Saturday, June 20, 2026
Saturday, June 20, 2026

Bhadravathi Surveyor Lokayukta ಭದ್ರಾವತಿ ಭೂಮಾಪನಾ ಪರಿವೀಕ್ಷಕ ಲೋಕಾಯುಕ್ತ ಬಲೆಗೆ!

Date:

Bhadravathi Surveyor Lokayukta ಬಸವರಾಜಪ್ಪ.ಎಂ.ಹೆಚ್ ಬಿನ್ ಲೇಟ್ ಹನುಮಂತಪ್ಪ, ಮತ್ತಿಘಟ್ಟ ಗ್ರಾಮ. ಭದ್ರಾವತಿ ತಾಲ್ಲೂಕು ರವರ ಹೆಸರಿನಲ್ಲಿದ್ದ ಸ.ನಂ.56/10 ರಲ್ಲಿನ 1 ಎಕರೆ 20 ಗುಂಟೆ ಜಮೀನಿನ ಪಕ್ಕ ಪೋಡಿ ದುರಸ್ಥಿ ಮಾಡಿಕೊಡುವ ಬಗ್ಗೆ ಭದ್ರಾವತಿ ತಾಲ್ಲೂಕು ಎ.ಡಿ.ಎಲ್.ಆರ್ ಕಛೇರಿಯ ಭೂಮಾಪನಾ ಪರಿವೀಕ್ಷಕ ಟಿ.ಮಲ್ಲಿಕಾರ್ಜುನಯ್ಯ ಎಂಬುವವರು ಲಂಚದ ಹಣಕ್ಕೆ ಬೇಡಿಕೆ ಇಟ್ಟ ಬಗ್ಗೆ ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿರುತ್ತಾರೆ.

ದಿನಾಂಕ:23/07/2013 ರಂದು ಸದರಿ ಅಪಾದಿತ ಅಧಿಕಾರಿ ಪಿರ್ಯಾದುದಾರರಿಂದ 15,000/- ರೂ ಲಂಚದ ಹಣವನ್ನು ಶಿವಮೊಗ್ಗ ನಗರ ವಿನೋಬನಗರ ಬಡಾವಣೆಯ ಕೆಂಚಪ್ಪ ಲೇಔಟ್ ನ ಆಪಾದಿತರ ವಾಸದ ಮನೆಯಲ್ಲಿ ಕೇಳಿ ಪಡೆದುಕೊಳ್ಳುವಾಗ ಟ್ರ‍್ಯಾಪ್ ಮಾಡಲಾಗಿರುತ್ತದೆ. ಕೆ.ಸಿ.ಪುರುಷೋತ್ತಮ, ಪೊಲೀಸ್ ಇನ್ಸ್ಪೆಕ್ಟರ್, ಕ.ಲೋ.ಶಿವಮೊಗ್ಗ ರವರು ಪ್ರಕರಣವನ್ನು ತನಿಖೆ ಕೈಗೊಂಡು ಆಪಾದಿತರ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ.

ಈ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆ ನಡೆದು ದಿನಾಂಕ:28/02/2025 ರಂದು ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಮರುಳಸಿದ್ದಾರಾದ್ಯ ಹೆಚ್.ಜೆ. ರವರು ಆರೋಪಿ ಟಿ.ಮಲ್ಲಿಕಾರ್ಜುನಯ್ಯ ಇವರಿಗೆ ಒಂದು ವರ್ಷ ಆರು ತಿಂಗಳು ಕಾರಾಗೃಹ ಶಿಕ್ಷೆ ಮತ್ತು 30,000/- ರೂ ದಂಡ ವಿಧಿಸಿ ಆದೇಶಿಸಿರುತ್ತಾರೆ.
ಸರ್ಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕರಾದ ಎಂ.ಡಿ.ಸುಂದರ್ ರಾಜ್ ರವರು ವಾದ ಮಂಡಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...

International Yoga Day ಯಶಸ್ವಿಯಾಗಿ ನಡೆದ ಯೋಗ ದಿನಾಚರಣೆಯ ಜಾಗೃತಿ ಜಾಥಾ

International Yoga Day 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಜಿಲ್ಲಾಡಳಿತ,...

DC Shivamogga ಜೂನ್ 21 ನೀಟ್ ಪರೀಕ್ಷೆ ಸುಗಮ ನಡೆಯಲು ಬಿಗಿಕ್ರಮ, ಸಕಲಸಿದ್ಧತೆ : ಪ್ರಭುಲಿಂಗ ಕವಳಿಕಟ್ಟಿ

DC Shivamogga ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ...