Tuesday, February 3, 2026
Tuesday, February 3, 2026

Shivamogga Union Of Working Journalists Association ವಾರ್ಷಿಕ ದತ್ತಿ ಪುರಸ್ಕಾರ ಪುರಸ್ಕೃತ ಜಿಲ್ಲಾ ಪತ್ರಕರ್ತರಿಗೆ ಅಭಿನಂದನೆ

Date:

Shivamogga Union Of Working Journalists Association ಶಿವಮೊಗ್ಗ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿಯ ಮಿಂಚು ಶ್ರೀನಿವಾಸ್ ಪ್ರಶಸ್ತಿ ಪುರಸ್ಕೃತರಾದ ಶಿವಮೊಗ್ಗೆಯ ಹಿರಿಯ ಪತ್ರಕರ್ತರು, ವಿಜಯವಾಣಿ ಪತ್ರಿಕೆಯ ಸ್ಥಾನಿಕ ಸಂಪಾದಕ ಚಂದ್ರಶೇಖರ್ ಶೃಂಗೇರಿಯವರಿಗೆ, ಎಸ್. ಹೆಚ್. ರಂಗಸ್ವಾಮಿ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಪತ್ರಕರ್ತ ಗಿರೀಶ್ ಉಮ್ರಾಯ್ ಹಾಗೂ ಗಿರಿಜಮ್ಮ, ರುದ್ರಪ್ಪ ತಾಳಿಕೋಟಿ ಪ್ರಶಸ್ತಿ ಪುರಸ್ಕೃತರಾದ ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ್ತಿ ಕವಿತಾರವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ಅಭಿನಂದಿಸಿದೆ.

ಈ ಸಂಬಂಧವಾಗಿ ಹೇಳಿಕೆ ನೀಡಿರುವ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಕೆ.ವಿ. ಶಿವಕುಮಾರ್, ರಾಜ್ಯ ಸಮಿತಿ ಸದಸ್ಯ ಎನ್. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ವಿ. ಟಿ. ಅರುಣ್ ಹಾಗೂ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಶುಭ ಕೋರಿದ್ದಾರೆ.
ಅ. ರಾ. ಶ್ರೀನಿವಾಸ್‌ರಿಗೆ ಅಭಿನಂದನೆ

ಇದೇ ಸಂದರ್ಭದಲ್ಲಿ ಸಾಗರ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿರುವ ಹಿರಿಯ ಪತ್ರಕರ್ತ ಅ. ರಾ. ಶ್ರೀನಿವಾಸ್‌ರವರನ್ನು ಅಭಿನಂದಿಸಿರುವ ಅವರು, ಇದು ಪತ್ರಿಕಾ ಕ್ಷೇತ್ರಕ್ಕೆ ಸಂದ ಗೌರವ ಎಂದು ಶುಭ ಹಾರೈಸಿದ್ದಾರೆ. ಸುದೀರ್ಘ ಕಾಲದವರೆಗೆ ಪತ್ರಕರ್ತರಾಗಿ, ಕತೆ, ಕಾದಂಬರಿ, ರಂಗ ವಿಮರ್ಶಕರಾಗಿ ತಮ್ಮದೇ ಆದ ಛಾಪು ಮೂಡಿಸಿರುವ ಶ್ರೀನಿವಾಸ್‌ರವರ ಸರ್ವಾಧ್ಯಕ್ಷತೆಯಲ್ಲಿ ಸಮ್ಮೇಳನ ಯಶಸ್ವಿಯಾಗುವುದರ ಜೊತೆಗೆ ಮಾದರಿಯಾಗಿ ನಡೆಯಲಿ ಎಂದು ಆಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...