Sunday, August 2, 2026
Sunday, August 2, 2026

Shimoga News ಆನವಟ್ಟಿ ಪಟ್ಟಣ ಪಂಚಾಯತಿಯಲ್ಲಿ ಎ ಮತ್ತು ಬಿ‌ ಖಾತಾಪಡೆಯಲು ಅವಕಾಶ

Date:

Shimoga News ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ದಿ: 10/09/2024ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದ್ದು, ಆಸ್ತಿ ಮಾಲೀಕರು ಪಟ್ಟಣ ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸುವಂತೆ ಆನವಟ್ಟಿ ಪಟ್ಟಣ ಪಂಚಾಯಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಎ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ಮೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ವಿಭಾಗ ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕುಪತ್ರಗಳು/ ಮಂಜೂರಾತಿ ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿ.ಸಿ. ಅಡಿ ನೀಡಲಾದ ಹಕ್ಕುಪತ್ರ. ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನ ಬಿಡುಗಡೆ ಪತ್ರ. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿ ಮತ್ತು ಕಟ್ಟಡವಿದ್ದಲ್ಲಿ ವಿದ್ಯುಚ್ಛಕ್ತಿ ಬಿಲ್ ಪ್ರತಿಗಳನ್ನು ಸಲ್ಲಿಸುವುದು.
Shimoga News ಆನವಟ್ಟಿ ಪಟ್ಟಣ ಪಂಚಾಯತಿಯಲ್ಲಿ ಎ ಮತ್ತು ಬಿ‌ ಖಾತಾಪಡೆಯಲು ಅವಕಾಶ ಬಿ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸುವ ದಿ: 10/09/2024ರ ಪೂರ್ವದಲ್ಲಿ ನೊಂದಾಯಿತ ಮಾರಾಟ ಪತ್ರಗಳು/ ದಾನ ಪತ್ರ/ವಿಭಾಗ ಪತ್ರಗಳು/ಹಕ್ಕು ಖುಲಾಸೆ ಪತ್ರಗಳು. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸುವುದು.
ಈ ಪ್ರಕಟಣೆ ದಿನಾಂಕದಿಂದ ಮೂರು ತಿಂಗಳೊಳಗೆ ದಾಖಲೆಗಳನ್ನು ಸಲ್ಲಿಸಿ ಬಿ-ಖಾತೆಯನ್ನು ಪಡೆಯಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...