Sunday, December 7, 2025
Sunday, December 7, 2025

Department of Animal Husbandry and Veterinary Services ಹಕ್ಕಿಜ್ವರ ಹರಡದಂತೆ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ‌ಕ್ರಮ‌ ಕೈಗೊಳ್ಳಲಾಗಿದೆ- ಡಾ. ಎ.ಬಾಬುರತ್ನ

Date:

Department of Animal Husbandry and Veterinary Services ರಾಜ್ಯದ ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲೂ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಾಗಬಾರದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಡಳಿತ ಉಪ ನಿರ್ದೇಶಕ ಡಾ.ಎ.ಬಾಬುರತ್ನ ತಿಳಿಸಿದರು.

ಸೋಮವಾರ ನಗರದ ಇಲಾಖೆಯ ಕಚೇರಿಯಲ್ಲಿ ಸಂಜೆ 5 ಗಂಟೆಗೆ ಪಶುಸಂಗೋಪನಾ ಹಾಗೂ ರೇಷ್ಮೆ ಸಚಿವರ ಅಧ್ಯಕ್ಷತೆಯಲ್ಲಿ ಏರ್ಪಡಿಸಿದ್ದ ವರ್ಚುವಲ್ ಸಭೆಯಲ್ಲಿ ಅವರ ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು 332 ಕೋಳಿ ಫಾರಂಗಳಿದ್ದು, ಈ ಫಾರಂಗಳಲ್ಲಿ ಒಟ್ಟು 1741650 ಕೋಳಿಗಳ ಸಾಕಾಣಿಕ ಮಾಡಲಾಗಿದೆ. ಆದರೂ ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ಹಕ್ಕಿಜ್ವರ ಪ್ರಕರಣ ವರದಿಯಾಗಿಲ್ಲ. ಈಗಾಗಲೇ ಹಕ್ಕಿಜ್ವರ ಸಂಬಂಧಿಸಿದಂತೆ ಕಣ್ಗಾವಲು ಕಾರ್ಯಕ್ರಮವನ್ನು ನಡೆಸುತ್ತಿದ್ದು, ಈ ವರ್ಷದಲ್ಲಿ 476 ಕೋಳಿಗಳ ಮಾದರಿಗಳನ್ನು ತಪಾಸಣೆಗೆ ಒಳಪಡಿಸಲಾಗಿದೆ.

ಜಿಲ್ಲೆಯಾದ್ಯಂತ 29 ರ‍್ಯಾಪಿಡ್ ರೆಸ್ಪಾನ್ಸ್ ಟೀಮ್‌ಗಳನ್ನು ಮಾಡಿದ್ದು, ಎಲ್ಲಾ ಕೋಳಿ ಫಾರಂಗಳ ಮೇಲೆ ನಿಗಾ ವಹಿಸಲು ಸೂಚಿಸಲಾಗಿದೆ. ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡುವಂತೆ ಮತ್ತು ಅಸಹಜ ಹಾಗೂ ಸಾಮೂಹಿಕ ಕೋಳಿಗಳು ಸಾವನ್ನಪ್ಪಿದರೆ ಕೂಡಲೇ ಕೋಳಿ ಫಾರಂ ಮಾಲೀಕರಿಗೆ ಹಾಗೂ ಸಾರ್ವಜನಿಕರು ಹತ್ತಿರದ ಪಶುವೈದ್ಯ ಸಂಸ್ಥೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ ಅವರು ಪ್ರಕರಣ ಕಂಡಬಂದಲ್ಲಿ ತಕ್ಷಣ ವೈಜ್ಞಾನಿಕ ವಿಲೇವಾರಿಗೂ ಕೂಡ ತಯಾರಿ ಮಾಡಕೊಳ್ಳಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...