Bhadravathi Surveyor Lokayukta ಬಸವರಾಜಪ್ಪ.ಎಂ.ಹೆಚ್ ಬಿನ್ ಲೇಟ್ ಹನುಮಂತಪ್ಪ, ಮತ್ತಿಘಟ್ಟ ಗ್ರಾಮ. ಭದ್ರಾವತಿ ತಾಲ್ಲೂಕು ರವರ ಹೆಸರಿನಲ್ಲಿದ್ದ ಸ.ನಂ.56/10 ರಲ್ಲಿನ 1 ಎಕರೆ 20 ಗುಂಟೆ ಜಮೀನಿನ ಪಕ್ಕ ಪೋಡಿ ದುರಸ್ಥಿ ಮಾಡಿಕೊಡುವ ಬಗ್ಗೆ ಭದ್ರಾವತಿ ತಾಲ್ಲೂಕು ಎ.ಡಿ.ಎಲ್.ಆರ್ ಕಛೇರಿಯ ಭೂಮಾಪನಾ ಪರಿವೀಕ್ಷಕ ಟಿ.ಮಲ್ಲಿಕಾರ್ಜುನಯ್ಯ ಎಂಬುವವರು ಲಂಚದ ಹಣಕ್ಕೆ ಬೇಡಿಕೆ ಇಟ್ಟ ಬಗ್ಗೆ ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿರುತ್ತಾರೆ.
ದಿನಾಂಕ:23/07/2013 ರಂದು ಸದರಿ ಅಪಾದಿತ ಅಧಿಕಾರಿ ಪಿರ್ಯಾದುದಾರರಿಂದ 15,000/- ರೂ ಲಂಚದ ಹಣವನ್ನು ಶಿವಮೊಗ್ಗ ನಗರ ವಿನೋಬನಗರ ಬಡಾವಣೆಯ ಕೆಂಚಪ್ಪ ಲೇಔಟ್ ನ ಆಪಾದಿತರ ವಾಸದ ಮನೆಯಲ್ಲಿ ಕೇಳಿ ಪಡೆದುಕೊಳ್ಳುವಾಗ ಟ್ರ್ಯಾಪ್ ಮಾಡಲಾಗಿರುತ್ತದೆ. ಕೆ.ಸಿ.ಪುರುಷೋತ್ತಮ, ಪೊಲೀಸ್ ಇನ್ಸ್ಪೆಕ್ಟರ್, ಕ.ಲೋ.ಶಿವಮೊಗ್ಗ ರವರು ಪ್ರಕರಣವನ್ನು ತನಿಖೆ ಕೈಗೊಂಡು ಆಪಾದಿತರ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ.
ಈ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆ ನಡೆದು ದಿನಾಂಕ:28/02/2025 ರಂದು ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಮರುಳಸಿದ್ದಾರಾದ್ಯ ಹೆಚ್.ಜೆ. ರವರು ಆರೋಪಿ ಟಿ.ಮಲ್ಲಿಕಾರ್ಜುನಯ್ಯ ಇವರಿಗೆ ಒಂದು ವರ್ಷ ಆರು ತಿಂಗಳು ಕಾರಾಗೃಹ ಶಿಕ್ಷೆ ಮತ್ತು 30,000/- ರೂ ದಂಡ ವಿಧಿಸಿ ಆದೇಶಿಸಿರುತ್ತಾರೆ.
ಸರ್ಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕರಾದ ಎಂ.ಡಿ.ಸುಂದರ್ ರಾಜ್ ರವರು ವಾದ ಮಂಡಿಸಿರುತ್ತಾರೆ.