Monday, August 31, 2026
Monday, August 31, 2026

CM Siddharamaih ಪತ್ರಿಕಾ ವಿತರಕರು ಪತ್ರಿಕಾ ಕ್ಷೇತ್ರದ ನರಮಂಡಲ- ಕೆ.ವಿ.ಪ್ರಭಾಕರ್

Date:

CM Siddharamaih ನಿತ್ಯ ಬೆಳಗ್ಗೆ ಕೋಳಿ ಕೂಗುವ ಮೊದಲೇ ಎದ್ದು ಕೆಲಸಕ್ಕೆ ಹೊರಡುವ ಪತ್ರಿಕಾ ವಿತಕರು ಪತ್ರಿಕಾ ಕ್ಷೇತ್ರದ ನರಮಂಡಲ ಇದ್ದಂತೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು.

ರಾಜ್ಯ ಪತ್ರಿಕಾ ವಿತರಕರ ಸಂಘ, ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಂಘ, ಚನ್ನರಾಯಪಟ್ಟಣ ತಾಲೂಕು ಪತ್ರಿಕಾ ವಿತರಕರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಪತ್ರಿಕೋದ್ಯಮದ ನರಮಂಡಲ ಇದ್ದಹಾಗೆ. ನರ ಮಂಡಲ ಇದ್ದರಷ್ಟೆ ಮನುಷ್ಯನ ದೇಹ ಕೆಲಸ ಮಾಡುವುದು. ಹಾಗೆಯೇ ಪತ್ರಿಕಾ ವಿತರಕರು ಪತ್ರಿಕಾ ಕ್ಷೇತ್ರದ ನರಮಂಡಲ. ಇಡೀ ದೇಶದ ಬೀದಿ ಬೀದಿಗಳಲ್ಲಿ ಓಡಾಡಿ ಸುದ್ದಿ ವಿತರಣೆ ಮಾಡುವ ವಿತರಕರು ಇಲ್ಲದೆ ಮುದ್ರಣಗೊಂಡ ಪತ್ರಿಕೆಗಳಿಗೆ ಮೋಕ್ಷ ಸಿಗುವುದಿಲ್ಲ ಎಂದು ನುಡಿದರು.

ಈ ನರಮಂಡಲಕ್ಕೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಮಾತೃ ಹೃದಯ. ಈ ಬಾರಿಯ ಬಜೆಟ್ ನಲ್ಲೂ ಪತ್ರಿಕಾ ಕಾರ್ಮಿಕರಿಗೆ ಅನುಕೂಲ ಆಗುವ ಭರವಸೆ ಇದೆ ಎಂದು ತಿಳಿಸಿದರು.

CM Siddharamaih ಕಾರ್ಮಿಕ ಇಲಾಖೆಯಿಂದ ಈಗಾಗಲೇ ಸಾಕಷ್ಟು ಸವಲತ್ತುಗಳು ಸಿಗುತ್ತಿವೆ. ಈಗ ಆರೋಗ್ಯ ವಿಮೆಯ ಬೇಡಿಕೆ ಕೂಡ ಈಡೇರಿದೆ. ವಿತರಕರು ಹೆಚ್ಚೆಚ್ಚು ಸಂಘಟಿತರಾದಷ್ಟೂ ತಮ್ಮ ಬೇಡಿಕೆಗಳಿಗೆ ಶಕ್ತಿ ಬರುತ್ತದೆ ಎಂದು ತಿಳಿಸಿದರು.
ಇದೆ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷರಾದ ಎನ್. ಮಾಲತೇಶ್ ಭದ್ರಾವತಿ ತಾಲೂಕ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಪ್ರಧಾನ ಕಾರ್ಯದರ್ಶಿಯಾದ ಪರಶುರಾಮ್ ರಾವ್ ಅವರಿಗೆ ಗೌರವಿಸಿ ಸನ್ಮಾನಿಸಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...

Shivamogga News ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಸ್ಫೂರ್ತಿ ರೂಢಿಸಿಕೊಳ್ಳಬೇಕು: ಶ್ರೀ ಚಂದ್ರಪ್ಪ ಎಸ್. ಗುಂಡಪಲ್ಲಿ

Shivamogga News ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ...