Monday, May 25, 2026
Monday, May 25, 2026

Bapuji Institute of Engineering & Technology ವೇದಾದಿ ಸನಾತನ ಸಾಹಿತ್ಯಗಳ ಅಧ್ಯಯನದಿಂದ “ಸಚ್ಚಿದಾನಂದ” ಲಭ್ಯ- ಡಾ.ಎಚ್.ಬಿ.ಮಂಜುನಾಥ್

Date:

Bapuji Institute of Engineering & Technology ಭಾರತ ಎಂಬುದು ಕೇವಲ ಒಂದು ದೇಶದ ಹೆಸರಲ್ಲ, ಇದು ಜ್ಞಾನವನ್ನು ಪ್ರೀತಿಸುವ, ಆರಾಧಿಸುವ ದ್ಯೋತಕವಾಗಿದೆ ಎಂದು ಹಿರಿಯ ಪತ್ರಕರ್ತ ಡಾ.ಎಚ್ ಬಿ ಮಂಜುನಾಥ ಹೇಳಿದರು. ದಾವಣಗೆರೆ ನಗರದ ಬಾಪೂಜಿ ತಾಂತ್ರಿಕ ಮಹಾವಿದ್ಯಾಲಯದ ಎಸ್ ಎಸ್ ಮಲ್ಲಿಕಾರ್ಜುನ ಸಾಂಸ್ಕೃತಿಕ ಕೇಂದ್ರದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ನಿರ್ದೇಶನದ ಮೇರೆಗೆ ನೆರವೇರಿದ ಭಾರತೀಯ ಜ್ಞಾನವಿಧಾನದಲ್ಲಿ ವೇದಗಳ ಸಮಗ್ರತೆ ಎಂಬ ವಿಷಯವಾಗಿ ಮಾತನಾಡುತ್ತಾ ‘ಭ’ ಎಂದರೆ ‘ಬೆಳಕು’, ‘ರತಿ’ ಅಥವಾ ‘ರತ’ ಎಂದರೆ ಪ್ರೀತಿಸುವುದು, ‘ಭಾರತ’ ಎಂದರೆ ಜ್ಞಾನ ಪ್ರಕಾಶವನ್ನು ಗೌರವಿಸುವುದು ಎಂದು ಆಗುತ್ತದೆ. ವಿಶ್ವದ ಅತ್ಯಂತ ಪ್ರಾಚೀನ ವಾಜ್ಞಯವಾದ ವೇದ ವೇದಾಂತಗಳು ಜೀವ ಜಗತ್ತಿನ ಸ್ವಾಸ್ಥ್ಯದ ಕುರಿತಾಗಿ ಕರ್ಮಕಾಂಡದಲ್ಲಿಯೂ ಜೀವನ್ ಮುಕ್ತಿಯ ಬಗ್ಗೆ ಜ್ಞಾನ ಕಾಂಡದಲ್ಲಿಯೂ ಹೇಳಿದ್ದು ಮತ ಭೇದವಿಲ್ಲದೆ ಎಲ್ಲರಿಗೂ ಇದು ಅನ್ವಯ ಯೋಗ್ಯವಾಗಿದೆ ಎಂಬುದನ್ನು ಸ್ವಾರಸ್ಯಕರ ಉದಾಹರಣೆಗಳ ಮೂಲಕ ಪ್ರತಿಪಾದಿಸಿದರು. ಪರಿಪೂರ್ಣ ಅಸ್ತಿತ್ವವು ‘ಸತ್’ ಆದರೆ ಪರಿಪೂರ್ಣ ಅರಿವು ‘ಚಿತ್’ ಆಗುತ್ತದೆ, ಪರಿಪೂರ್ಣ ಅನುಭವವು ‘ಆನಂದ’ವಾಗುತ್ತದೆ, ಈ ಸತ್ ಚಿತ್ ಆನಂದವೇ ‘ಸಚ್ಚಿದಾನಂದ’, ಇದು ವೇದಾದಿ ಸನಾತನ ಸಾಹಿತ್ಯಗಳ ಅಧ್ಯಯನದಿಂದ ಸಾಧ್ಯ,ಸನಾತನ ಎಂದರೆ ಪ್ರಾಚೀನವಾದದ್ದು ಶಾಶ್ವತವಾದದ್ದು ಎಂದರ್ಥವೆಂದರು. ಕಾಲೇಜಿನ ನಿರ್ದೇಶಕ ಪ್ರೊ. ವೈ.ವೃಷಭೇಂದ್ರಪ್ಪನವರ ಉಪಸ್ಥಿತಿಯಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಶ್ರೀನಿಧಿ ಕುಲಕರ್ಣಿ ಸ್ವಾಗತಿಸಿದರು. ಸಂಜನಾ ಪರಿಚಯ ನುಡಿಗಳ ನಾಡಿದರು. ಜವಳಿ ವಿಭಾಗದ ಪ್ರಾಧ್ಯಾಪಕ ಎಸ್.ಎಮ್. ಚಂದ್ರಶೇಖರ್ ಪ್ರಾಸ್ತಾವಿಕ ನುಡಿಗಳ ನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...