Karnataka Sanga Shivamogga ಪ್ರತಿ ವರ್ಷದಂತೆ ಶಿವಮೊಗ್ಗ ಕರ್ನಾಟಕ ಸಂಘವು 2024ನೇ ಸಾಲಿನಲ್ಲಿ ಮೊದಲ ಮುದ್ರಣವಾಗಿ ಪ್ರಕಟವಾದ ಕನ್ನಡ ಪುಸ್ತಕಗಳಿಗೆ ಬಹುಮಾನವನ್ನು ನೀಡಲು ಲೇಖಕರಿಂದ ಮತ್ತು ಪ್ರಕಾಶಕರಿಂದ ಕೆಳಕಂಡ ನಿಯಮಗಳಿಗೆ ಒಳಪಟ್ಟಂತೆ ಕೃತಿಗಳನ್ನು ಆಹ್ವಾನಿಸುತ್ತಿದೆ.
01.ಮರುಮುದ್ರಣಗೊಂಡ ಕೃತಿಗಳಿಗೆ, ಹಸ್ತ ಪ್ರತಿಗಳಿಗೆ ಮತ್ತು ಸಂಪಾದಿತ ಕೃತಿಗಳಿಗೆ ಅವಕಾಶವಿರುವುದಿಲ್ಲ.
2.ಈ ಹಿಂದೆ ಕರ್ನಾಟಕ ಸಂಘದ ಬಹುಮಾನ ಪಡೆದವರು ಅದೇ ವಿಭಾಗದಲ್ಲಿ ಸ್ಪರ್ಧಿಸುವಂತಿಲ್ಲ, ಇನ್ನಿತರೆ ಯಾವುದೇ ವಿಭಾಗಕ್ಕೆ ಸ್ಪರ್ಧಿಸಬಹುದು.
3.ಕರ್ನಾಟಕ ಸಂಘದ ಸದಸ್ಯರು ಭಾಗವಹಿಸುವಂತಿಲ್ಲ.
4.ಪುಸ್ತಕ ಬಹುಮಾನಕ್ಕೆ ಪುಸ್ತಕದ ಒಟ್ಟು ೦೪ಪ್ರತಿಗಳನ್ನು ಕಳುಹಿಸಬೇಕು/ ಬಹುಮಾನಕ್ಕೆ ಕಳುಹಿಸಿದ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ.
5.ಅಂಕಣ ಬರಹಗಳು ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಬಗ್ಗೆ ಕಡ್ಡಾಯವಾಗಿ ದಾಖಲೆ ನೀಡಬೇಕು.
6.ಬರಹಗಾರರು/ ಪ್ರಕಾಶಕರು- ಪತ್ರದ ಮುಖೇನ ಸ್ವವಿವರ / ವಿಳಾಸ / ಮೊಬೈಲ್ ನಂ. ಮತ್ತು ಯಾವ ಪ್ರಕಾರಕ್ಕೆ ಸಲ್ಲಿಸುತ್ತಿರುವುದು ಎಂಬ ಬಗ್ಗೆ ಲಿಖಿತವಾಗಿ / ಮುದ್ರಿಸಿ ವಿವರವನ್ನು ಕಳುಹಿಸಬೇಕು.
7.ಒಂದು ಪ್ರಕಾರಕ್ಕೆ ಕನಿಷ್ಠ 05 ಕೃತಿಗಳು ಬರದಿದ್ದರೆ ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ.
8.ವಿವಿಧ ಪ್ರಕಾರಕ್ಕೆ ಪುಸ್ತಕ ಕಳಿಸಿದಲ್ಲಿ ಒಂದೊಂದು ಪ್ರಕಾರಕ್ಕೂ 04 ಪುಸ್ತಕಗಳು ಪ್ರತ್ಯೇಕವಾಗಿರಬೇಕು.
ಪ್ರಕಾರ
ಇವರ ಹೆಸರಿನ ಬಹುಮಾನ
1.ಕಾದಂಬರಿ -ಕುವೆಂಪು
2.ಅನುವಾದ – ಪ್ರೊ. ಎಸ್.ವಿ. ಪರಮೇಶ್ವರ ಭಟ್ಟ
3.ಮಹಿಳಾ ಸಾಹಿತ್ಯ – ಶ್ರೀಮತಿ ಎಂ.ಕೆ. ಇಂದಿರಾ
4.ಮುಸ್ಲಿಂ ಬರಹಗಾರರು -ಶ್ರೀ ಪಿ. ಲಂಕೇಶ್
5.ಕವನ ಸಂಕಲನ – ಡಾ. ಜಿ. ಎಸ್. ಶಿವರುದ್ರಪ್ಪ
6.ಅಂಕಣ ಬರಹಗಾರರು -ಡಾ. ಹಾ. ಮಾ. ನಾಯಕ
7.ಸಣ್ಣ ಕಥಾ ಸಂಕಲನ – ಡಾ. ಯು. ಆರ್. ಅನಂತಮೂರ್ತಿ
8.ನಾಟಕ – ಡಾ. ಕೆ. ವಿ. ಸುಬ್ಬಣ್ಣ
9.ಪ್ರವಾಸ ಸಾಹಿತ್ಯ – ಶ್ರೀ ಕುಕ್ಕೆ ಸುಬ್ರಹ್ಮಣ್ಯ ಶಾಸ್ತ್ರಿ
10.ವಿಜ್ಞಾನ ಸಾಹಿತ್ಯ – ಶ್ರೀ ಹಸೂಡಿ ವೆಂಕಟಶಾಸ್ತ್ರಿ
11.ಮಕ್ಕಳ ಸಾಹಿತ್ಯ – ಡಾ. ನಾ. ಡಿಸೋಜ
12.ವೈದ್ಯ ಸಾಹಿತ್ಯ – ಡಾ. ಹೆಚ್. ಡಿ. ಚಂದ್ರಪ್ಪಗೌಡ
Karnataka Sanga Shivamogga ಮೇಲ್ಕಂಡ ಪ್ರಕಾರಗಳ ಸಾಹಿತ್ಯ ಕೃತಿಗಳ 04 (ನಾಲ್ಕು) ಪ್ರತಿಗಳನ್ನು ಸಲ್ಲಿಸಲು ದಿನಾಂಕ 05-04-2025 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ., ನಂತರ ಬಂದ ಕೃತಿಗಳನ್ನು ಪರಿಗಣಿಸಲಾಗುವುದಿಲ್ಲ.
ಪುಸ್ತಕಗಳನ್ನು ಕಾರ್ಯದರ್ಶಿ, ಕರ್ನಾಟಕ ಸಂಘ, ಬಿ.ಹೆಚ್.ರಸ್ತೆ, ಶಿವಮೊಗ್ಗ-577201 ಇವರಿಗೆ ಅಂಚೆ/ಕೊರಿಯರ್ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬೇಕು.
ಅತ್ಯುತ್ತಮವೆಂದು ಆಯ್ಕೆ ಆದ ಕೃತಿಗಳಿಗೆ ರೂ: ೧೦,೦೦೦/- (ಹತ್ತು ಸಾವಿರ) ನಗದು ಬಹುಮಾನ ಮತ್ತು ಫಲಕವನ್ನು ನೀಡಿ ಗೌರವಿಸಲಾಗುವುದು.ಹೆಚ್ಚಿನ ವಿವರಗಳಿಗೆ ಕರ್ನಾಟಕ ಸಂಘದ ಕಛೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಸಂಪರ್ಕ ಸಂಖ್ಯೆ :9980159696 / 8310876277