Monday, February 2, 2026
Monday, February 2, 2026

Mahashivratri 2025 “ಭೋಲೇನಾಥ್ ಕಿ‌ ಜೈ”-ಲೇ: ಎನ್.ಜಯಭೀಮ ಜೊಯಿಸ್. ಶಿವಮೊಗ್ಗ

Date:

Mahashivratri 2025 ಮಹಾಶಿವರಾತ್ರಿ ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದಾಗಿದೆ.ಈ ಹಬ್ಬದ ವೈಶಿಷ್ಟ್ಯವೆಂದರೆ
ಇಡೀದಿನ ಉಪವಾಸ,ಜಾಗರಣೆಗಳನ್ನು ಮಾಡಿ,
ನಾಲ್ಕು ಯಾಮಗಳಲ್ಲಿಯೂ ಶಿವಪೂಜೆಯನ್ನು ಮಾಡುವುದರ ಮೂಲಕ ಆಚರಿಸಲಾಗುತ್ತದೆ.ಇಡೀ
ಭಾರತದಾದ್ಯಂತಬಹುತೇಕಎಲ್ಲಾಭಾಗಗಳಲ್ಲಿಯೂ ಆಚರಿಸುವ ಹಬ್ಬ ಇದಾಗಿದೆ.
ಶಿವಭಕ್ತರ ಪಾಲಿಗೆ ಮಂಗಳಕರರಾತ್ರಿ.ಸಾಮಾನ್ಯ
ವಾಗಿ ಎಲ್ಲ ಹಬ್ಬಗಳಲ್ಲಿಯೂ ದೇವರಿಗೆ ಹಗಲು
ಹೊತ್ತು ಪೂಜೆ ನಡೆಯುತ್ತದೆ.ರಾತ್ರಿ ಎಂದರೆ ಕತ್ತಲು,ಕತ್ತಲು ಎಂದರೆ ಅಜ್ಞಾನ,ಅಜ್ಞಾನವನ್ನು ಹೋಗಲಾಡಿಸಿ ಸುಜ್ಞಾನವನ್ನು ದಯಪಾಲಿಸು ಎಂದು ಶಿವನನ್ನು ಪ್ರಾರ್ಥಿಸುವ ಶುಭ ದಿನವೇ ಶಿವ
ರಾತ್ರಿ.ಅಜ್ಞಾನವೆಂಬೊ ಅಂಧಕಾರ ತುಂಬಿರುವಲ್ಲಿ
ಶಿವನು ತನ್ನ ಕಟಾಕ್ಷದಿಂದ ಅಜ್ಞಾನವನ್ನು ಪರಿಹರಿಸಿ
ಜ್ಞಾನದ ಬೆಳಕನ್ನು ನೀಡುತ್ತಾನೆ ಎಂಬ ದೃಢವಾದ ನಂಬಿಕೆ ಇದೆ.
ಶಿವಪುರಾಣದಲ್ಲಿಹೇಳಿರುವಪ್ರಕಾರಶಿವರಾತ್ರಿ
ಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿಅನುಗ್ರಹಮಾಡುವುದಾಗಿಸ್ವತ:ಶಿವನೇ ಪಾರ್ವತಿಯಲ್ಲಿ ತಿಳಿಸಿದ್ದಾನೆ.ಹಿಮವಂತನ ಮಗಳು ಪಾರ್ವತಿ ಈ ದಿನದಂದು ರಾತ್ರಿಯಿಡೀ ಶಿವನ ಕುರಿತು ಜಪ ಮಾಡುತ್ತಾ,ತಪಸ್ಸು ಮಾಡಿ ಶಿವನ ಮೆಚ್ಚಿಕೆಗೆಪಾತ್ರಳಾಗಿವಿವಾಹವಾದಳೆಂಬುದು ಪ್ರತೀತಿ.ಶಿವರುದ್ರತಾಂಡವನಾಡಿದ ರಾತ್ರಿಯೂ ಇಂದೇ ಎನ್ನಲಾಗುತ್ತದೆ.ದೇವತೆಗಳು ಹಾಗೂ ಅಸುರರ ನಡುವೆಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ ಅದನ್ನು ಶಿವ ಕುಡಿದ.ವಿಷವನ್ನು ಗಂಟಲೊಳಗಿಂದ ಇಳಿಯದಂತೆ ಪಾರ್ವತೀ ಇಡೀ ರಾತ್ರಿತಡೆದಳು ಎಂದು ತಿಳಿಸುತ್ತದೆ ಶಿವಪುರಾಣ.
ವಿಷಕುಡಿದಪರಿಣಾಮವಾಗಿಶಿವನಕಂಠ(ಗಂಟಲು)ನೀಲಿ ಬಣ್ಣಕ್ಕೆತಿರುಗುತ್ತದೆ.ಆದ್ದರಿಂದಲೇ ಶಿವನನ್ನು “ನೀಲಕಂಠ”ಎಂದುಕರೆಯುತ್ತಾರೆ.ವಿಷ್ಣುಅಲಂಕಾರ ಪ್ರಿಯನಾದರೆ,ಶಿವ ಅಭಿಷೇಕ ಪ್ರಿಯ,ಸತತ ಜಲಾ
ಭಿಷೇಕ ಪ್ರಿಯನು.
Mahashivratri 2025 ಶಿವನುಭೋಲೇನಾಥಅಂದರೆಮುಗ್ಧನು.ಬೇಡಿದ್ದ
ನ್ನು ನೀಡುವ ದಯಾಳು.ಲಂಕಾಧೀಶ ರಾವಣನಿಗೆ ಅವನಭಕ್ತಿಗೆಮೆಚ್ಚಿಆತ್ಮಲಿಂಗವನ್ನೇಕೊಡುತ್ತಾನೆ.ಶಿವಭಕ್ತಮಾರ್ಕಂಡೇಯನಭಕ್ತಿಗೆಮೆಚ್ಚಿಅವನನ್ನು
ಚಿರಂಜೀವಿಯನ್ನಾಗಿಮಾಡುತ್ತಾನೆ.ಶಿವಭಕ್ತಸಿರಿಯಾಳನಿಗೂ ಒಲಿದ ಶಿವ.ಕರುಣಾಮಯಿಯಾದ ಶಿವನು ಭಕ್ತಿಗೆ ಒಲಿಯುವನು.
ಶಿವನದೇವಾಲಯಗಳಲ್ಲಿರಾತ್ರಿಯಿಡೀಪೂಜಾದಿಗಳು,ಶಿವನಸ್ತೋತ್ರಪಾರಾಯಣಎಲ್ಲವೂನಡೆಯುವವು.ಶಿವರಾತ್ರಿಯ ಮಾರನೆಯ ದಿನ ಪಾರಣೆಯನ್ನು
ಮಾಡಿ ಶಿವರಾತ್ರಿ ಹಬ್ಬವನ್ನು ಆಚರಿಸುವರು.
ಶಿವರಾತ್ರಿಹಬ್ಬದಂದುಭಕ್ತರುಶಿವನದೇವಾಲಯ
ಗಳಿಗೆಹೋಗಿಶಿವನದರ್ಶನಮಾಡಿಧನ್ಯರಾಗುವರು.
ಶಿವರಾತ್ರಿಹಬ್ಬದಂದು ಎಲ್ಲರಿಗೂಸನ್ಮಂಗಳವನ್ನು ಕರುಣಿಸುವಂತೆ ಪರಮೇಶ್ವರನಲ್ಲಿ ಭಕ್ತಿಯಿಂದ
ಪ್ರಾರ್ಥನೆ ಮಾಡೋಣ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...