S.N. Channabasappa ಶಿವಮೊಗ್ಗ ನಗರದ ಅಲ್ಲಮ ಪ್ರಭು ಮೈದಾನದ ಹಿಂಭಾಗದಲ್ಲಿರುವ ಬೊಮ್ಮನಕಟ್ಟೆ ರಸ್ತೆಯ ರೈಲ್ವೆ ಟ್ರ್ಯಾಕ್ ಬಳಿ ಟ್ರಾಫಿಕ್ ದಟ್ಟಣೆಯ ನಿವಾರಣೆಯ ದೃಷ್ಟಿಯಿಂದ ನೂತನ ಫ್ಲೈ ಓವರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಎನ್.ಹೆಚ್ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದರು.
ಟ್ರಾಫಿಕ್ ದಟ್ಟಣೆಯ ನಿವಾರಣೆಯ ದೃಷ್ಟಿಯಿಂದ, ಸ್ಥಳೀಯರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸುವ ನಿಟ್ಟಿನಲ್ಲಿ ಹಾಗೂ ಸುಗಮ ಸಂಚಾರಕ್ಕಾಗಿ ಈ ಫ್ಲೈ ಓವರ್ ಅತ್ಯಂತ ಅನುಕೂಲವಾಗಲಿದ್ದು, ಶೀಘ್ರವೇ ಕಾಮಗಾರಿಯನ್ನು ಕಾರ್ಯರೂಪಕ್ಕೆ ತರುವಲ್ಲಿ ಬೇಕಾಗಿರುವಂತಹ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.