Tuesday, July 14, 2026
Tuesday, July 14, 2026

CM Siddharamaih ಪತ್ರಿಕಾ ವಿತರಕರು ಪತ್ರಿಕಾ ಕ್ಷೇತ್ರದ ನರಮಂಡಲ- ಕೆ.ವಿ.ಪ್ರಭಾಕರ್

Date:

CM Siddharamaih ನಿತ್ಯ ಬೆಳಗ್ಗೆ ಕೋಳಿ ಕೂಗುವ ಮೊದಲೇ ಎದ್ದು ಕೆಲಸಕ್ಕೆ ಹೊರಡುವ ಪತ್ರಿಕಾ ವಿತಕರು ಪತ್ರಿಕಾ ಕ್ಷೇತ್ರದ ನರಮಂಡಲ ಇದ್ದಂತೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು.

ರಾಜ್ಯ ಪತ್ರಿಕಾ ವಿತರಕರ ಸಂಘ, ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಂಘ, ಚನ್ನರಾಯಪಟ್ಟಣ ತಾಲೂಕು ಪತ್ರಿಕಾ ವಿತರಕರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಪತ್ರಿಕೋದ್ಯಮದ ನರಮಂಡಲ ಇದ್ದಹಾಗೆ. ನರ ಮಂಡಲ ಇದ್ದರಷ್ಟೆ ಮನುಷ್ಯನ ದೇಹ ಕೆಲಸ ಮಾಡುವುದು. ಹಾಗೆಯೇ ಪತ್ರಿಕಾ ವಿತರಕರು ಪತ್ರಿಕಾ ಕ್ಷೇತ್ರದ ನರಮಂಡಲ. ಇಡೀ ದೇಶದ ಬೀದಿ ಬೀದಿಗಳಲ್ಲಿ ಓಡಾಡಿ ಸುದ್ದಿ ವಿತರಣೆ ಮಾಡುವ ವಿತರಕರು ಇಲ್ಲದೆ ಮುದ್ರಣಗೊಂಡ ಪತ್ರಿಕೆಗಳಿಗೆ ಮೋಕ್ಷ ಸಿಗುವುದಿಲ್ಲ ಎಂದು ನುಡಿದರು.

ಈ ನರಮಂಡಲಕ್ಕೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಮಾತೃ ಹೃದಯ. ಈ ಬಾರಿಯ ಬಜೆಟ್ ನಲ್ಲೂ ಪತ್ರಿಕಾ ಕಾರ್ಮಿಕರಿಗೆ ಅನುಕೂಲ ಆಗುವ ಭರವಸೆ ಇದೆ ಎಂದು ತಿಳಿಸಿದರು.

CM Siddharamaih ಕಾರ್ಮಿಕ ಇಲಾಖೆಯಿಂದ ಈಗಾಗಲೇ ಸಾಕಷ್ಟು ಸವಲತ್ತುಗಳು ಸಿಗುತ್ತಿವೆ. ಈಗ ಆರೋಗ್ಯ ವಿಮೆಯ ಬೇಡಿಕೆ ಕೂಡ ಈಡೇರಿದೆ. ವಿತರಕರು ಹೆಚ್ಚೆಚ್ಚು ಸಂಘಟಿತರಾದಷ್ಟೂ ತಮ್ಮ ಬೇಡಿಕೆಗಳಿಗೆ ಶಕ್ತಿ ಬರುತ್ತದೆ ಎಂದು ತಿಳಿಸಿದರು.
ಇದೆ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷರಾದ ಎನ್. ಮಾಲತೇಶ್ ಭದ್ರಾವತಿ ತಾಲೂಕ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಪ್ರಧಾನ ಕಾರ್ಯದರ್ಶಿಯಾದ ಪರಶುರಾಮ್ ರಾವ್ ಅವರಿಗೆ ಗೌರವಿಸಿ ಸನ್ಮಾನಿಸಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಅರ್ಹ ಯುವ ಮತದಾರರು ನೋಂದಣಿ ಪ್ರಕ್ರಿಯೆಯಿಂದ ವಂಚಿತರಾಗದಂತೆ ಜಾಗ್ರತೆವಹಿಸಿ- ಬಿ.ವೈ.ರಾಘವೇಂದ್ರ

B.Y. Raghavendra ಹೊಸೂರು ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ನಿರಂತರ ಜನಸಂಪರ್ಕ...

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...