಾ ವೇದಿಕೆಯ ಮುಖ್ಯಸ್ಥ ಸುರೇಶ್ ಆರೋಪಿಸಿದರು.

ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಭದ್ರಾವತಿಯಲ್ಲಿ ಗಾಂಜಾ, ಇಸ್ಪೇಟ್, ಓಸಿ, ಮುಂತಾದ ಅಕ್ರಮ ಚಟುವಟಿಕೆಗಳು ಹೆಚ್ಚಾಗಿವೆ. ಇದರ ಜೊತೆಗೆ ದಲಿತರ ಮೇಲೆ ಹಲ್ಲೆ ಕೂಡ ನಡೆಯುತ್ತಿರುವುದು ಆತಂಕದ ವಿಷಯವಾಗಿದೆ. ಭದ್ರಾವತಿಯಲ್ಲಿ ದಲಿತ ಯುವಕರಿಬ್ಬರನ್ನು ಹೊಸಮನೆಯ ಪೊಲೀಸ್ ಸಬ್‍ಇನ್ಸ್‍ಫೆಕ್ಟರ್‍ರೊಬ್ಬರು ಚಿತ್ರ ಹಿಂಸೆ ನೀಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರು ಕೂಡ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.

ದಲಿತ ಯುವಕರಾದ ದೀಪಕ್ ಮತ್ತು ಅನಿಲ್ ಅವರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್‍ಇನ್ಸ್‍ಫೆಕ್ಟರ್ ಅವರನ್ನು ಅಮಾನತ್ತುಗೊಳಿಸಬೇಕು. ಇಲ್ಲದಿದ್ದರೆ ಜಾಗೃತ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ತೀರ್ಥೇಶ್, ಅನಿಲ್‍ಕುಮಾರ್ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

2nd PUC Exam Result 2026 ಪಿಯು (ವಿಜ್ಞಾನ ) ಪರೀಕ್ಷೆ: ಶಿವಮೊಗ್ಗದ ಮಹೀನ್ ಖಾನುಂ ಗೆ600/596 ಸಾಧನೆಯ ಗರಿ.

2nd PUC Exam Result 2026 ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ...

Pace PU College Shivamogga ಶಿವಮೊಗ್ಗ ಪೇಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ಸುಗ್ಗಿ.

Pace PU College Shivamogga 2025-26ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1ಕ್ಕೆ...

CM Siddharamaiah ಚುನಾವಣಾ ಆಯೋಗವು ಗ್ಯಾರಂಟಿ ಯೋಜನೆಗಳ ಲೆಕ್ಕ ಕೇಳಿ ನಮ್ಮನ್ನ ಬೆದರಿಸಲು ಹೊರಟಿದೆ- ಸಿದ್ಧರಾಮಯ್ಯ

CM Siddharamaiah ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ...