Thursday, March 26, 2026
Thursday, March 26, 2026

Department of Animal Husbandry and Veterinary Services ಹಕ್ಕಿಜ್ವರ ಹರಡದಂತೆ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ‌ಕ್ರಮ‌ ಕೈಗೊಳ್ಳಲಾಗಿದೆ- ಡಾ. ಎ.ಬಾಬುರತ್ನ

Date:

Department of Animal Husbandry and Veterinary Services ರಾಜ್ಯದ ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲೂ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಾಗಬಾರದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಡಳಿತ ಉಪ ನಿರ್ದೇಶಕ ಡಾ.ಎ.ಬಾಬುರತ್ನ ತಿಳಿಸಿದರು.

ಸೋಮವಾರ ನಗರದ ಇಲಾಖೆಯ ಕಚೇರಿಯಲ್ಲಿ ಸಂಜೆ 5 ಗಂಟೆಗೆ ಪಶುಸಂಗೋಪನಾ ಹಾಗೂ ರೇಷ್ಮೆ ಸಚಿವರ ಅಧ್ಯಕ್ಷತೆಯಲ್ಲಿ ಏರ್ಪಡಿಸಿದ್ದ ವರ್ಚುವಲ್ ಸಭೆಯಲ್ಲಿ ಅವರ ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು 332 ಕೋಳಿ ಫಾರಂಗಳಿದ್ದು, ಈ ಫಾರಂಗಳಲ್ಲಿ ಒಟ್ಟು 1741650 ಕೋಳಿಗಳ ಸಾಕಾಣಿಕ ಮಾಡಲಾಗಿದೆ. ಆದರೂ ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ಹಕ್ಕಿಜ್ವರ ಪ್ರಕರಣ ವರದಿಯಾಗಿಲ್ಲ. ಈಗಾಗಲೇ ಹಕ್ಕಿಜ್ವರ ಸಂಬಂಧಿಸಿದಂತೆ ಕಣ್ಗಾವಲು ಕಾರ್ಯಕ್ರಮವನ್ನು ನಡೆಸುತ್ತಿದ್ದು, ಈ ವರ್ಷದಲ್ಲಿ 476 ಕೋಳಿಗಳ ಮಾದರಿಗಳನ್ನು ತಪಾಸಣೆಗೆ ಒಳಪಡಿಸಲಾಗಿದೆ.

ಜಿಲ್ಲೆಯಾದ್ಯಂತ 29 ರ‍್ಯಾಪಿಡ್ ರೆಸ್ಪಾನ್ಸ್ ಟೀಮ್‌ಗಳನ್ನು ಮಾಡಿದ್ದು, ಎಲ್ಲಾ ಕೋಳಿ ಫಾರಂಗಳ ಮೇಲೆ ನಿಗಾ ವಹಿಸಲು ಸೂಚಿಸಲಾಗಿದೆ. ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡುವಂತೆ ಮತ್ತು ಅಸಹಜ ಹಾಗೂ ಸಾಮೂಹಿಕ ಕೋಳಿಗಳು ಸಾವನ್ನಪ್ಪಿದರೆ ಕೂಡಲೇ ಕೋಳಿ ಫಾರಂ ಮಾಲೀಕರಿಗೆ ಹಾಗೂ ಸಾರ್ವಜನಿಕರು ಹತ್ತಿರದ ಪಶುವೈದ್ಯ ಸಂಸ್ಥೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ ಅವರು ಪ್ರಕರಣ ಕಂಡಬಂದಲ್ಲಿ ತಕ್ಷಣ ವೈಜ್ಞಾನಿಕ ವಿಲೇವಾರಿಗೂ ಕೂಡ ತಯಾರಿ ಮಾಡಕೊಳ್ಳಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...